ದೊಡ್ಡಬಳ್ಳಾಪುರ: ನಗರದ ಅಂಚಿನ ಅರೆಹಳ್ಳಿಗುಡ್ಡದಹಳ್ಳಿ ಗ್ರಾಮದ ಸರ್ವೆ ನಂಬರ್ 57ಕ್ಕೆ ಸೇರಿದ 6 ಎಕರೆ ಗೋಮಾಳ ಜಮೀನಿಗೆ ನಕಲಿ ದಾಖಲೆ ಸೃಷಿಸಿಕೊಂಡು ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದ ಕೆ.ಬಿ.ಮುದ್ದಪ್ಪ, ಪುರುಷೋತ್ತಮಗೌಡ,ಕೆ.ಬಿ.ಹನುಮಂತರಾಯಪ್ಪ, ಎಂ.ಮುನಿರಾಜು ಅವರ ಹಪಣಿಯನ್ನು ವಜಾಕರಿಸುವ ಮೂಲಕ ಸರ್ಕಾರದ ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಸೆಪ್ಟೆಂಬರ್ 2 ರಂದು ಮಾಡಿರುವ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ಜಿಲ್ಲಾಧಿಕಾರಿಗಳು ಸರ್ಕಾರದ ವಶಕ್ಕೆ ಪಡೆದಿರುವ ಜಮೀನಿನ ಈಗಿನ ಮಾರುಕಟ್ಟೆ ಮೌಲ್ಯ ಸುಮಾರು ₹40 ಕೋಟಿ ಬೆಲೆ ಬಾಳಲಿದೆ. ಸರ್ಕಾರದ ವಶಕ್ಕೆ ಪಡೆದಿರುವ 6 ಎಕರೆ ಜಮೀನು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಅಂಚಿನಲ್ಲೆ ಇದೆ. ಅಲ್ಲದೆ ರಾಷ್ಟ್ರ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ ತರಬೇತಿ ಕೇಂದ್ರದ ಪಕ್ಕದಲ್ಲೇ ಇದೆ.
ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಿರುವ ಮಾಹಿತಿಯಂತೆ ಗೋಮಾಳ ಜಮೀನು ಕಬಳಿಸಲು ಈ ಹಿಂದೆ ತಾಲ್ಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿರುವ ಕಂದಾಯ ಅಧಿಕಾರಿಗಳು ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕಚೇರಿಯಲ್ಲಿನ ದಾಖಲೆಗಳನ್ನು ಪರಿಶೀಲಿಸನೆ ಮಾಡದೆ ಆದೇಶ ಮಾಡುವ ಮೂಲಕ ಕೋಟ್ಯಾಂತರ ರೂಪಾಯಿ ಮೌಲ್ಯದ ಜಮೀನು ಕಬಳಿಸಲು ಸಹಕರಿಸಿದ್ದಾರೆ ಎಂದು ವಿವರಿಸಿದ್ದಾರೆ.
ನಕಲಿ ದಾಖಲೆ ಸೃಷ್ಟಿಸಿಕೊಂಡಿರುವ ಜಮೀನಿನಲ್ಲಿ 1998 ರಿಂದಲು ರಾಗಿ ಬೆಳೆ ಬೆಳೆಯುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಗೂಗಲ್ ನಕ್ಷೆ ಪರಿಶೀಲನೆಯಲ್ಲಿ 2024ರವರೆಗೂ ಸರ್ವೇ ನಂಬರ್ 57 ರಲ್ಲಿ ಯಾವುದೇ ಬೆಳೆಯನ್ನು ಬೆಳೆಯದೆ ಇರುವುದು ಕಂಡು ಬಂದಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಸರ್ವೇ ನಂಬರ್ 57ರಲ್ಲಿನ ಗೋಮಾಳ ಜಮೀನು ಕಬಳಿಕೆ ವಿರುದ್ಧ ಹಲವಾರು ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳಿಗೆ ಲಿಖಿತ ದೂರುಗಳನ್ನು ಸಲ್ಲಿಸಿದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…