ಕೋಲಾರ: ಮೂರು ತಿಂಗಳಿಂದ ಮಕ್ಕಳಿಗೆ ಬಾದಿಸುತ್ತಿರುವ ವೈರಲ್ ಪೀವರ್ ನಿಯಂತ್ರಣಕ್ಕೆ ವಿಶೇಷ ವೈದ್ಯರ ತಂಡ ರಚನೆ ಮಾಡಿ ಗ್ರಾಮೀಣ ಪ್ರದೇಶದ ಬಡವರ ಆರೋಗ್ಯ ಜೊತೆ ಚಲ್ಲಾಟವಾಡುವ ನಕಲಿ ಡಾಕ್ಟರ್ಗಳ ವಿರುದ್ಧ ಗೂಂಡಾ ಕಾಯ್ದೆಯಡಿಯಲ್ಲಿ ಕೇಸು ದಾಖಲಿಸಿ, ಗಡಿಪಾರು ಮಾಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ರೈತ ಸಂಘದಿಂದ ಜಿಲ್ಲಾ ಆರೋಗ್ಯಾಧಿಕಾರಿ ಶ್ರೀನಿವಾಸ್ ರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.
ಮನವಿ ನೀಡಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, 3 ತಿಂಗಳಿಂದ ಮಕ್ಕಳಿಗೆ ಬಾಧಿಸುತ್ತಿರುವ ಕೆಮ್ಮು, ನೆಗಡಿ, ಕಪ, ನಿಯಂತ್ರಣಕ್ಕೆ ಭಾರದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ಸಿಗದೆ ಖಾಸಗಿ ಆಸ್ಪತ್ರೆಗಳಿಗೆ ದುಬಾರಿ ಹಣ ನೀಡಲಾಗದೆ ಅತಂತ್ರ ಪರಿಸ್ಥಿತಿಯಲ್ಲಿ ಮಕ್ಕಳ ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರು, ವೈದ್ಯಕೀಯ ಗಂದ ಗಾಳಿ ಗೊತ್ತಿಲ್ಲದ ನಕಲಿ ವೈದ್ಯರಿಂದ ಚಿಕಿತ್ಸೆ ಪಡೆಯಬೇಕಾದ ಪರಿಸ್ಥಿತಿ ಇದ್ದರೂ ಸಮಸ್ಯೆಯನ್ನು ಗಂಭೀರವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಗಣಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಗಡಿಭಾಗಗಳಲ್ಲಿ ಬಡವರ ರಕ್ತ ಇರುವ ನಕಲಿ ಕ್ಲೀನಿಕ್ಗಳು ನಾಯಿಕೊಡೆಗಳಂತೆ ತಲೆಎತ್ತಿದ್ದು, ಅಮಾಯಕರ ಜನರ ಜೀವನ ಜೊತೆ ಚಲ್ಲಾಟವಾಡುತ್ತಿದ್ದರೂ, ಜಿಲ್ಲಾದ್ಯಂತ ೨೮೦ ನಕಲಿ ಕ್ಲೀನಿಕ್ಗಳಿದ್ದು, ಅಂಕಿ ಅಂಶಗಳ ಪ್ರಕಾರ ಸಂಬಂಧಪಟ್ಟ ಅಧಿಕಾರಿಗಳ ಬಳಿ ದಾಖಲೆಗಳ ಸಮೇತ ಇದ್ದರೂ ಸಹ ಕ್ಲೀನಿಕ್ಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಮೀನಾಮೇಷ ಎಣಿಸುತ್ತಿರುವುದು ನೋಡಿದರೆ, ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಅಡಇಟ್ಟಂತೆ ನಕಲಿ ಕ್ಲೀನಿಕ್ಗಳಿಗೆ ತಮ್ಮ ಅಧಿಕಾರವನ್ನು ಅಡ ಇಟ್ಟು, ಬಡವರ ಪ್ರಾಣವನ್ನು ಲೆಕ್ಕಿಸದ ಅಧಿಕಾರಿಗಳ ಬೇಜವಾಬ್ದಾರಿ ಎದ್ದುಕಾಣಿಸುತ್ತಿದೆ ಎಂದು ಆರೋಪ ಮಾಡಿದರು.
ಒಂದು ಕಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳ ಬಳಿ ಹಣ ಹಣ ಎಂದು ಬಾಯಿ ಬಿಡುವ ಸಿಬ್ಬಂದಿ ಆರೋಗ್ಯ ಕಾಪಾಡಿಕೊಳ್ಳಲು ಅರಸಾಹಸ ಪಡುವ ರೋಗಿಗಳು ಇವರ ಮದ್ಯೆ ಮೌನವಾಗಿರುವ ಅಧಿಕಾರಿಗಳಿಗೆ ಇಡೀ ಶಾಪವಾಕುತ್ತಿದ್ದರೂ, ನಾಚಿಕೆ ಇಲ್ಲದ ಅಧಿಕಾರಿಗಳ, ಕಾರ್ಯವೈಖರಿ ವಿರುದ್ಧ ಅಸಮಾದಾನ ವ್ಯಕ್ತಪಡಿಸಿದರು.
ರಾಜು ಮುಖಂಡ ಮರಗಲ್ ಶ್ರೀನಿವಾಸ್ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರು ಸಂಬಂಧಪಟ್ಟ ಅಧಿಕಾರಿಗಳನ್ನು ಸಭೆ ಕರೆದು, ಅಡಿಯಿಂದ ಮುಡಿಯವರೆಗೂ ಹಣ ಹಣ ಎಂದು ಬಾಯಿಬಡೆದುಕೊಳ್ಳುವ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ಕಡಿವಾಣ ಹಾಕಬೇಕು. ನಾಯಿಕೊಡೆಗಳಂತೆ ತಲೆಎತ್ತಿರುವ ನಕಲಿ ಕ್ಲೀನಿಕ್ಗಳಿಗೆ ನಿಯಂತ್ರಿಸಬೆಕು. ಲಂಗುಲಗಾಮು ಇಲ್ಲದೆ, ಹಣ ಕೀಳುವ ಖಾಸಗಿ ಕ್ಲೀನಿಕ್ಗಳಿಗೆ ಮತ್ತಿತರ ಆರೋಗ್ಯ ಸಂಬಂಧಪಟ್ಟ ಕ್ಲೀನಿಕ್ಗಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.
ಆರೋಗ್ಯ ರಕ್ಷಣೆಗಾಗಿ ತುಂಬಿ ತುಳುಕುತ್ತಿರುವ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ಜೊತೆಗೆ ಪ್ರತಿ ಹಳ್ಳಿಗೂ ವೈದ್ಯರು ಬೇಟಿ ನೀಡಿ ಹಳ್ಳಿಗಳಲ್ಲಿಯೇ ಚಿಕಿತ್ಸೆ ನೀಡುವ ಅನುಕೂಲ ಮಾಡಿಕೊಟ್ಟು ಬರದಿಂದ ತತ್ತರಿಸಿರುವ ಗ್ರಾಮೀಣ ಪ್ರದೇಶದ ರೈತ ಕೂಲಿ ಕಾರ್ಮಿಕರ ಆರೋಗ್ಯವನ್ನು ರಕ್ಷಣೆ ಮಾಡಬೇಕೆಂದು ಮನವಿ ನೀಡಿ ಒತ್ತಾಯಿಸಲಾಯಿತು.
ಮನವಿ ಸ್ವೀಕರಿಸಿದ ಆರೋಗ್ಯ ಅಧಿಕಾರಿ ಶ್ರೀನಿವಾಸ್ ರವರು ಹವಾಮಾವ ವೈಪರಿತ್ಯದಿಂದ ಮಕ್ಕಳಲ್ಲಿ ಜ್ವರ, ಕೆಮ್ಮು, ಕಾಣಿಸಿಕೊಳ್ಳುತ್ತಿದೆ ಸರ್ಕಾರಿ ಆಸ್ಪತ್ರೆಗಳಲ್ಲಿ ೨೪ ಘಂಟೆ ಚಿಕಿತ್ಸೆ ನೀಡಲು ಆದೇಶ ಮಾಡಲಾಗಿದೆ. ಜೊತೆಗೆ ಜಿಲ್ಲಾದ್ಯಂತ 280 ನಕಲಿ ಕ್ಲೀನಿಕ್ಗಳು ಇದ್ದು, ಅದನ್ನು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಅನುಮತಿ ಪಡೆದು, ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಮನವಿ ನೀಡುವಾಗ ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್, ಯಲ್ಲಪ್ಪ, ಹರೀಶ್, ಸುಪ್ರೀಂ ಚಲ, ವಿನೋದ್, ಶಿವಾರೆಡ್ಡಿ, ಪಾರುಕ್ ಪಾಷ, ರಾಜೇಶ್, ಗೀರೀಶ್, ರಾಧ, ಶೈಲಜ, ಶೋಭ, ನಾಗರತ್ನ, ಮುಂತಾದವರಿದ್ದರು.
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…