ನಕಲಿ ದಾಖಲೆ ಸೃಷ್ಟಿಸಿ ದಲಿತರ ಜಾಗ ಕಬಳಿಕೆ ಆರೋಪ: ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಡಿಎಸ್ ಎಸ್ ಧರಣಿ

ದೊಡ್ಡಬೆಳವಂಗಲ ಹೋಬಳಿಯ ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂಚನಹಳ್ಳಿ ದಲಿತ ಸಮುದಯಕ್ಕೆ ಸೇರಿದ ಗ್ರಾಮಠಾಣಾ ಜಾಗವನ್ನು ಮಾಜಿ ಅಧ್ಯಕ್ಷರ ಪತಿ ರುದ್ರಮೂರ್ತಿ ಎಂಬುವರು ಪಿಡಿಒ ಮುನಿರಾಜು ಅವರಿಗೆ ಹಣದ ಆಮಿಷ ಒಡ್ಡಿ ನಕಲಿ ದಾಖಲೆ ಸೃಷ್ಟಿ ಮಾಡಿರುತ್ತಾರೆ, ಹಾಗೂ ನಕಲಿ ದಾಖಲೆಯ ಮೇಲೆ ಸದರಿ ಜಾಗಕ್ಕೆ ಅತಿಕ್ರಮ ಪ್ರವೇಶ ಮಾಡಿರುತ್ತಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಬಸವರಾಜ್ ಆರೋಪಿಸಿದರು.

ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ಬೂಚನಹಳ್ಳಿ ಗ್ರಾಮದ ಗ್ರಾಮ ಠಾಣಾ ಸ.132/116ರ ಪೈಕಿ 2 ಎಕರೆ 20 ಗುಂಟೆ ಜಾಗವನ್ನು ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿಕೊಂಡು ಭೂ ಕಬಳಿಕೆ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರ ಪತಿ ರುದ್ರಮೂರ್ತಿ ಹಾಗೂ ಬೋಗಸ್ ಇ ಖಾತಾ ಮಾಡಿಕೊಡಲಾಗಿದೆ ಎಂಬ ಆರೋಪದ ಮೇಲೆ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಪಿಡಿಒ ಮುನಿರಾಜು ವಿರುದ್ಧ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಹಾಗೂ ಸ್ಥಳೀಯ ಗ್ರಾಮಸ್ಥರ ಸಹಯೋಗದೊಂದಿಗೆ ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಎದುರು ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.

ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರ ಪತಿ ರುದ್ರಮೂರ್ತಿ ಒಳಗೊಂಡಂತೆ ಪಿಡಿಒ ಮುನಿರಾಜು ವಿರುದ್ಧ ತನಿಖೆ ಕೈಗೊಂಡು ಕಾನೂನು ರೀತಿಯ ಕ್ರಮ ಕೈಗೊಳ್ಳಲು ಕೋರಿ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿಗಾಗಿ ಮಂಜೂರಾಗಿದ್ದ ಹಲವು ಅನುದಾನಗಳನ್ನು ದುರ್ಬಳಕೆ ಮಾಡಲಾಗಿದೆ. ಸಕ್ಕರೆ ಗೊಲ್ಲಹಳ್ಳಿ ಗ್ರಾಮದ ಪರಿಶಿಷ್ಠ ಕಾಲೋನಿಯಲ್ಲಿ ಒಳಚರಂಡಿ ಕಾಮಗಾರಿ ಕಳಪೆ ಮಾಡಲಾಗಿದ್ದು, ಕೂಡಲೇ ಗುಣಮಟ್ಟ ಪರಿಶೀಲನೆ ಆಗಬೇಕಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ಕಾಳೇನಹಳ್ಳಿ ಕೆರೆಯಲ್ಲಿ ಮಣ್ಣು ಮಾರಾಟ ಮಾಡಲಾಗುತ್ತಿದೆ ಕೂಡಲೇ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ತನಿಖೆ ಕೈಗೊಂಡು ತಪ್ಪು ಮಾಡಿದವರಿಗೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಬಸವರಾಜು, ನೆಲಮಂಗಲ ತಾಲ್ಲೂಕು ಸಂಚಾಲಕರಾದ ಬರದಿ ಹನುಮಂತರಾಯಪ್ಪ, ಜಿಲ್ಲಾ ಸಂಚಾಲಕರಾದ ದೊಡ್ಡಯ್ಯ ಲಿಂಗಪುರ, ಜಿಲ್ಲಾ ಸಂಘಟನಾ ಸಂಚಾಲಕರಾದ ನರೇಂದ್ರ ಮೂರ್ತಿ ಮಾಡೇಶ್ವರ, ಆನಂದ್ ಸಕ್ಕರೆಗೊಲ್ಲಹಳ್ಳಿ, ಹನುಮಂತಯ್ಯ, ಹನುಮಯ್ಯ, ರಾಮು ನೇರಳೆಘಟ್ಟ , ಮಹಿಳಾ ಸಂಚಾಲಕರಾದ ಕಮಲಮ್ಮ, ನಾಗರತ್ನಮ್ಮ, ಸರಸ್ವತಿ, ರತ್ನಮ್ಮ , ಚಲವಾದಿ ಮಹಾಸಭಾ ಅಧ್ಯಕ್ಷರಾದ ಉದಯಶಂಕರ್,  ಎಲ್.ಎನ್ .ಮೂರ್ತಿ ಹಾಗೂ ಸ್ಥಳಿಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 hour ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago