ನಕಲಿ ದಾಖಲೆ ಸೃಷ್ಟಿಸಿ ಸುಮಾರು ₹40 ಕೋಟಿ ಮೌಲ್ಯದ ಜಮೀನು ಕಬಳಿಕೆ: ಸರ್ಕಾರದ ವಶಕ್ಕೆಪಡೆದ ಡಿಸಿ

ದೊಡ್ಡಬಳ್ಳಾಪುರ: ನಗರದ ಅಂಚಿನ ಅರೆಹಳ್ಳಿಗುಡ್ಡದಹಳ್ಳಿ ಗ್ರಾಮದ ಸರ್ವೆ ನಂಬರ್ 57ಕ್ಕೆ ಸೇರಿದ 6 ಎಕರೆ ಗೋಮಾಳ ಜಮೀನಿಗೆ ನಕಲಿ ದಾಖಲೆ ಸೃಷಿಸಿಕೊಂಡು ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದ ಕೆ.ಬಿ.ಮುದ್ದಪ್ಪ, ಪುರುಷೋತ್ತಮಗೌಡ,ಕೆ.ಬಿ.ಹನುಮಂತರಾಯಪ್ಪ, ಎಂ.ಮುನಿರಾಜು ಅವರ ಹಪಣಿಯನ್ನು ವಜಾಕರಿಸುವ ಮೂಲಕ ಸರ್ಕಾರದ ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಸೆಪ್ಟೆಂಬರ್ 2 ರಂದು ಮಾಡಿರುವ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ಜಿಲ್ಲಾಧಿಕಾರಿಗಳು ಸರ್ಕಾರದ ವಶಕ್ಕೆ ಪಡೆದಿರುವ ಜಮೀನಿನ ಈಗಿನ ಮಾರುಕಟ್ಟೆ ಮೌಲ್ಯ ಸುಮಾರು ₹40 ಕೋಟಿ ಬೆಲೆ ಬಾಳಲಿದೆ. ಸರ್ಕಾರದ ವಶಕ್ಕೆ ಪಡೆದಿರುವ 6 ಎಕರೆ ಜಮೀನು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಅಂಚಿನಲ್ಲೆ ಇದೆ. ಅಲ್ಲದೆ ರಾಷ್ಟ್ರ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ ತರಬೇತಿ ಕೇಂದ್ರದ ಪಕ್ಕದಲ್ಲೇ ಇದೆ.

ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಿರುವ ಮಾಹಿತಿಯಂತೆ ಗೋಮಾಳ ಜಮೀನು ಕಬಳಿಸಲು ಈ ಹಿಂದೆ ತಾಲ್ಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿರುವ ಕಂದಾಯ ಅಧಿಕಾರಿಗಳು ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕಚೇರಿಯಲ್ಲಿನ ದಾಖಲೆಗಳನ್ನು ಪರಿಶೀಲಿಸನೆ ಮಾಡದೆ ಆದೇಶ ಮಾಡುವ ಮೂಲಕ ಕೋಟ್ಯಾಂತರ ರೂಪಾಯಿ ಮೌಲ್ಯದ ಜಮೀನು ಕಬಳಿಸಲು ಸಹಕರಿಸಿದ್ದಾರೆ ಎಂದು ವಿವರಿಸಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿಕೊಂಡಿರುವ ಜಮೀನಿನಲ್ಲಿ 1998 ರಿಂದಲು ರಾಗಿ ಬೆಳೆ ಬೆಳೆಯುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಗೂಗಲ್ ನಕ್ಷೆ ಪರಿಶೀಲನೆಯಲ್ಲಿ 2024ರವರೆಗೂ ಸರ್ವೇ ನಂಬರ್ 57 ರಲ್ಲಿ ಯಾವುದೇ ಬೆಳೆಯನ್ನು ಬೆಳೆಯದೆ ಇರುವುದು ಕಂಡು ಬಂದಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಸರ್ವೇ ನಂಬರ್ 57ರಲ್ಲಿನ ಗೋಮಾಳ ಜಮೀನು ಕಬಳಿಕೆ ವಿರುದ್ಧ ಹಲವಾರು ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳಿಗೆ ಲಿಖಿತ ದೂರುಗಳನ್ನು ಸಲ್ಲಿಸಿದ್ದರು.

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

56 minutes ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

1 hour ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

9 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

22 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

24 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

1 day ago