ನಕಾಶೆ ರಸ್ತೆಯನ್ನು ತೆರವು ಮಾಡಿ ರೈತರಿಗೆ ಅನುಕೂಲ ಮಾಡಿಕೊಟ್ಟ ಕಂದಾಯ ಇಲಾಖಾಧಿಕಾರಿಗಳು

ದೊಡ್ಡಬಳ್ಳಾಪುರ ತಾಲೂಕಿನ ಮಾಚಗೊಂಡಹಳ್ಳಿಯಿಂದ ಹೆಗ್ಗಡೆಹಳ್ಳಿ ಸಂಪರ್ಕಿಸುತ್ತಿದ್ದ ನಕಾಶೆ ರಸ್ತೆಯನ್ನ ತೆರವುಗೊಳಿಸಿ ರೈತರಿಗೆ ಅನುವುಮಾಡಿಕೊಟ್ಟ ಕಂದಾಯ ಇಲಾಖಾಧಿಕಾರಿಗಳು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಶಿವಣ್ಣ, ಅನಾದಿಕಾಲದಿಂದಲೂ ಇದ್ದ ನಕಾಶೆ ರಸ್ತೆಯನ್ನು ಕೆಲ ರೈತರು ಒತ್ತುವರಿ ಮಾಡಿಕೊಂಡಿದ್ದರು. ಇದರಿಂದ ರೈತರು ತಮ್ಮ  ಹೊಲಗಳಿಗೆ ಹೋಗಲು ರಸ್ತೆ ಇಲ್ಲದೆ ತಮ್ಮ ತೋಟ, ಹೊಲಗಳಲ್ಲಿ ಬೆಳೆದ ಬೆಳೆಯನ್ನು ಸಾಗಿಸಲು ಪರದಾಡುವಂತಾಗಿತ್ತು. ಕಳೆದ ಹಲವು ದಿನಗಳಿಂದ ನಕಾಶೆ ರಸ್ತೆಯನ್ನು ತೆರವುಗೊಳಿಸಲು ಊರಿನ ಗ್ರಾಮಸ್ಥರು, ಕರ್ನಾಟಕ ರಾಜ್ಯ ರೈತ ಸಂಘ, ಪ್ರಜಾ ವಿಮೋಚನಾ ಸಮಿತಿ ‌ನೇತೃತ್ವದಲ್ಲಿ ಅಧಿಕಾರಿಗಳನ್ನು ಸಂಪರ್ಕಿಸಿದ ಪರಿಣಾಮವಾಗಿ ಇಂದು ಒತ್ತುವರಿ ಮಾಡಿದ್ದ‌ ರಸ್ತೆಯನ್ನು ಎಲ್ಲರ ಒಮ್ಮತದಿಂದ ಅಧಿಕಾರಿಗಳು ತೆರವುಗೊಳಿಸುವಲ್ಲಿ ಯಶಸ್ವಿಯಾದರು ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ‌ಹನುಮೇಗೌಡ ಮಾತನಾಡಿ, ಎರಡು ಊರುಗಳನ್ನು ಸಂಪರ್ಕಿಸುತ್ತಿದ್ದ ನಕಾಶೆ ರಸ್ತೆಯನ್ನು ಒತ್ತುವರಿ ಮಾಡಿದ್ದರಿಂದ ರೈತರಿಗೆ ಅನಾನುಕೂಲವಾಗಿತ್ತು. ಇದನ್ನು ಮನಗಂಡು ಒತ್ತುವರಿ ಮಾಡಿಕೊಂಡಿದ್ದ ರಸ್ತೆಯನ್ನು ತೆರವುಗೊಳಿಸುವಂತೆ ಸಂಬಂದಿಸಿದ ಇಲಾಖೆಗಳಿಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಹಿನ್ನೆಲೆ ಇಂದು ಕಂದಾಯ ಇಲಾಖೆ ಅಧಿಕಾರಿಗಳು, ರೈತರ ಸಮ್ಮುಖದಲ್ಲಿ ಒತ್ತುವರಿ ತೆರವುಗೊಳಿಸಲಾಯಿತು. ಇದರಿಂದ ರೈತರಿಗೆ ತುಂಬಾ ಅನುಕೂಲವಾದಂತಾಗಿದೆ ಎಂದರು.

ಈ ವೇಳೆ ರೈತ ಮುಂಖಡರಾದ ಮುನಿನಾರಾಯಣಪ್ಪ, ಉಮಾ, ಚಲುವರಾಜ್, ಪ್ರಜಾ ವಿಮೋಚನಾ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಗುಳ್ಯ ಹನುಮಣ್ಣ, ತಾಲೂಕು ಅಧ್ಯಕ್ಷ ವಡ್ಡರಹಳ್ಳಿ ರಾಜಶೇಖರ್, ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ, ತಾಲೂಕು ಗೌರವಾಧ್ಯಕ್ಷ ಮೈಲಾರಪ್ಪ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

17 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

20 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

21 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

24 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago