ದೊಡ್ಡಬಳ್ಳಾಪುರ: ನಗರದ ಅಂಚಿನ ಅರೆಹಳ್ಳಿಗುಡ್ಡದಹಳ್ಳಿ ಗ್ರಾಮದ ಸರ್ವೆ ನಂಬರ್ 57ಕ್ಕೆ ಸೇರಿದ 6 ಎಕರೆ ಗೋಮಾಳ ಜಮೀನಿಗೆ ನಕಲಿ ದಾಖಲೆ ಸೃಷಿಸಿಕೊಂಡು ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದ ಕೆ.ಬಿ.ಮುದ್ದಪ್ಪ, ಪುರುಷೋತ್ತಮಗೌಡ,ಕೆ.ಬಿ.ಹನುಮಂತರಾಯಪ್ಪ, ಎಂ.ಮುನಿರಾಜು ಅವರ ಹಪಣಿಯನ್ನು ವಜಾಕರಿಸುವ ಮೂಲಕ ಸರ್ಕಾರದ ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಸೆಪ್ಟೆಂಬರ್ 2 ರಂದು ಮಾಡಿರುವ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ಜಿಲ್ಲಾಧಿಕಾರಿಗಳು ಸರ್ಕಾರದ ವಶಕ್ಕೆ ಪಡೆದಿರುವ ಜಮೀನಿನ ಈಗಿನ ಮಾರುಕಟ್ಟೆ ಮೌಲ್ಯ ಸುಮಾರು ₹40 ಕೋಟಿ ಬೆಲೆ ಬಾಳಲಿದೆ. ಸರ್ಕಾರದ ವಶಕ್ಕೆ ಪಡೆದಿರುವ 6 ಎಕರೆ ಜಮೀನು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಅಂಚಿನಲ್ಲೆ ಇದೆ. ಅಲ್ಲದೆ ರಾಷ್ಟ್ರ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ ತರಬೇತಿ ಕೇಂದ್ರದ ಪಕ್ಕದಲ್ಲೇ ಇದೆ.
ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಿರುವ ಮಾಹಿತಿಯಂತೆ ಗೋಮಾಳ ಜಮೀನು ಕಬಳಿಸಲು ಈ ಹಿಂದೆ ತಾಲ್ಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿರುವ ಕಂದಾಯ ಅಧಿಕಾರಿಗಳು ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕಚೇರಿಯಲ್ಲಿನ ದಾಖಲೆಗಳನ್ನು ಪರಿಶೀಲಿಸನೆ ಮಾಡದೆ ಆದೇಶ ಮಾಡುವ ಮೂಲಕ ಕೋಟ್ಯಾಂತರ ರೂಪಾಯಿ ಮೌಲ್ಯದ ಜಮೀನು ಕಬಳಿಸಲು ಸಹಕರಿಸಿದ್ದಾರೆ ಎಂದು ವಿವರಿಸಿದ್ದಾರೆ.
ನಕಲಿ ದಾಖಲೆ ಸೃಷ್ಟಿಸಿಕೊಂಡಿರುವ ಜಮೀನಿನಲ್ಲಿ 1998 ರಿಂದಲು ರಾಗಿ ಬೆಳೆ ಬೆಳೆಯುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಗೂಗಲ್ ನಕ್ಷೆ ಪರಿಶೀಲನೆಯಲ್ಲಿ 2024ರವರೆಗೂ ಸರ್ವೇ ನಂಬರ್ 57 ರಲ್ಲಿ ಯಾವುದೇ ಬೆಳೆಯನ್ನು ಬೆಳೆಯದೆ ಇರುವುದು ಕಂಡು ಬಂದಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಸರ್ವೇ ನಂಬರ್ 57ರಲ್ಲಿನ ಗೋಮಾಳ ಜಮೀನು ಕಬಳಿಕೆ ವಿರುದ್ಧ ಹಲವಾರು ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳಿಗೆ ಲಿಖಿತ ದೂರುಗಳನ್ನು ಸಲ್ಲಿಸಿದ್ದರು.
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…
ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…