ನಕಾಶೆ ರಸ್ತೆಯನ್ನು ತೆರವು ಮಾಡಿ ರೈತರಿಗೆ ಅನುಕೂಲ ಮಾಡಿಕೊಟ್ಟ ಕಂದಾಯ ಇಲಾಖಾಧಿಕಾರಿಗಳು

ದೊಡ್ಡಬಳ್ಳಾಪುರ ತಾಲೂಕಿನ ಮಾಚಗೊಂಡಹಳ್ಳಿಯಿಂದ ಹೆಗ್ಗಡೆಹಳ್ಳಿ ಸಂಪರ್ಕಿಸುತ್ತಿದ್ದ ನಕಾಶೆ ರಸ್ತೆಯನ್ನ ತೆರವುಗೊಳಿಸಿ ರೈತರಿಗೆ ಅನುವುಮಾಡಿಕೊಟ್ಟ ಕಂದಾಯ ಇಲಾಖಾಧಿಕಾರಿಗಳು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಶಿವಣ್ಣ, ಅನಾದಿಕಾಲದಿಂದಲೂ ಇದ್ದ ನಕಾಶೆ ರಸ್ತೆಯನ್ನು ಕೆಲ ರೈತರು ಒತ್ತುವರಿ ಮಾಡಿಕೊಂಡಿದ್ದರು. ಇದರಿಂದ ರೈತರು ತಮ್ಮ  ಹೊಲಗಳಿಗೆ ಹೋಗಲು ರಸ್ತೆ ಇಲ್ಲದೆ ತಮ್ಮ ತೋಟ, ಹೊಲಗಳಲ್ಲಿ ಬೆಳೆದ ಬೆಳೆಯನ್ನು ಸಾಗಿಸಲು ಪರದಾಡುವಂತಾಗಿತ್ತು. ಕಳೆದ ಹಲವು ದಿನಗಳಿಂದ ನಕಾಶೆ ರಸ್ತೆಯನ್ನು ತೆರವುಗೊಳಿಸಲು ಊರಿನ ಗ್ರಾಮಸ್ಥರು, ಕರ್ನಾಟಕ ರಾಜ್ಯ ರೈತ ಸಂಘ, ಪ್ರಜಾ ವಿಮೋಚನಾ ಸಮಿತಿ ‌ನೇತೃತ್ವದಲ್ಲಿ ಅಧಿಕಾರಿಗಳನ್ನು ಸಂಪರ್ಕಿಸಿದ ಪರಿಣಾಮವಾಗಿ ಇಂದು ಒತ್ತುವರಿ ಮಾಡಿದ್ದ‌ ರಸ್ತೆಯನ್ನು ಎಲ್ಲರ ಒಮ್ಮತದಿಂದ ಅಧಿಕಾರಿಗಳು ತೆರವುಗೊಳಿಸುವಲ್ಲಿ ಯಶಸ್ವಿಯಾದರು ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ‌ಹನುಮೇಗೌಡ ಮಾತನಾಡಿ, ಎರಡು ಊರುಗಳನ್ನು ಸಂಪರ್ಕಿಸುತ್ತಿದ್ದ ನಕಾಶೆ ರಸ್ತೆಯನ್ನು ಒತ್ತುವರಿ ಮಾಡಿದ್ದರಿಂದ ರೈತರಿಗೆ ಅನಾನುಕೂಲವಾಗಿತ್ತು. ಇದನ್ನು ಮನಗಂಡು ಒತ್ತುವರಿ ಮಾಡಿಕೊಂಡಿದ್ದ ರಸ್ತೆಯನ್ನು ತೆರವುಗೊಳಿಸುವಂತೆ ಸಂಬಂದಿಸಿದ ಇಲಾಖೆಗಳಿಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಹಿನ್ನೆಲೆ ಇಂದು ಕಂದಾಯ ಇಲಾಖೆ ಅಧಿಕಾರಿಗಳು, ರೈತರ ಸಮ್ಮುಖದಲ್ಲಿ ಒತ್ತುವರಿ ತೆರವುಗೊಳಿಸಲಾಯಿತು. ಇದರಿಂದ ರೈತರಿಗೆ ತುಂಬಾ ಅನುಕೂಲವಾದಂತಾಗಿದೆ ಎಂದರು.

ಈ ವೇಳೆ ರೈತ ಮುಂಖಡರಾದ ಮುನಿನಾರಾಯಣಪ್ಪ, ಉಮಾ, ಚಲುವರಾಜ್, ಪ್ರಜಾ ವಿಮೋಚನಾ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಗುಳ್ಯ ಹನುಮಣ್ಣ, ತಾಲೂಕು ಅಧ್ಯಕ್ಷ ವಡ್ಡರಹಳ್ಳಿ ರಾಜಶೇಖರ್, ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ, ತಾಲೂಕು ಗೌರವಾಧ್ಯಕ್ಷ ಮೈಲಾರಪ್ಪ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

5 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

17 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

17 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

18 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

21 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago