ದೊಡ್ಡಬಳ್ಳಾಪುರ: ನಗರದ ಅಂಚಿನ ಅರೆಹಳ್ಳಿಗುಡ್ಡದಹಳ್ಳಿ ಗ್ರಾಮದ ಸರ್ವೆ ನಂಬರ್ 57ಕ್ಕೆ ಸೇರಿದ 6 ಎಕರೆ ಗೋಮಾಳ ಜಮೀನಿಗೆ ನಕಲಿ ದಾಖಲೆ ಸೃಷಿಸಿಕೊಂಡು ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದ ಕೆ.ಬಿ.ಮುದ್ದಪ್ಪ, ಪುರುಷೋತ್ತಮಗೌಡ,ಕೆ.ಬಿ.ಹನುಮಂತರಾಯಪ್ಪ, ಎಂ.ಮುನಿರಾಜು ಅವರ ಹಪಣಿಯನ್ನು ವಜಾಕರಿಸುವ ಮೂಲಕ ಸರ್ಕಾರದ ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಸೆಪ್ಟೆಂಬರ್ 2 ರಂದು ಮಾಡಿರುವ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ಜಿಲ್ಲಾಧಿಕಾರಿಗಳು ಸರ್ಕಾರದ ವಶಕ್ಕೆ ಪಡೆದಿರುವ ಜಮೀನಿನ ಈಗಿನ ಮಾರುಕಟ್ಟೆ ಮೌಲ್ಯ ಸುಮಾರು ₹40 ಕೋಟಿ ಬೆಲೆ ಬಾಳಲಿದೆ. ಸರ್ಕಾರದ ವಶಕ್ಕೆ ಪಡೆದಿರುವ 6 ಎಕರೆ ಜಮೀನು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಅಂಚಿನಲ್ಲೆ ಇದೆ. ಅಲ್ಲದೆ ರಾಷ್ಟ್ರ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ ತರಬೇತಿ ಕೇಂದ್ರದ ಪಕ್ಕದಲ್ಲೇ ಇದೆ.
ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಿರುವ ಮಾಹಿತಿಯಂತೆ ಗೋಮಾಳ ಜಮೀನು ಕಬಳಿಸಲು ಈ ಹಿಂದೆ ತಾಲ್ಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿರುವ ಕಂದಾಯ ಅಧಿಕಾರಿಗಳು ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕಚೇರಿಯಲ್ಲಿನ ದಾಖಲೆಗಳನ್ನು ಪರಿಶೀಲಿಸನೆ ಮಾಡದೆ ಆದೇಶ ಮಾಡುವ ಮೂಲಕ ಕೋಟ್ಯಾಂತರ ರೂಪಾಯಿ ಮೌಲ್ಯದ ಜಮೀನು ಕಬಳಿಸಲು ಸಹಕರಿಸಿದ್ದಾರೆ ಎಂದು ವಿವರಿಸಿದ್ದಾರೆ.
ನಕಲಿ ದಾಖಲೆ ಸೃಷ್ಟಿಸಿಕೊಂಡಿರುವ ಜಮೀನಿನಲ್ಲಿ 1998 ರಿಂದಲು ರಾಗಿ ಬೆಳೆ ಬೆಳೆಯುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಗೂಗಲ್ ನಕ್ಷೆ ಪರಿಶೀಲನೆಯಲ್ಲಿ 2024ರವರೆಗೂ ಸರ್ವೇ ನಂಬರ್ 57 ರಲ್ಲಿ ಯಾವುದೇ ಬೆಳೆಯನ್ನು ಬೆಳೆಯದೆ ಇರುವುದು ಕಂಡು ಬಂದಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಸರ್ವೇ ನಂಬರ್ 57ರಲ್ಲಿನ ಗೋಮಾಳ ಜಮೀನು ಕಬಳಿಕೆ ವಿರುದ್ಧ ಹಲವಾರು ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳಿಗೆ ಲಿಖಿತ ದೂರುಗಳನ್ನು ಸಲ್ಲಿಸಿದ್ದರು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…