ನಕಲಿ (ರೋಲ್ ಕಾಲ್) ಪತ್ರಕರ್ತನಿಂದ ಮಹಿಳೆಗೆ ವಂಚನೆ ಆರೋಪ: ಸಾಲ ವಸೂಲಾತಿ ಮಾಡಿಕೊಡುವುದಾಗಿ‌ 65 ಸಾವಿರ ರೂ. ಹಣ ಪಡೆದು ವಂಚನೆ: ದೂರು ಕೊಟ್ಟರೂ ಕ್ಯಾರೆ ಎನ್ನದ ಪೊಲೀಸರು

ದೊಡ್ಡಬಳ್ಳಾಪುರ: ಸಾಲ ವಸೂಲಾತಿ ಮಾಡಿಕೊಡುವುದಾಗಿ‌ ನಂಬಿಸಿದ ನಕಲಿ ಪತ್ರಕರ್ತನೊಬ್ಬ ಮಹಿಳೆಯೊಬ್ಬರಿಂದ 65 ಸಾವಿರ ಹಣ ಪಡೆದು ವಂಚಿಸಿದ್ದಲ್ಲದೇ ಆ‌ ಮಹಿಳೆಯನ್ನೇ ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಸಾಸಲು ಹೋಬಳಿ ಭೋವಿಪಾಳ್ಯ ನಿವಾಸಿ ಕೆಂಪರಾಜು(ರಾಜು) ಎಂಬಾತನೇ ಹಣ ಪಡೆದು ವಂಚಿಸಿರುವ ರೋಲ್‌ಕಾಲ್ ಪತ್ರಕರ್ತ.

ಮಧುಗಿರಿ ಮೂಲದ ಸದ್ಯ ಗೌರಿಬಿದನೂರಿನಲ್ಲಿ ವಾಸವಿರುವ ಸಾವಿತ್ರಮ್ಮ ಎಂಬುವರೇ ನಕಲಿ ಪತ್ರಕರ್ತನಿಂದ ಮೋಸ ಹೋದವವರು.

ಸಾವಿತ್ರಮ್ಮ ಅವರು ಮಧುಗಿರಿ ಮೂಲದ ಶಿವಪ್ಪನಾಯಕ‌ ಎಂಬುವರಿಗೆ ಕೋಳಿ‌ಫಾರಂ ಗಾಗಿ 4,50000 ಸಾಲ‌ ನೀಡಿದ್ದರು. ಆದರೆ, ಶಿವಪ್ಪನಾಯಕ ಸಾಲ‌ ವಾಪಸ್ ಕೊಟ್ಟಿರಲಿಲ್ಲ. ಈ ಸಂಬಂಧ ಮಧುಗಿರಿ ಕೊಡಿಗೇನಹಳ್ಳಿ ಪೊಲೀಸ್ ಠಾಣೆಗೆ ದೂರು‌ ಸಹ ನೀಡಿದ್ದರು.

ಇದರ ಮಧ್ಯೆ ಮಧುಗಿರಿಯ ಕೆಇಬಿ ನಾಗರಾಜು ಎಂಬುವರು ನಕಲಿ ಪತ್ರಕರ್ತ ಕೆಂಪರಾಜುನನ್ನು ಮಹಿಳೆಗೆ ಪರಿಚಯ ಮಾಡಿಕೊಟ್ಟಿದ್ದರು. ಆಗ ಕೆಂಪರಾಜು ನಾನು ಪತ್ರಕರ್ತ. ನಿಮ್ಮ ಸಾಲ ವಸೂಲಿ‌ ಮಾಡಿಕೊಡುತ್ತೇನೆ. ನನಗೆ ಒಂದು ಲಕ್ಷ ಹಣ ನೀಡುವಂತೆ ಬೇಡಿಕೆಯಿಟ್ಟಿದ್ದ. ಸಾಲ ವಸೂಲಿ ಆಗಬಹುದು ಎಂಬ ಭರವಸೆಯಿಂದ ಆ ಮಹಿಳೆ 65 ಸಾವಿರ ಹಣವನ್ನು ಕೆಂಪರಾಜು ಬ್ಯಾಂಕ್ ಖಾತೆಗೆ 2024 ಫೆಬ್ರುವರಿ ತಿಂಗಳಲ್ಲಿ ಜಮೆ‌ ಮಾಡಿದ್ದರು.

ಹಣ ಪಡೆದುಕೊಂಡ ನಂತರ ನಕಲಿ‌ ಪತ್ರಕರ್ತ ಕೆಂಪರಾಜು ಯಾವುದೇ ಸಾಲ ವಸೂಲಿ ಮಾಡಿಕೊಟ್ಟಿರಲಿಲ್ಲ. ಈ ಬಗ್ಗೆ ಸಾವಿತ್ರಮ್ಮ ದೂರವಾಣಿ ಮೂಲಕ ವಿಚಾರಿಸಿದಾಗ ಸರಿಯಾಗಿ ಸ್ಪಂದಿಸಿರಲಿಲ್ಲ. ಕರೆ ಕಡಿತಗೊಳಿಸುವುದು, ಅವಾಚ್ಯ ಶಬ್ದಗಳಿಂದ ಬಯ್ಯುತ್ತಿದ್ದ.ಇದರಿಂದ ರೋಸಿದ ಮಹಿಳೆ ಭೋವಿಪಾಳ್ಯದ ಕೆಂಪರಾಜು ಮನೆಯ ಬಳಿ ಹೋದಾಗ ಅವರ ತಾಯಿ ಸ್ವಲ್ಪ ಸಮಯ ಕೊಡಿ. ನಾನೇ ನೀವು ಕೊಟ್ಟಿರುವ ಹಣವನ್ನು ವಾಪಸ್ ಕೊಡಿಸುತ್ತೇನೆ ಎಂದೇಳಿದ್ದರು. ಆ ಬಳಿಕ ಸಾವಿತ್ರಮ್ಮ‌ ವಾಪಸ್ ಬಂದಿದ್ದರು.

ಕೆಲ ದಿನಗಳ ಬಳಿಕ ಕರೆ ಮಾಡಿ ಹಣ ಕೇಳಿದಾಗ ಕೆಂಪರಾಜು ತಾಯಿ ಉಲ್ಟಾ ಹೊಡೆದಿದ್ದರು. ಅಲ್ಲದೇ ಹಣ ಕಳೆದುಕೊಂಡ ಮಹಿಳೆಯನ್ನೇ ನಿಂದಿಸಿದ್ದರು. ಇದಾದ ನಂತರ ದೂರವಾಣಿಯಲ್ಲಿ ನಕಲಿ ಪತ್ರಕರ್ತ ಕೆಂಪರಾಜು, ಆತನ ಸ್ನೇಹಿತ ನರಸಿಂಹರಾಜು ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ. ಅಲ್ಲದೇ ಮಹಿಳೆ ಮೇಲೆಯೇ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರು ಕೊಟ್ಟರೂ ಸ್ಪಂದಿಸದ ಪೊಲೀಸರು

ನಕಲಿ‌ ಪತ್ರಕರ್ತ ಕೆಂಪರಾಜು ವಿರುದ್ಧ ಸಾವಿತ್ರಮ್ಮ ದೂರು ನೀಡಿದರೂ ದೊಡ್ಡಬೆಳವಂಗಲ ಪೊಲೀಸರು ಆತನ ವಿರುದ್ಧ ಯಾವುದೇ ಕ್ರಮ ಜರುಗಿಸದೇ ಕಾಲಹರಣ ಮಾಡುತ್ತಿದ್ದಾರೆ. ಠಾಣೆಯ ಕೆಲ ಸಿಬ್ಬಂದಿಯೇ ನಕಲಿ‌ ಪತ್ರಕರ್ತನಿಗೆ ಸಾಥ್ ನೀಡುತ್ತಿರುವ ಆರೋಪವೂ ಕೇಳಿಬಂದಿದೆ.

ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವಾಗ ಪೊಲೀಸರ ಬಗ್ಗೆಯೂ ಲಘುವಾಗಿ ಮಾತನಾಡಿರುವ ಆಡಿಯೋ ತುಣುಕು ಮಾಧ್ಯಮಗಳಿಗೆ ಲಭ್ಯವಾಗಿದೆ. ಮಹಿಳೆಗೆ ಬೈದು, ಪ್ರಾಣ ಬೆದರಿಕೆ ಹಾಕಿರುವ ಕುರಿತು ಆಡಿಯೋ ಇದ್ದರೂ ಪೊಲೀಸರು ಮಾತ್ರ ಆತನ ವಿರುದ್ಧ ಯಾವುದೇ ಕ್ರಮ ಜರುಗಿಸದೇ ಇರುವುದು ಪ್ರಶ್ನಾರ್ಥಕವಾಗಿದೆ.

ನಕಲಿ ಪತ್ರಕರ್ತನ ಆಟಾಟೋಪಕ್ಕೆ ಕಡಿವಾಣ ಯಾವಾಗ..?

ನಕಲಿ ಪತ್ರಕರ್ತ ಕೆಂಪರಾಜು ಸಾವಿತ್ರಮ್ಮ ಅವರಿಂದ ಹಣ ಪಡೆದು ವಂಚಿಸಿರುವುದಷ್ಟೇ ಅಲ್ಲದೇ ಹಲವು ಕಡೆ ಇತನ ಆಟಾಟೋಪ, ವಂಚನೆಯ ದೂರುಗಳು ಕೇಳಿಬಂದಿದೆ.
ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಹೋಬಳಿಗಳಲ್ಲಿ ಅಂಗಡಿ, ಕ್ಲಿನಿಕ್ ಗಳಿಂದಲೂ ಹಣ ಪೀಕಿರುವ ಆರೋಪ ಕೇಳಿಬಂದಿದೆ. ನಗರದ ಸ್ವೀಟ್ ಸ್ಟಾಲ್‌ ಮಾಲೀಕರೊಬ್ಬರಿಂದ ಇದೇ ಕೆಂಪರಾಜು, ನರಸಿಂಹರಾಜು ಹೆದರಿಸಿ ಹಣ ವಸೂಲಿ‌ ಮಾಡಿರುವ ಘಟನೆಯೂ ವರದಿಯಾಗಿದೆ. ಕುಣಿಗಲ್, ಕೊರಟಗೆರೆ, ಹೊಸಕೋಟೆಯಲ್ಲೂ ಹಲವರನ್ನು ಹೆದರಿಸಿ ಹಣ ಪೀಕಿದ್ದಾನೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

14 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

23 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago