ನಕಾಶೆ ರಸ್ತೆಯನ್ನು ತೆರವು ಮಾಡಿ ರೈತರಿಗೆ ಅನುಕೂಲ ಮಾಡಿಕೊಟ್ಟ ಕಂದಾಯ ಇಲಾಖಾಧಿಕಾರಿಗಳು

ದೊಡ್ಡಬಳ್ಳಾಪುರ ತಾಲೂಕಿನ ಮಾಚಗೊಂಡಹಳ್ಳಿಯಿಂದ ಹೆಗ್ಗಡೆಹಳ್ಳಿ ಸಂಪರ್ಕಿಸುತ್ತಿದ್ದ ನಕಾಶೆ ರಸ್ತೆಯನ್ನ ತೆರವುಗೊಳಿಸಿ ರೈತರಿಗೆ ಅನುವುಮಾಡಿಕೊಟ್ಟ ಕಂದಾಯ ಇಲಾಖಾಧಿಕಾರಿಗಳು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಶಿವಣ್ಣ, ಅನಾದಿಕಾಲದಿಂದಲೂ ಇದ್ದ ನಕಾಶೆ ರಸ್ತೆಯನ್ನು ಕೆಲ ರೈತರು ಒತ್ತುವರಿ ಮಾಡಿಕೊಂಡಿದ್ದರು. ಇದರಿಂದ ರೈತರು ತಮ್ಮ  ಹೊಲಗಳಿಗೆ ಹೋಗಲು ರಸ್ತೆ ಇಲ್ಲದೆ ತಮ್ಮ ತೋಟ, ಹೊಲಗಳಲ್ಲಿ ಬೆಳೆದ ಬೆಳೆಯನ್ನು ಸಾಗಿಸಲು ಪರದಾಡುವಂತಾಗಿತ್ತು. ಕಳೆದ ಹಲವು ದಿನಗಳಿಂದ ನಕಾಶೆ ರಸ್ತೆಯನ್ನು ತೆರವುಗೊಳಿಸಲು ಊರಿನ ಗ್ರಾಮಸ್ಥರು, ಕರ್ನಾಟಕ ರಾಜ್ಯ ರೈತ ಸಂಘ, ಪ್ರಜಾ ವಿಮೋಚನಾ ಸಮಿತಿ ‌ನೇತೃತ್ವದಲ್ಲಿ ಅಧಿಕಾರಿಗಳನ್ನು ಸಂಪರ್ಕಿಸಿದ ಪರಿಣಾಮವಾಗಿ ಇಂದು ಒತ್ತುವರಿ ಮಾಡಿದ್ದ‌ ರಸ್ತೆಯನ್ನು ಎಲ್ಲರ ಒಮ್ಮತದಿಂದ ಅಧಿಕಾರಿಗಳು ತೆರವುಗೊಳಿಸುವಲ್ಲಿ ಯಶಸ್ವಿಯಾದರು ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ‌ಹನುಮೇಗೌಡ ಮಾತನಾಡಿ, ಎರಡು ಊರುಗಳನ್ನು ಸಂಪರ್ಕಿಸುತ್ತಿದ್ದ ನಕಾಶೆ ರಸ್ತೆಯನ್ನು ಒತ್ತುವರಿ ಮಾಡಿದ್ದರಿಂದ ರೈತರಿಗೆ ಅನಾನುಕೂಲವಾಗಿತ್ತು. ಇದನ್ನು ಮನಗಂಡು ಒತ್ತುವರಿ ಮಾಡಿಕೊಂಡಿದ್ದ ರಸ್ತೆಯನ್ನು ತೆರವುಗೊಳಿಸುವಂತೆ ಸಂಬಂದಿಸಿದ ಇಲಾಖೆಗಳಿಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಹಿನ್ನೆಲೆ ಇಂದು ಕಂದಾಯ ಇಲಾಖೆ ಅಧಿಕಾರಿಗಳು, ರೈತರ ಸಮ್ಮುಖದಲ್ಲಿ ಒತ್ತುವರಿ ತೆರವುಗೊಳಿಸಲಾಯಿತು. ಇದರಿಂದ ರೈತರಿಗೆ ತುಂಬಾ ಅನುಕೂಲವಾದಂತಾಗಿದೆ ಎಂದರು.

ಈ ವೇಳೆ ರೈತ ಮುಂಖಡರಾದ ಮುನಿನಾರಾಯಣಪ್ಪ, ಉಮಾ, ಚಲುವರಾಜ್, ಪ್ರಜಾ ವಿಮೋಚನಾ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಗುಳ್ಯ ಹನುಮಣ್ಣ, ತಾಲೂಕು ಅಧ್ಯಕ್ಷ ವಡ್ಡರಹಳ್ಳಿ ರಾಜಶೇಖರ್, ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ, ತಾಲೂಕು ಗೌರವಾಧ್ಯಕ್ಷ ಮೈಲಾರಪ್ಪ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

5 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

20 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago