ನಕಲಿ ದಾಖಲೆ ಸೃಷ್ಟಿಸಿ ದಲಿತರ ಜಾಗ ಕಬಳಿಕೆ ಆರೋಪ: ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಡಿಎಸ್ ಎಸ್ ಧರಣಿ

ದೊಡ್ಡಬೆಳವಂಗಲ ಹೋಬಳಿಯ ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂಚನಹಳ್ಳಿ ದಲಿತ ಸಮುದಯಕ್ಕೆ ಸೇರಿದ ಗ್ರಾಮಠಾಣಾ ಜಾಗವನ್ನು ಮಾಜಿ ಅಧ್ಯಕ್ಷರ ಪತಿ ರುದ್ರಮೂರ್ತಿ ಎಂಬುವರು ಪಿಡಿಒ ಮುನಿರಾಜು ಅವರಿಗೆ ಹಣದ ಆಮಿಷ ಒಡ್ಡಿ ನಕಲಿ ದಾಖಲೆ ಸೃಷ್ಟಿ ಮಾಡಿರುತ್ತಾರೆ, ಹಾಗೂ ನಕಲಿ ದಾಖಲೆಯ ಮೇಲೆ ಸದರಿ ಜಾಗಕ್ಕೆ ಅತಿಕ್ರಮ ಪ್ರವೇಶ ಮಾಡಿರುತ್ತಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಬಸವರಾಜ್ ಆರೋಪಿಸಿದರು.

ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ಬೂಚನಹಳ್ಳಿ ಗ್ರಾಮದ ಗ್ರಾಮ ಠಾಣಾ ಸ.132/116ರ ಪೈಕಿ 2 ಎಕರೆ 20 ಗುಂಟೆ ಜಾಗವನ್ನು ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿಕೊಂಡು ಭೂ ಕಬಳಿಕೆ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರ ಪತಿ ರುದ್ರಮೂರ್ತಿ ಹಾಗೂ ಬೋಗಸ್ ಇ ಖಾತಾ ಮಾಡಿಕೊಡಲಾಗಿದೆ ಎಂಬ ಆರೋಪದ ಮೇಲೆ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಪಿಡಿಒ ಮುನಿರಾಜು ವಿರುದ್ಧ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಹಾಗೂ ಸ್ಥಳೀಯ ಗ್ರಾಮಸ್ಥರ ಸಹಯೋಗದೊಂದಿಗೆ ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಎದುರು ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.

ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರ ಪತಿ ರುದ್ರಮೂರ್ತಿ ಒಳಗೊಂಡಂತೆ ಪಿಡಿಒ ಮುನಿರಾಜು ವಿರುದ್ಧ ತನಿಖೆ ಕೈಗೊಂಡು ಕಾನೂನು ರೀತಿಯ ಕ್ರಮ ಕೈಗೊಳ್ಳಲು ಕೋರಿ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿಗಾಗಿ ಮಂಜೂರಾಗಿದ್ದ ಹಲವು ಅನುದಾನಗಳನ್ನು ದುರ್ಬಳಕೆ ಮಾಡಲಾಗಿದೆ. ಸಕ್ಕರೆ ಗೊಲ್ಲಹಳ್ಳಿ ಗ್ರಾಮದ ಪರಿಶಿಷ್ಠ ಕಾಲೋನಿಯಲ್ಲಿ ಒಳಚರಂಡಿ ಕಾಮಗಾರಿ ಕಳಪೆ ಮಾಡಲಾಗಿದ್ದು, ಕೂಡಲೇ ಗುಣಮಟ್ಟ ಪರಿಶೀಲನೆ ಆಗಬೇಕಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ಕಾಳೇನಹಳ್ಳಿ ಕೆರೆಯಲ್ಲಿ ಮಣ್ಣು ಮಾರಾಟ ಮಾಡಲಾಗುತ್ತಿದೆ ಕೂಡಲೇ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ತನಿಖೆ ಕೈಗೊಂಡು ತಪ್ಪು ಮಾಡಿದವರಿಗೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಬಸವರಾಜು, ನೆಲಮಂಗಲ ತಾಲ್ಲೂಕು ಸಂಚಾಲಕರಾದ ಬರದಿ ಹನುಮಂತರಾಯಪ್ಪ, ಜಿಲ್ಲಾ ಸಂಚಾಲಕರಾದ ದೊಡ್ಡಯ್ಯ ಲಿಂಗಪುರ, ಜಿಲ್ಲಾ ಸಂಘಟನಾ ಸಂಚಾಲಕರಾದ ನರೇಂದ್ರ ಮೂರ್ತಿ ಮಾಡೇಶ್ವರ, ಆನಂದ್ ಸಕ್ಕರೆಗೊಲ್ಲಹಳ್ಳಿ, ಹನುಮಂತಯ್ಯ, ಹನುಮಯ್ಯ, ರಾಮು ನೇರಳೆಘಟ್ಟ , ಮಹಿಳಾ ಸಂಚಾಲಕರಾದ ಕಮಲಮ್ಮ, ನಾಗರತ್ನಮ್ಮ, ಸರಸ್ವತಿ, ರತ್ನಮ್ಮ , ಚಲವಾದಿ ಮಹಾಸಭಾ ಅಧ್ಯಕ್ಷರಾದ ಉದಯಶಂಕರ್,  ಎಲ್.ಎನ್ .ಮೂರ್ತಿ ಹಾಗೂ ಸ್ಥಳಿಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

21 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago