ನಕಲಿ (ರೋಲ್ ಕಾಲ್) ಪತ್ರಕರ್ತನಿಂದ ಮಹಿಳೆಗೆ ವಂಚನೆ ಆರೋಪ: ಸಾಲ ವಸೂಲಾತಿ ಮಾಡಿಕೊಡುವುದಾಗಿ‌ 65 ಸಾವಿರ ರೂ. ಹಣ ಪಡೆದು ವಂಚನೆ: ದೂರು ಕೊಟ್ಟರೂ ಕ್ಯಾರೆ ಎನ್ನದ ಪೊಲೀಸರು

ದೊಡ್ಡಬಳ್ಳಾಪುರ: ಸಾಲ ವಸೂಲಾತಿ ಮಾಡಿಕೊಡುವುದಾಗಿ‌ ನಂಬಿಸಿದ ನಕಲಿ ಪತ್ರಕರ್ತನೊಬ್ಬ ಮಹಿಳೆಯೊಬ್ಬರಿಂದ 65 ಸಾವಿರ ಹಣ ಪಡೆದು ವಂಚಿಸಿದ್ದಲ್ಲದೇ ಆ‌ ಮಹಿಳೆಯನ್ನೇ ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಸಾಸಲು ಹೋಬಳಿ ಭೋವಿಪಾಳ್ಯ ನಿವಾಸಿ ಕೆಂಪರಾಜು(ರಾಜು) ಎಂಬಾತನೇ ಹಣ ಪಡೆದು ವಂಚಿಸಿರುವ ರೋಲ್‌ಕಾಲ್ ಪತ್ರಕರ್ತ.

ಮಧುಗಿರಿ ಮೂಲದ ಸದ್ಯ ಗೌರಿಬಿದನೂರಿನಲ್ಲಿ ವಾಸವಿರುವ ಸಾವಿತ್ರಮ್ಮ ಎಂಬುವರೇ ನಕಲಿ ಪತ್ರಕರ್ತನಿಂದ ಮೋಸ ಹೋದವವರು.

ಸಾವಿತ್ರಮ್ಮ ಅವರು ಮಧುಗಿರಿ ಮೂಲದ ಶಿವಪ್ಪನಾಯಕ‌ ಎಂಬುವರಿಗೆ ಕೋಳಿ‌ಫಾರಂ ಗಾಗಿ 4,50000 ಸಾಲ‌ ನೀಡಿದ್ದರು. ಆದರೆ, ಶಿವಪ್ಪನಾಯಕ ಸಾಲ‌ ವಾಪಸ್ ಕೊಟ್ಟಿರಲಿಲ್ಲ. ಈ ಸಂಬಂಧ ಮಧುಗಿರಿ ಕೊಡಿಗೇನಹಳ್ಳಿ ಪೊಲೀಸ್ ಠಾಣೆಗೆ ದೂರು‌ ಸಹ ನೀಡಿದ್ದರು.

ಇದರ ಮಧ್ಯೆ ಮಧುಗಿರಿಯ ಕೆಇಬಿ ನಾಗರಾಜು ಎಂಬುವರು ನಕಲಿ ಪತ್ರಕರ್ತ ಕೆಂಪರಾಜುನನ್ನು ಮಹಿಳೆಗೆ ಪರಿಚಯ ಮಾಡಿಕೊಟ್ಟಿದ್ದರು. ಆಗ ಕೆಂಪರಾಜು ನಾನು ಪತ್ರಕರ್ತ. ನಿಮ್ಮ ಸಾಲ ವಸೂಲಿ‌ ಮಾಡಿಕೊಡುತ್ತೇನೆ. ನನಗೆ ಒಂದು ಲಕ್ಷ ಹಣ ನೀಡುವಂತೆ ಬೇಡಿಕೆಯಿಟ್ಟಿದ್ದ. ಸಾಲ ವಸೂಲಿ ಆಗಬಹುದು ಎಂಬ ಭರವಸೆಯಿಂದ ಆ ಮಹಿಳೆ 65 ಸಾವಿರ ಹಣವನ್ನು ಕೆಂಪರಾಜು ಬ್ಯಾಂಕ್ ಖಾತೆಗೆ 2024 ಫೆಬ್ರುವರಿ ತಿಂಗಳಲ್ಲಿ ಜಮೆ‌ ಮಾಡಿದ್ದರು.

ಹಣ ಪಡೆದುಕೊಂಡ ನಂತರ ನಕಲಿ‌ ಪತ್ರಕರ್ತ ಕೆಂಪರಾಜು ಯಾವುದೇ ಸಾಲ ವಸೂಲಿ ಮಾಡಿಕೊಟ್ಟಿರಲಿಲ್ಲ. ಈ ಬಗ್ಗೆ ಸಾವಿತ್ರಮ್ಮ ದೂರವಾಣಿ ಮೂಲಕ ವಿಚಾರಿಸಿದಾಗ ಸರಿಯಾಗಿ ಸ್ಪಂದಿಸಿರಲಿಲ್ಲ. ಕರೆ ಕಡಿತಗೊಳಿಸುವುದು, ಅವಾಚ್ಯ ಶಬ್ದಗಳಿಂದ ಬಯ್ಯುತ್ತಿದ್ದ.ಇದರಿಂದ ರೋಸಿದ ಮಹಿಳೆ ಭೋವಿಪಾಳ್ಯದ ಕೆಂಪರಾಜು ಮನೆಯ ಬಳಿ ಹೋದಾಗ ಅವರ ತಾಯಿ ಸ್ವಲ್ಪ ಸಮಯ ಕೊಡಿ. ನಾನೇ ನೀವು ಕೊಟ್ಟಿರುವ ಹಣವನ್ನು ವಾಪಸ್ ಕೊಡಿಸುತ್ತೇನೆ ಎಂದೇಳಿದ್ದರು. ಆ ಬಳಿಕ ಸಾವಿತ್ರಮ್ಮ‌ ವಾಪಸ್ ಬಂದಿದ್ದರು.

ಕೆಲ ದಿನಗಳ ಬಳಿಕ ಕರೆ ಮಾಡಿ ಹಣ ಕೇಳಿದಾಗ ಕೆಂಪರಾಜು ತಾಯಿ ಉಲ್ಟಾ ಹೊಡೆದಿದ್ದರು. ಅಲ್ಲದೇ ಹಣ ಕಳೆದುಕೊಂಡ ಮಹಿಳೆಯನ್ನೇ ನಿಂದಿಸಿದ್ದರು. ಇದಾದ ನಂತರ ದೂರವಾಣಿಯಲ್ಲಿ ನಕಲಿ ಪತ್ರಕರ್ತ ಕೆಂಪರಾಜು, ಆತನ ಸ್ನೇಹಿತ ನರಸಿಂಹರಾಜು ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ. ಅಲ್ಲದೇ ಮಹಿಳೆ ಮೇಲೆಯೇ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರು ಕೊಟ್ಟರೂ ಸ್ಪಂದಿಸದ ಪೊಲೀಸರು

ನಕಲಿ‌ ಪತ್ರಕರ್ತ ಕೆಂಪರಾಜು ವಿರುದ್ಧ ಸಾವಿತ್ರಮ್ಮ ದೂರು ನೀಡಿದರೂ ದೊಡ್ಡಬೆಳವಂಗಲ ಪೊಲೀಸರು ಆತನ ವಿರುದ್ಧ ಯಾವುದೇ ಕ್ರಮ ಜರುಗಿಸದೇ ಕಾಲಹರಣ ಮಾಡುತ್ತಿದ್ದಾರೆ. ಠಾಣೆಯ ಕೆಲ ಸಿಬ್ಬಂದಿಯೇ ನಕಲಿ‌ ಪತ್ರಕರ್ತನಿಗೆ ಸಾಥ್ ನೀಡುತ್ತಿರುವ ಆರೋಪವೂ ಕೇಳಿಬಂದಿದೆ.

ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವಾಗ ಪೊಲೀಸರ ಬಗ್ಗೆಯೂ ಲಘುವಾಗಿ ಮಾತನಾಡಿರುವ ಆಡಿಯೋ ತುಣುಕು ಮಾಧ್ಯಮಗಳಿಗೆ ಲಭ್ಯವಾಗಿದೆ. ಮಹಿಳೆಗೆ ಬೈದು, ಪ್ರಾಣ ಬೆದರಿಕೆ ಹಾಕಿರುವ ಕುರಿತು ಆಡಿಯೋ ಇದ್ದರೂ ಪೊಲೀಸರು ಮಾತ್ರ ಆತನ ವಿರುದ್ಧ ಯಾವುದೇ ಕ್ರಮ ಜರುಗಿಸದೇ ಇರುವುದು ಪ್ರಶ್ನಾರ್ಥಕವಾಗಿದೆ.

ನಕಲಿ ಪತ್ರಕರ್ತನ ಆಟಾಟೋಪಕ್ಕೆ ಕಡಿವಾಣ ಯಾವಾಗ..?

ನಕಲಿ ಪತ್ರಕರ್ತ ಕೆಂಪರಾಜು ಸಾವಿತ್ರಮ್ಮ ಅವರಿಂದ ಹಣ ಪಡೆದು ವಂಚಿಸಿರುವುದಷ್ಟೇ ಅಲ್ಲದೇ ಹಲವು ಕಡೆ ಇತನ ಆಟಾಟೋಪ, ವಂಚನೆಯ ದೂರುಗಳು ಕೇಳಿಬಂದಿದೆ.
ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಹೋಬಳಿಗಳಲ್ಲಿ ಅಂಗಡಿ, ಕ್ಲಿನಿಕ್ ಗಳಿಂದಲೂ ಹಣ ಪೀಕಿರುವ ಆರೋಪ ಕೇಳಿಬಂದಿದೆ. ನಗರದ ಸ್ವೀಟ್ ಸ್ಟಾಲ್‌ ಮಾಲೀಕರೊಬ್ಬರಿಂದ ಇದೇ ಕೆಂಪರಾಜು, ನರಸಿಂಹರಾಜು ಹೆದರಿಸಿ ಹಣ ವಸೂಲಿ‌ ಮಾಡಿರುವ ಘಟನೆಯೂ ವರದಿಯಾಗಿದೆ. ಕುಣಿಗಲ್, ಕೊರಟಗೆರೆ, ಹೊಸಕೋಟೆಯಲ್ಲೂ ಹಲವರನ್ನು ಹೆದರಿಸಿ ಹಣ ಪೀಕಿದ್ದಾನೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

Ramesh Babu

Journalist

Recent Posts

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

21 hours ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

21 hours ago

ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣ ಬೇಡ- ತಹಶೀಲ್ದಾರ್ ಮಲ್ಲಪ್ಪಗೆ ರೈತರ ಮನವಿ

ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…

22 hours ago

ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರ ಪ್ರತಿಭಟನೆ

ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ…

1 day ago

ದಿಢೀರ್ ಸಾವುಗಳ ಸುತ್ತಾ…..

ನನ್ನ ಸಾವಿನೊಂದಿಗೆ ಈ ಜಗತ್ತೂ ಇಲ್ಲವಾಗುತ್ತದೆ.......... ದಿಢೀರ್ ಸಾವುಗಳ ಸುತ್ತಾ..... ಇತ್ತೀಚಿನ ಕೆಲವು ಮಾಧ್ಯಮ ವರದಿಗಳನ್ನು ನೋಡುತ್ತಿದ್ದರೆ ಅನೇಕ ಯುವಕ…

1 day ago

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಕೆ.ಜೆ ಜಾರ್ಜ್

ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ…

2 days ago