ದೊಡ್ಡಬೆಳವಂಗಲ ಹೋಬಳಿಯ ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂಚನಹಳ್ಳಿ ದಲಿತ ಸಮುದಯಕ್ಕೆ ಸೇರಿದ ಗ್ರಾಮಠಾಣಾ ಜಾಗವನ್ನು ಮಾಜಿ ಅಧ್ಯಕ್ಷರ ಪತಿ ರುದ್ರಮೂರ್ತಿ ಎಂಬುವರು ಪಿಡಿಒ ಮುನಿರಾಜು ಅವರಿಗೆ ಹಣದ ಆಮಿಷ ಒಡ್ಡಿ ನಕಲಿ ದಾಖಲೆ ಸೃಷ್ಟಿ ಮಾಡಿರುತ್ತಾರೆ, ಹಾಗೂ ನಕಲಿ ದಾಖಲೆಯ ಮೇಲೆ ಸದರಿ ಜಾಗಕ್ಕೆ ಅತಿಕ್ರಮ ಪ್ರವೇಶ ಮಾಡಿರುತ್ತಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಬಸವರಾಜ್ ಆರೋಪಿಸಿದರು.
ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ಬೂಚನಹಳ್ಳಿ ಗ್ರಾಮದ ಗ್ರಾಮ ಠಾಣಾ ಸ.132/116ರ ಪೈಕಿ 2 ಎಕರೆ 20 ಗುಂಟೆ ಜಾಗವನ್ನು ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿಕೊಂಡು ಭೂ ಕಬಳಿಕೆ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರ ಪತಿ ರುದ್ರಮೂರ್ತಿ ಹಾಗೂ ಬೋಗಸ್ ಇ ಖಾತಾ ಮಾಡಿಕೊಡಲಾಗಿದೆ ಎಂಬ ಆರೋಪದ ಮೇಲೆ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಪಿಡಿಒ ಮುನಿರಾಜು ವಿರುದ್ಧ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಹಾಗೂ ಸ್ಥಳೀಯ ಗ್ರಾಮಸ್ಥರ ಸಹಯೋಗದೊಂದಿಗೆ ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಎದುರು ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.
ಗ್ರಾಮ ಪಂಚಾಯಿತಿ ಅಭಿವೃದ್ಧಿಗಾಗಿ ಮಂಜೂರಾಗಿದ್ದ ಹಲವು ಅನುದಾನಗಳನ್ನು ದುರ್ಬಳಕೆ ಮಾಡಲಾಗಿದೆ. ಸಕ್ಕರೆ ಗೊಲ್ಲಹಳ್ಳಿ ಗ್ರಾಮದ ಪರಿಶಿಷ್ಠ ಕಾಲೋನಿಯಲ್ಲಿ ಒಳಚರಂಡಿ ಕಾಮಗಾರಿ ಕಳಪೆ ಮಾಡಲಾಗಿದ್ದು, ಕೂಡಲೇ ಗುಣಮಟ್ಟ ಪರಿಶೀಲನೆ ಆಗಬೇಕಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ಕಾಳೇನಹಳ್ಳಿ ಕೆರೆಯಲ್ಲಿ ಮಣ್ಣು ಮಾರಾಟ ಮಾಡಲಾಗುತ್ತಿದೆ ಕೂಡಲೇ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ತನಿಖೆ ಕೈಗೊಂಡು ತಪ್ಪು ಮಾಡಿದವರಿಗೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…