ದೊಡ್ಡಬೆಳವಂಗಲ ಹೋಬಳಿಯ ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂಚನಹಳ್ಳಿ ದಲಿತ ಸಮುದಯಕ್ಕೆ ಸೇರಿದ ಗ್ರಾಮಠಾಣಾ ಜಾಗವನ್ನು ಮಾಜಿ ಅಧ್ಯಕ್ಷರ ಪತಿ ರುದ್ರಮೂರ್ತಿ ಎಂಬುವರು ಪಿಡಿಒ ಮುನಿರಾಜು ಅವರಿಗೆ ಹಣದ ಆಮಿಷ ಒಡ್ಡಿ ನಕಲಿ ದಾಖಲೆ ಸೃಷ್ಟಿ ಮಾಡಿರುತ್ತಾರೆ, ಹಾಗೂ ನಕಲಿ ದಾಖಲೆಯ ಮೇಲೆ ಸದರಿ ಜಾಗಕ್ಕೆ ಅತಿಕ್ರಮ ಪ್ರವೇಶ ಮಾಡಿರುತ್ತಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಬಸವರಾಜ್ ಆರೋಪಿಸಿದರು.
ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ಬೂಚನಹಳ್ಳಿ ಗ್ರಾಮದ ಗ್ರಾಮ ಠಾಣಾ ಸ.132/116ರ ಪೈಕಿ 2 ಎಕರೆ 20 ಗುಂಟೆ ಜಾಗವನ್ನು ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿಕೊಂಡು ಭೂ ಕಬಳಿಕೆ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರ ಪತಿ ರುದ್ರಮೂರ್ತಿ ಹಾಗೂ ಬೋಗಸ್ ಇ ಖಾತಾ ಮಾಡಿಕೊಡಲಾಗಿದೆ ಎಂಬ ಆರೋಪದ ಮೇಲೆ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಪಿಡಿಒ ಮುನಿರಾಜು ವಿರುದ್ಧ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಹಾಗೂ ಸ್ಥಳೀಯ ಗ್ರಾಮಸ್ಥರ ಸಹಯೋಗದೊಂದಿಗೆ ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಎದುರು ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.
ಗ್ರಾಮ ಪಂಚಾಯಿತಿ ಅಭಿವೃದ್ಧಿಗಾಗಿ ಮಂಜೂರಾಗಿದ್ದ ಹಲವು ಅನುದಾನಗಳನ್ನು ದುರ್ಬಳಕೆ ಮಾಡಲಾಗಿದೆ. ಸಕ್ಕರೆ ಗೊಲ್ಲಹಳ್ಳಿ ಗ್ರಾಮದ ಪರಿಶಿಷ್ಠ ಕಾಲೋನಿಯಲ್ಲಿ ಒಳಚರಂಡಿ ಕಾಮಗಾರಿ ಕಳಪೆ ಮಾಡಲಾಗಿದ್ದು, ಕೂಡಲೇ ಗುಣಮಟ್ಟ ಪರಿಶೀಲನೆ ಆಗಬೇಕಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ಕಾಳೇನಹಳ್ಳಿ ಕೆರೆಯಲ್ಲಿ ಮಣ್ಣು ಮಾರಾಟ ಮಾಡಲಾಗುತ್ತಿದೆ ಕೂಡಲೇ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ತನಿಖೆ ಕೈಗೊಂಡು ತಪ್ಪು ಮಾಡಿದವರಿಗೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…