ನಕಾಶೆ ರಸ್ತೆಯನ್ನು ತೆರವು ಮಾಡಿ ರೈತರಿಗೆ ಅನುಕೂಲ ಮಾಡಿಕೊಟ್ಟ ಕಂದಾಯ ಇಲಾಖಾಧಿಕಾರಿಗಳು

ದೊಡ್ಡಬಳ್ಳಾಪುರ ತಾಲೂಕಿನ ಮಾಚಗೊಂಡಹಳ್ಳಿಯಿಂದ ಹೆಗ್ಗಡೆಹಳ್ಳಿ ಸಂಪರ್ಕಿಸುತ್ತಿದ್ದ ನಕಾಶೆ ರಸ್ತೆಯನ್ನ ತೆರವುಗೊಳಿಸಿ ರೈತರಿಗೆ ಅನುವುಮಾಡಿಕೊಟ್ಟ ಕಂದಾಯ ಇಲಾಖಾಧಿಕಾರಿಗಳು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಶಿವಣ್ಣ, ಅನಾದಿಕಾಲದಿಂದಲೂ ಇದ್ದ ನಕಾಶೆ ರಸ್ತೆಯನ್ನು ಕೆಲ ರೈತರು ಒತ್ತುವರಿ ಮಾಡಿಕೊಂಡಿದ್ದರು. ಇದರಿಂದ ರೈತರು ತಮ್ಮ  ಹೊಲಗಳಿಗೆ ಹೋಗಲು ರಸ್ತೆ ಇಲ್ಲದೆ ತಮ್ಮ ತೋಟ, ಹೊಲಗಳಲ್ಲಿ ಬೆಳೆದ ಬೆಳೆಯನ್ನು ಸಾಗಿಸಲು ಪರದಾಡುವಂತಾಗಿತ್ತು. ಕಳೆದ ಹಲವು ದಿನಗಳಿಂದ ನಕಾಶೆ ರಸ್ತೆಯನ್ನು ತೆರವುಗೊಳಿಸಲು ಊರಿನ ಗ್ರಾಮಸ್ಥರು, ಕರ್ನಾಟಕ ರಾಜ್ಯ ರೈತ ಸಂಘ, ಪ್ರಜಾ ವಿಮೋಚನಾ ಸಮಿತಿ ‌ನೇತೃತ್ವದಲ್ಲಿ ಅಧಿಕಾರಿಗಳನ್ನು ಸಂಪರ್ಕಿಸಿದ ಪರಿಣಾಮವಾಗಿ ಇಂದು ಒತ್ತುವರಿ ಮಾಡಿದ್ದ‌ ರಸ್ತೆಯನ್ನು ಎಲ್ಲರ ಒಮ್ಮತದಿಂದ ಅಧಿಕಾರಿಗಳು ತೆರವುಗೊಳಿಸುವಲ್ಲಿ ಯಶಸ್ವಿಯಾದರು ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ‌ಹನುಮೇಗೌಡ ಮಾತನಾಡಿ, ಎರಡು ಊರುಗಳನ್ನು ಸಂಪರ್ಕಿಸುತ್ತಿದ್ದ ನಕಾಶೆ ರಸ್ತೆಯನ್ನು ಒತ್ತುವರಿ ಮಾಡಿದ್ದರಿಂದ ರೈತರಿಗೆ ಅನಾನುಕೂಲವಾಗಿತ್ತು. ಇದನ್ನು ಮನಗಂಡು ಒತ್ತುವರಿ ಮಾಡಿಕೊಂಡಿದ್ದ ರಸ್ತೆಯನ್ನು ತೆರವುಗೊಳಿಸುವಂತೆ ಸಂಬಂದಿಸಿದ ಇಲಾಖೆಗಳಿಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಹಿನ್ನೆಲೆ ಇಂದು ಕಂದಾಯ ಇಲಾಖೆ ಅಧಿಕಾರಿಗಳು, ರೈತರ ಸಮ್ಮುಖದಲ್ಲಿ ಒತ್ತುವರಿ ತೆರವುಗೊಳಿಸಲಾಯಿತು. ಇದರಿಂದ ರೈತರಿಗೆ ತುಂಬಾ ಅನುಕೂಲವಾದಂತಾಗಿದೆ ಎಂದರು.

ಈ ವೇಳೆ ರೈತ ಮುಂಖಡರಾದ ಮುನಿನಾರಾಯಣಪ್ಪ, ಉಮಾ, ಚಲುವರಾಜ್, ಪ್ರಜಾ ವಿಮೋಚನಾ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಗುಳ್ಯ ಹನುಮಣ್ಣ, ತಾಲೂಕು ಅಧ್ಯಕ್ಷ ವಡ್ಡರಹಳ್ಳಿ ರಾಜಶೇಖರ್, ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ, ತಾಲೂಕು ಗೌರವಾಧ್ಯಕ್ಷ ಮೈಲಾರಪ್ಪ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

3 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

4 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

6 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

7 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

7 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

8 hours ago