ನಕಲಿ (ರೋಲ್ ಕಾಲ್) ಪತ್ರಕರ್ತನಿಂದ ಮಹಿಳೆಗೆ ವಂಚನೆ ಆರೋಪ: ಸಾಲ ವಸೂಲಾತಿ ಮಾಡಿಕೊಡುವುದಾಗಿ‌ 65 ಸಾವಿರ ರೂ. ಹಣ ಪಡೆದು ವಂಚನೆ: ದೂರು ಕೊಟ್ಟರೂ ಕ್ಯಾರೆ ಎನ್ನದ ಪೊಲೀಸರು

ದೊಡ್ಡಬಳ್ಳಾಪುರ: ಸಾಲ ವಸೂಲಾತಿ ಮಾಡಿಕೊಡುವುದಾಗಿ‌ ನಂಬಿಸಿದ ನಕಲಿ ಪತ್ರಕರ್ತನೊಬ್ಬ ಮಹಿಳೆಯೊಬ್ಬರಿಂದ 65 ಸಾವಿರ ಹಣ ಪಡೆದು ವಂಚಿಸಿದ್ದಲ್ಲದೇ ಆ‌ ಮಹಿಳೆಯನ್ನೇ ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಸಾಸಲು ಹೋಬಳಿ ಭೋವಿಪಾಳ್ಯ ನಿವಾಸಿ ಕೆಂಪರಾಜು(ರಾಜು) ಎಂಬಾತನೇ ಹಣ ಪಡೆದು ವಂಚಿಸಿರುವ ರೋಲ್‌ಕಾಲ್ ಪತ್ರಕರ್ತ.

ಮಧುಗಿರಿ ಮೂಲದ ಸದ್ಯ ಗೌರಿಬಿದನೂರಿನಲ್ಲಿ ವಾಸವಿರುವ ಸಾವಿತ್ರಮ್ಮ ಎಂಬುವರೇ ನಕಲಿ ಪತ್ರಕರ್ತನಿಂದ ಮೋಸ ಹೋದವವರು.

ಸಾವಿತ್ರಮ್ಮ ಅವರು ಮಧುಗಿರಿ ಮೂಲದ ಶಿವಪ್ಪನಾಯಕ‌ ಎಂಬುವರಿಗೆ ಕೋಳಿ‌ಫಾರಂ ಗಾಗಿ 4,50000 ಸಾಲ‌ ನೀಡಿದ್ದರು. ಆದರೆ, ಶಿವಪ್ಪನಾಯಕ ಸಾಲ‌ ವಾಪಸ್ ಕೊಟ್ಟಿರಲಿಲ್ಲ. ಈ ಸಂಬಂಧ ಮಧುಗಿರಿ ಕೊಡಿಗೇನಹಳ್ಳಿ ಪೊಲೀಸ್ ಠಾಣೆಗೆ ದೂರು‌ ಸಹ ನೀಡಿದ್ದರು.

ಇದರ ಮಧ್ಯೆ ಮಧುಗಿರಿಯ ಕೆಇಬಿ ನಾಗರಾಜು ಎಂಬುವರು ನಕಲಿ ಪತ್ರಕರ್ತ ಕೆಂಪರಾಜುನನ್ನು ಮಹಿಳೆಗೆ ಪರಿಚಯ ಮಾಡಿಕೊಟ್ಟಿದ್ದರು. ಆಗ ಕೆಂಪರಾಜು ನಾನು ಪತ್ರಕರ್ತ. ನಿಮ್ಮ ಸಾಲ ವಸೂಲಿ‌ ಮಾಡಿಕೊಡುತ್ತೇನೆ. ನನಗೆ ಒಂದು ಲಕ್ಷ ಹಣ ನೀಡುವಂತೆ ಬೇಡಿಕೆಯಿಟ್ಟಿದ್ದ. ಸಾಲ ವಸೂಲಿ ಆಗಬಹುದು ಎಂಬ ಭರವಸೆಯಿಂದ ಆ ಮಹಿಳೆ 65 ಸಾವಿರ ಹಣವನ್ನು ಕೆಂಪರಾಜು ಬ್ಯಾಂಕ್ ಖಾತೆಗೆ 2024 ಫೆಬ್ರುವರಿ ತಿಂಗಳಲ್ಲಿ ಜಮೆ‌ ಮಾಡಿದ್ದರು.

ಹಣ ಪಡೆದುಕೊಂಡ ನಂತರ ನಕಲಿ‌ ಪತ್ರಕರ್ತ ಕೆಂಪರಾಜು ಯಾವುದೇ ಸಾಲ ವಸೂಲಿ ಮಾಡಿಕೊಟ್ಟಿರಲಿಲ್ಲ. ಈ ಬಗ್ಗೆ ಸಾವಿತ್ರಮ್ಮ ದೂರವಾಣಿ ಮೂಲಕ ವಿಚಾರಿಸಿದಾಗ ಸರಿಯಾಗಿ ಸ್ಪಂದಿಸಿರಲಿಲ್ಲ. ಕರೆ ಕಡಿತಗೊಳಿಸುವುದು, ಅವಾಚ್ಯ ಶಬ್ದಗಳಿಂದ ಬಯ್ಯುತ್ತಿದ್ದ.ಇದರಿಂದ ರೋಸಿದ ಮಹಿಳೆ ಭೋವಿಪಾಳ್ಯದ ಕೆಂಪರಾಜು ಮನೆಯ ಬಳಿ ಹೋದಾಗ ಅವರ ತಾಯಿ ಸ್ವಲ್ಪ ಸಮಯ ಕೊಡಿ. ನಾನೇ ನೀವು ಕೊಟ್ಟಿರುವ ಹಣವನ್ನು ವಾಪಸ್ ಕೊಡಿಸುತ್ತೇನೆ ಎಂದೇಳಿದ್ದರು. ಆ ಬಳಿಕ ಸಾವಿತ್ರಮ್ಮ‌ ವಾಪಸ್ ಬಂದಿದ್ದರು.

ಕೆಲ ದಿನಗಳ ಬಳಿಕ ಕರೆ ಮಾಡಿ ಹಣ ಕೇಳಿದಾಗ ಕೆಂಪರಾಜು ತಾಯಿ ಉಲ್ಟಾ ಹೊಡೆದಿದ್ದರು. ಅಲ್ಲದೇ ಹಣ ಕಳೆದುಕೊಂಡ ಮಹಿಳೆಯನ್ನೇ ನಿಂದಿಸಿದ್ದರು. ಇದಾದ ನಂತರ ದೂರವಾಣಿಯಲ್ಲಿ ನಕಲಿ ಪತ್ರಕರ್ತ ಕೆಂಪರಾಜು, ಆತನ ಸ್ನೇಹಿತ ನರಸಿಂಹರಾಜು ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ. ಅಲ್ಲದೇ ಮಹಿಳೆ ಮೇಲೆಯೇ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರು ಕೊಟ್ಟರೂ ಸ್ಪಂದಿಸದ ಪೊಲೀಸರು

ನಕಲಿ‌ ಪತ್ರಕರ್ತ ಕೆಂಪರಾಜು ವಿರುದ್ಧ ಸಾವಿತ್ರಮ್ಮ ದೂರು ನೀಡಿದರೂ ದೊಡ್ಡಬೆಳವಂಗಲ ಪೊಲೀಸರು ಆತನ ವಿರುದ್ಧ ಯಾವುದೇ ಕ್ರಮ ಜರುಗಿಸದೇ ಕಾಲಹರಣ ಮಾಡುತ್ತಿದ್ದಾರೆ. ಠಾಣೆಯ ಕೆಲ ಸಿಬ್ಬಂದಿಯೇ ನಕಲಿ‌ ಪತ್ರಕರ್ತನಿಗೆ ಸಾಥ್ ನೀಡುತ್ತಿರುವ ಆರೋಪವೂ ಕೇಳಿಬಂದಿದೆ.

ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವಾಗ ಪೊಲೀಸರ ಬಗ್ಗೆಯೂ ಲಘುವಾಗಿ ಮಾತನಾಡಿರುವ ಆಡಿಯೋ ತುಣುಕು ಮಾಧ್ಯಮಗಳಿಗೆ ಲಭ್ಯವಾಗಿದೆ. ಮಹಿಳೆಗೆ ಬೈದು, ಪ್ರಾಣ ಬೆದರಿಕೆ ಹಾಕಿರುವ ಕುರಿತು ಆಡಿಯೋ ಇದ್ದರೂ ಪೊಲೀಸರು ಮಾತ್ರ ಆತನ ವಿರುದ್ಧ ಯಾವುದೇ ಕ್ರಮ ಜರುಗಿಸದೇ ಇರುವುದು ಪ್ರಶ್ನಾರ್ಥಕವಾಗಿದೆ.

ನಕಲಿ ಪತ್ರಕರ್ತನ ಆಟಾಟೋಪಕ್ಕೆ ಕಡಿವಾಣ ಯಾವಾಗ..?

ನಕಲಿ ಪತ್ರಕರ್ತ ಕೆಂಪರಾಜು ಸಾವಿತ್ರಮ್ಮ ಅವರಿಂದ ಹಣ ಪಡೆದು ವಂಚಿಸಿರುವುದಷ್ಟೇ ಅಲ್ಲದೇ ಹಲವು ಕಡೆ ಇತನ ಆಟಾಟೋಪ, ವಂಚನೆಯ ದೂರುಗಳು ಕೇಳಿಬಂದಿದೆ.
ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಹೋಬಳಿಗಳಲ್ಲಿ ಅಂಗಡಿ, ಕ್ಲಿನಿಕ್ ಗಳಿಂದಲೂ ಹಣ ಪೀಕಿರುವ ಆರೋಪ ಕೇಳಿಬಂದಿದೆ. ನಗರದ ಸ್ವೀಟ್ ಸ್ಟಾಲ್‌ ಮಾಲೀಕರೊಬ್ಬರಿಂದ ಇದೇ ಕೆಂಪರಾಜು, ನರಸಿಂಹರಾಜು ಹೆದರಿಸಿ ಹಣ ವಸೂಲಿ‌ ಮಾಡಿರುವ ಘಟನೆಯೂ ವರದಿಯಾಗಿದೆ. ಕುಣಿಗಲ್, ಕೊರಟಗೆರೆ, ಹೊಸಕೋಟೆಯಲ್ಲೂ ಹಲವರನ್ನು ಹೆದರಿಸಿ ಹಣ ಪೀಕಿದ್ದಾನೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

4 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

4 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

7 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

8 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

12 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

16 hours ago