ನಗರಕ್ಕೆ ಕುಡಿಯುವ ನೀರನ್ನ ಸರಬರಾಜು ಮಾಡುವ ಜಕ್ಕಲ ಮಡಗು ಜಲಾಶಯದಲ್ಲಿ ನೀರಿನ ಸಂಗ್ರಹ ಕುಸಿತ: ನೀರನ್ನು ನಿಯಮಿತವಾಗಿ ಬಳಸುವಂತೆ ನಗರಸಭೆ ಮನವಿ

ರಾಜ್ಯದಲ್ಲಿ ಮುಂಗಾರು ವಿಳಂಬ ಮತ್ತು ಪೂರ್ವ ಮಾನ್ಸೂನ್ ಮಳೆಯ ಕೊರತೆಯಿಂದಾಗಿ, ಹೆಚ್ಚಿನ ಅಣೆಕಟ್ಟುಗಳು ಮತ್ತು ಜಲಾಶಯಗಳಲ್ಲಿ ನೀರಿನ ಮಟ್ಟವು ತೀವ್ರವಾಗಿ ಕುಸಿದಿದೆ. ಅದರಂತೆ ನಗರಕ್ಕೆ ಕುಡಿಯುವ ನೀರನ್ನ ಸರಬರಾಜು ಮಾಡುವ ಜಕ್ಕಲ ಮಡಗು ಜಲಾಶಯದಲ್ಲಿ ಸಹ ನೀರಿನ ಸಂಗ್ರಹ ಕುಸಿತಗೊಂಡಿದೆ.

ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಎರಡು ನಗರಗಳಿಗೂ ಕುಡಿಯುವ ನೀರು ಸರಬರಾಜು ಮಾಡುವ ಜಕ್ಕಲಮಡಗು ಜಲಾಶಯ ಇರುವುದು ಚಿಕ್ಕಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ. ಆದರೆ ಅದರ ಸಂಪೂರ್ಣ ಜಲಾನಯನ ಪ್ರದೇಶ ಬರುವುದು ದೊಡ್ಡಬಳ್ಳಾಪುರ ತಾಲೂಕಿನಲ್ಲಿ. ಸುಮಾರು 64 ಅಡಿಯಷ್ಟು ಆಳ ನೀರು ನಿಲ್ಲುವ ಸಮರ್ಥ್ಯ ಹೊಂದಿರುವ ಜಕ್ಕಲ ಮಡಗು ಜಲಾಶಯ.

ಜಕ್ಕಲಮಡುಗು ಜಲಾಶಯದಲ್ಲಿ ಪ್ರಸ್ತುತ ನೀರಿನ ಸಂಗ್ರಹ ಕುಸಿತಗೊಂಡಿದೆ‌. ಗರಿಷ್ಠ 64 ಅಡಿಗಳ ಜಲಾಶಯದಲ್ಲಿ ಸದ್ಯದ ನೀರಿನ ಮಟ್ಟ 59 ಅಡಿಯಷ್ಟಿದೆ. ಪ್ರತಿದಿನ ದೊಡ್ಡಬಳ್ಳಾಪುರ ನಗರಕ್ಕೆ ಬೇಕಾಗಿರುವ ನೀರಿನ ಪ್ರಮಾಣ 14.17 MLD. ಆದರೆ ಪ್ರತಿದಿನ ದೊಡ್ಡಬಳ್ಳಾಪುರ ನಗರಕ್ಕೆ ಜಲಾಶಯದಿಂದ 2 MLD(ಕನಿಷ್ಠ ದ್ರವ್ಯ ವಿಸರ್ಜನೆ) ನೀರು ಸರಬರಾಜು ಆಗುತ್ತಿದೆ. 104 ಕೊಳವೆಬಾವಿಗಳಿಂದ 4 MLD ನೀರು ಮಾತ್ರ ಸರಬರಾಜು ಆಗುತ್ತದೆ.

ಸದ್ಯ ಜಕ್ಕಲ ಮಡಗು ಜಲಾಶಯ ಹಾಗೂ ಕೊಳವೆಬಾವಿಗಳಿಂದ ಸರಬರಾಜು ಆಗುತ್ತಿರುವ ಒಟ್ಟು ನೀರಿನ ಪ್ರಮಾಣ 6 MLD ಮಾತ್ರ. ಇನ್ನೂ 7.17 MLD ಕುಡಿಯುವ ನೀರನ ಅಗತ್ಯ ದೊಡ್ಡಬಳ್ಳಾಪುರ ನಗರಕ್ಕೆ ಇದೆ. ನಗರದ ಮನೆಗಳಿಗೆ 6 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಅದರಲ್ಲಿ ಪ್ರತಿ ಪ್ರಜೆಗೆ ಒಂದು ದಿನಕ್ಕೆ 75 ಲೀಟರ್ ನೀರು ಲಭ್ಯತೆ ಆಗುತ್ತಿದೆ.

ಸದ್ಯ ನಗರದ ಜನಕ್ಕೆ ಕುಡಿಯುವ ನೀರಿಗೆ ಯಾವ ಸಮಸ್ಯೆ ಆಗೋದಿಲ್ಲ, ಪ್ರತಿ ಕುಟುಬಂಕ್ಕೆ ಬೇಕಾಗುವ ನೀರು ಪ್ರಸ್ತುತ ಲಭ್ಯವಿದೆ. ಆದರೆ ಹಿತಮಿತವಾಗಿ ನೀರನ್ನು ಬಳಸಬೇಕು ಎಂದು ನಾಗರಿಕರಲ್ಲಿ ಮನವಿ ಮಾಡಿರುವ ನಗರಸಭೆ ಕಮಿಷನರ್ ಕೆ.ಜಿ.ಶಿವಶಂಕರ್.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

10 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

10 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

11 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

12 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

15 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

15 hours ago