ನಕಲಿ ದಾಖಲೆ ಸೃಷ್ಟಿಸಿ ಸುಮಾರು ₹40 ಕೋಟಿ ಮೌಲ್ಯದ ಜಮೀನು ಕಬಳಿಕೆ: ಸರ್ಕಾರದ ವಶಕ್ಕೆಪಡೆದ ಡಿಸಿ

ದೊಡ್ಡಬಳ್ಳಾಪುರ: ನಗರದ ಅಂಚಿನ ಅರೆಹಳ್ಳಿಗುಡ್ಡದಹಳ್ಳಿ ಗ್ರಾಮದ ಸರ್ವೆ ನಂಬರ್ 57ಕ್ಕೆ ಸೇರಿದ 6 ಎಕರೆ ಗೋಮಾಳ ಜಮೀನಿಗೆ ನಕಲಿ ದಾಖಲೆ ಸೃಷಿಸಿಕೊಂಡು ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದ ಕೆ.ಬಿ.ಮುದ್ದಪ್ಪ, ಪುರುಷೋತ್ತಮಗೌಡ,ಕೆ.ಬಿ.ಹನುಮಂತರಾಯಪ್ಪ, ಎಂ.ಮುನಿರಾಜು ಅವರ ಹಪಣಿಯನ್ನು ವಜಾಕರಿಸುವ ಮೂಲಕ ಸರ್ಕಾರದ ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಸೆಪ್ಟೆಂಬರ್ 2 ರಂದು ಮಾಡಿರುವ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ಜಿಲ್ಲಾಧಿಕಾರಿಗಳು ಸರ್ಕಾರದ ವಶಕ್ಕೆ ಪಡೆದಿರುವ ಜಮೀನಿನ ಈಗಿನ ಮಾರುಕಟ್ಟೆ ಮೌಲ್ಯ ಸುಮಾರು ₹40 ಕೋಟಿ ಬೆಲೆ ಬಾಳಲಿದೆ. ಸರ್ಕಾರದ ವಶಕ್ಕೆ ಪಡೆದಿರುವ 6 ಎಕರೆ ಜಮೀನು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಅಂಚಿನಲ್ಲೆ ಇದೆ. ಅಲ್ಲದೆ ರಾಷ್ಟ್ರ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ ತರಬೇತಿ ಕೇಂದ್ರದ ಪಕ್ಕದಲ್ಲೇ ಇದೆ.

ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಿರುವ ಮಾಹಿತಿಯಂತೆ ಗೋಮಾಳ ಜಮೀನು ಕಬಳಿಸಲು ಈ ಹಿಂದೆ ತಾಲ್ಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿರುವ ಕಂದಾಯ ಅಧಿಕಾರಿಗಳು ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕಚೇರಿಯಲ್ಲಿನ ದಾಖಲೆಗಳನ್ನು ಪರಿಶೀಲಿಸನೆ ಮಾಡದೆ ಆದೇಶ ಮಾಡುವ ಮೂಲಕ ಕೋಟ್ಯಾಂತರ ರೂಪಾಯಿ ಮೌಲ್ಯದ ಜಮೀನು ಕಬಳಿಸಲು ಸಹಕರಿಸಿದ್ದಾರೆ ಎಂದು ವಿವರಿಸಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿಕೊಂಡಿರುವ ಜಮೀನಿನಲ್ಲಿ 1998 ರಿಂದಲು ರಾಗಿ ಬೆಳೆ ಬೆಳೆಯುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಗೂಗಲ್ ನಕ್ಷೆ ಪರಿಶೀಲನೆಯಲ್ಲಿ 2024ರವರೆಗೂ ಸರ್ವೇ ನಂಬರ್ 57 ರಲ್ಲಿ ಯಾವುದೇ ಬೆಳೆಯನ್ನು ಬೆಳೆಯದೆ ಇರುವುದು ಕಂಡು ಬಂದಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಸರ್ವೇ ನಂಬರ್ 57ರಲ್ಲಿನ ಗೋಮಾಳ ಜಮೀನು ಕಬಳಿಕೆ ವಿರುದ್ಧ ಹಲವಾರು ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳಿಗೆ ಲಿಖಿತ ದೂರುಗಳನ್ನು ಸಲ್ಲಿಸಿದ್ದರು.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

2 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

3 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

4 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

14 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

14 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

17 hours ago