ನನ್ನ ವಿರುದ್ಧ ಪ್ರತಿಭಟನೆ ಮಾಡುವುದಕ್ಕಿಂತ ಮೊದಲು ರಾತ್ರಿ 10:30 ರ ಸಮಯದಲ್ಲಿ ಸಕ್ಕರೆಗೊಲ್ಲಹಳ್ಳಿ ಗ್ರಾಮದಲ್ಲಿ ಶಾಸಕರ ಸಂಬಂಧಿಕರಾದ ಕೇಶವ್, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಸೇರಿದಂತೆ ಹಾಲಿ ಅಧ್ಯಕ್ಷರು ಸೇರಿ ಸಭೆ ಮಾಡಿ ಮರುದಿನ ಪೂರ್ವಯೋಜಿತವಾಗಿ ಸಹೋದರರ ಸಮಾನರಾದ ದಲಿತರನ್ನು ಹಾಗೂ ಸಂಘಟನೆಗಳನ್ನ ಒಗ್ಗೂಡಿಸಿ ನನ್ನ ವಿರುದ್ಧ ಸುಖಾಸುಮ್ಮನೆ ಪ್ರತಿಭಟನೆ ಮಾಡಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ರುದ್ರಮೂರ್ತಿ ಹೇಳಿದರು.
ದೊಡ್ಡಬೆಳವಂಗಲ ಹೋಬಳಿಯ ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂಚನಹಳ್ಳಿ ದಲಿತ ಸಮುದಯಕ್ಕೆ ಸೇರಿದ ಗ್ರಾಮಠಾಣಾ ಜಾಗವನ್ನು ಮಾಜಿ ಅಧ್ಯಕ್ಷರ ಪತಿ ರುದ್ರಮೂರ್ತಿ ಎಂಬುವರು ಪಿಡಿಒ ಮುನಿರಾಜು ಅವರಿಗೆ ಹಣದ ಆಮಿಷ ಒಡ್ಡಿ ನಕಲಿ ದಾಖಲೆ ಸೃಷ್ಟಿ ಮಾಡಿರುತ್ತಾರೆ, ಹಾಗೂ ನಕಲಿ ದಾಖಲೆಯ ಮೇಲೆ ಸದರಿ ಜಾಗಕ್ಕೆ ಅತಿಕ್ರಮ ಪ್ರವೇಶ ಮಾಡಿರುತ್ತಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಬಸವರಾಜ್ ಅವರು ಆರೋಪ ಮಾಡಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಪಂಚಾಯಿತಿ ಎದುರು ಧರಣಿ ನಡೆಸಿದ್ದರು. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆ ಜಮೀನಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವ ದಾಖಲೆಗಳು ಇಲ್ಲ, ಲಿಂಗಯ್ಯ, ಮುನಿಮುತ್ತಯ್ಯ ಎಂಬ ಸಹೋದರರ ಹೆಸರಿನಲ್ಲಿದೆ. ದಲಿತರ ಭೂಮಿ ಎಂಬುದಕ್ಕೆ ಅವರಲ್ಲಿ ಯಾವ ಸೂಕ್ತ ದಾಖಲೆಗಳು ಏನಿದೆ? ಅವರ ಬಳಿ ಯಾವ ನಿಖರವಾದ ದಾಖಲೆ ಇಲ್ಲದೆ ನನ್ನ ವಿರುದ್ಧ ಅಪಪ್ರಚಾರ ಮಾಡಿದ್ದಾರೆ ಎಂದು ಕಿಡಿಕಾರಿದರು.
ಗ್ರಾಮ ಪಂಚಾಯತಿ ಅಭಿವೃದ್ಧಿಗೆ ಬಿಬಿಎಂಪಿಯಿಂದ ಬಿಡುಗಡೆಯಾಗಿದ್ದ ಅನುದಾನದಲ್ಲಿ 17ಲಕ್ಷ ಗ್ರಾಮ ಪಂಚಾಯಿತಿ ಖಾತೆಯಲ್ಲಿ ಇತ್ತು. ಅದು ಈಗ ಏನಾಗಿದೆ. ಯಾವ ಅಭಿವೃದ್ಧಿಗೆ ಅನುದಾನ ಬಳಸಿಕೊಂಡಿದ್ದಾರೆ ಎಂದು ಪ್ರಶ್ನೆ ಮಾಡಿದರು.
ಕೋನೇನಹಳ್ಳಿಯ ಗಾಣಗಪ್ಪನಕಟ್ಟೆ ದುರಸ್ತಿಗೆ 15ನೇ ಹಣಕಾಸು ಆಯೋಗದಿಂದ ಮಂಜೂರಾಗಿದ್ದ 10 ಲಕ್ಷ ರೂ. ಹಣ ಗುಳುಂ ಮಾಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನೀಲಿ ನಕಾಶೆಯಲ್ಲಿ ಕೇವಲ 50ಸಾವಿರ ಮಾತ್ರ ಇದೆ. ಆದರೆ ಆರೋಪ ಮಾಡಿರುವುದು 10ಲಕ್ಷ, ಇಲ್ಲೇ ಗೊತ್ತಾಗುತ್ತದೆ ಸುಖಾಸುಮ್ಮನೆ ಮಾಡಲಾದ ಸುಳ್ಳು ಆರೋಪ ಎಂದು ಹೇಳಿದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…