ನಗರಕ್ಕೆ ಕುಡಿಯುವ ನೀರನ್ನ ಸರಬರಾಜು ಮಾಡುವ ಜಕ್ಕಲ ಮಡಗು ಜಲಾಶಯದಲ್ಲಿ ನೀರಿನ ಸಂಗ್ರಹ ಕುಸಿತ: ನೀರನ್ನು ನಿಯಮಿತವಾಗಿ ಬಳಸುವಂತೆ ನಗರಸಭೆ ಮನವಿ

ರಾಜ್ಯದಲ್ಲಿ ಮುಂಗಾರು ವಿಳಂಬ ಮತ್ತು ಪೂರ್ವ ಮಾನ್ಸೂನ್ ಮಳೆಯ ಕೊರತೆಯಿಂದಾಗಿ, ಹೆಚ್ಚಿನ ಅಣೆಕಟ್ಟುಗಳು ಮತ್ತು ಜಲಾಶಯಗಳಲ್ಲಿ ನೀರಿನ ಮಟ್ಟವು ತೀವ್ರವಾಗಿ ಕುಸಿದಿದೆ. ಅದರಂತೆ ನಗರಕ್ಕೆ ಕುಡಿಯುವ ನೀರನ್ನ ಸರಬರಾಜು ಮಾಡುವ ಜಕ್ಕಲ ಮಡಗು ಜಲಾಶಯದಲ್ಲಿ ಸಹ ನೀರಿನ ಸಂಗ್ರಹ ಕುಸಿತಗೊಂಡಿದೆ.

ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಎರಡು ನಗರಗಳಿಗೂ ಕುಡಿಯುವ ನೀರು ಸರಬರಾಜು ಮಾಡುವ ಜಕ್ಕಲಮಡಗು ಜಲಾಶಯ ಇರುವುದು ಚಿಕ್ಕಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ. ಆದರೆ ಅದರ ಸಂಪೂರ್ಣ ಜಲಾನಯನ ಪ್ರದೇಶ ಬರುವುದು ದೊಡ್ಡಬಳ್ಳಾಪುರ ತಾಲೂಕಿನಲ್ಲಿ. ಸುಮಾರು 64 ಅಡಿಯಷ್ಟು ಆಳ ನೀರು ನಿಲ್ಲುವ ಸಮರ್ಥ್ಯ ಹೊಂದಿರುವ ಜಕ್ಕಲ ಮಡಗು ಜಲಾಶಯ.

ಜಕ್ಕಲಮಡುಗು ಜಲಾಶಯದಲ್ಲಿ ಪ್ರಸ್ತುತ ನೀರಿನ ಸಂಗ್ರಹ ಕುಸಿತಗೊಂಡಿದೆ‌. ಗರಿಷ್ಠ 64 ಅಡಿಗಳ ಜಲಾಶಯದಲ್ಲಿ ಸದ್ಯದ ನೀರಿನ ಮಟ್ಟ 59 ಅಡಿಯಷ್ಟಿದೆ. ಪ್ರತಿದಿನ ದೊಡ್ಡಬಳ್ಳಾಪುರ ನಗರಕ್ಕೆ ಬೇಕಾಗಿರುವ ನೀರಿನ ಪ್ರಮಾಣ 14.17 MLD. ಆದರೆ ಪ್ರತಿದಿನ ದೊಡ್ಡಬಳ್ಳಾಪುರ ನಗರಕ್ಕೆ ಜಲಾಶಯದಿಂದ 2 MLD(ಕನಿಷ್ಠ ದ್ರವ್ಯ ವಿಸರ್ಜನೆ) ನೀರು ಸರಬರಾಜು ಆಗುತ್ತಿದೆ. 104 ಕೊಳವೆಬಾವಿಗಳಿಂದ 4 MLD ನೀರು ಮಾತ್ರ ಸರಬರಾಜು ಆಗುತ್ತದೆ.

ಸದ್ಯ ಜಕ್ಕಲ ಮಡಗು ಜಲಾಶಯ ಹಾಗೂ ಕೊಳವೆಬಾವಿಗಳಿಂದ ಸರಬರಾಜು ಆಗುತ್ತಿರುವ ಒಟ್ಟು ನೀರಿನ ಪ್ರಮಾಣ 6 MLD ಮಾತ್ರ. ಇನ್ನೂ 7.17 MLD ಕುಡಿಯುವ ನೀರನ ಅಗತ್ಯ ದೊಡ್ಡಬಳ್ಳಾಪುರ ನಗರಕ್ಕೆ ಇದೆ. ನಗರದ ಮನೆಗಳಿಗೆ 6 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಅದರಲ್ಲಿ ಪ್ರತಿ ಪ್ರಜೆಗೆ ಒಂದು ದಿನಕ್ಕೆ 75 ಲೀಟರ್ ನೀರು ಲಭ್ಯತೆ ಆಗುತ್ತಿದೆ.

ಸದ್ಯ ನಗರದ ಜನಕ್ಕೆ ಕುಡಿಯುವ ನೀರಿಗೆ ಯಾವ ಸಮಸ್ಯೆ ಆಗೋದಿಲ್ಲ, ಪ್ರತಿ ಕುಟುಬಂಕ್ಕೆ ಬೇಕಾಗುವ ನೀರು ಪ್ರಸ್ತುತ ಲಭ್ಯವಿದೆ. ಆದರೆ ಹಿತಮಿತವಾಗಿ ನೀರನ್ನು ಬಳಸಬೇಕು ಎಂದು ನಾಗರಿಕರಲ್ಲಿ ಮನವಿ ಮಾಡಿರುವ ನಗರಸಭೆ ಕಮಿಷನರ್ ಕೆ.ಜಿ.ಶಿವಶಂಕರ್.

Ramesh Babu

Journalist

Recent Posts

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

47 minutes ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

2 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

6 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

7 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

7 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

11 hours ago