ನಕಲಿ ದಾಖಲೆ ಸೃಷ್ಟಿಸಿ ಸುಮಾರು ₹40 ಕೋಟಿ ಮೌಲ್ಯದ ಜಮೀನು ಕಬಳಿಕೆ: ಸರ್ಕಾರದ ವಶಕ್ಕೆಪಡೆದ ಡಿಸಿ

ದೊಡ್ಡಬಳ್ಳಾಪುರ: ನಗರದ ಅಂಚಿನ ಅರೆಹಳ್ಳಿಗುಡ್ಡದಹಳ್ಳಿ ಗ್ರಾಮದ ಸರ್ವೆ ನಂಬರ್ 57ಕ್ಕೆ ಸೇರಿದ 6 ಎಕರೆ ಗೋಮಾಳ ಜಮೀನಿಗೆ ನಕಲಿ ದಾಖಲೆ ಸೃಷಿಸಿಕೊಂಡು ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದ ಕೆ.ಬಿ.ಮುದ್ದಪ್ಪ, ಪುರುಷೋತ್ತಮಗೌಡ,ಕೆ.ಬಿ.ಹನುಮಂತರಾಯಪ್ಪ, ಎಂ.ಮುನಿರಾಜು ಅವರ ಹಪಣಿಯನ್ನು ವಜಾಕರಿಸುವ ಮೂಲಕ ಸರ್ಕಾರದ ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಸೆಪ್ಟೆಂಬರ್ 2 ರಂದು ಮಾಡಿರುವ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ಜಿಲ್ಲಾಧಿಕಾರಿಗಳು ಸರ್ಕಾರದ ವಶಕ್ಕೆ ಪಡೆದಿರುವ ಜಮೀನಿನ ಈಗಿನ ಮಾರುಕಟ್ಟೆ ಮೌಲ್ಯ ಸುಮಾರು ₹40 ಕೋಟಿ ಬೆಲೆ ಬಾಳಲಿದೆ. ಸರ್ಕಾರದ ವಶಕ್ಕೆ ಪಡೆದಿರುವ 6 ಎಕರೆ ಜಮೀನು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಅಂಚಿನಲ್ಲೆ ಇದೆ. ಅಲ್ಲದೆ ರಾಷ್ಟ್ರ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ ತರಬೇತಿ ಕೇಂದ್ರದ ಪಕ್ಕದಲ್ಲೇ ಇದೆ.

ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಿರುವ ಮಾಹಿತಿಯಂತೆ ಗೋಮಾಳ ಜಮೀನು ಕಬಳಿಸಲು ಈ ಹಿಂದೆ ತಾಲ್ಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿರುವ ಕಂದಾಯ ಅಧಿಕಾರಿಗಳು ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕಚೇರಿಯಲ್ಲಿನ ದಾಖಲೆಗಳನ್ನು ಪರಿಶೀಲಿಸನೆ ಮಾಡದೆ ಆದೇಶ ಮಾಡುವ ಮೂಲಕ ಕೋಟ್ಯಾಂತರ ರೂಪಾಯಿ ಮೌಲ್ಯದ ಜಮೀನು ಕಬಳಿಸಲು ಸಹಕರಿಸಿದ್ದಾರೆ ಎಂದು ವಿವರಿಸಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿಕೊಂಡಿರುವ ಜಮೀನಿನಲ್ಲಿ 1998 ರಿಂದಲು ರಾಗಿ ಬೆಳೆ ಬೆಳೆಯುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಗೂಗಲ್ ನಕ್ಷೆ ಪರಿಶೀಲನೆಯಲ್ಲಿ 2024ರವರೆಗೂ ಸರ್ವೇ ನಂಬರ್ 57 ರಲ್ಲಿ ಯಾವುದೇ ಬೆಳೆಯನ್ನು ಬೆಳೆಯದೆ ಇರುವುದು ಕಂಡು ಬಂದಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಸರ್ವೇ ನಂಬರ್ 57ರಲ್ಲಿನ ಗೋಮಾಳ ಜಮೀನು ಕಬಳಿಕೆ ವಿರುದ್ಧ ಹಲವಾರು ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳಿಗೆ ಲಿಖಿತ ದೂರುಗಳನ್ನು ಸಲ್ಲಿಸಿದ್ದರು.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

11 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

11 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

13 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

21 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

23 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago