ನಗರಕ್ಕೆ ಕುಡಿಯುವ ನೀರನ್ನ ಸರಬರಾಜು ಮಾಡುವ ಜಕ್ಕಲ ಮಡಗು ಜಲಾಶಯದಲ್ಲಿ ನೀರಿನ ಸಂಗ್ರಹ ಕುಸಿತ: ನೀರನ್ನು ನಿಯಮಿತವಾಗಿ ಬಳಸುವಂತೆ ನಗರಸಭೆ ಮನವಿ

ರಾಜ್ಯದಲ್ಲಿ ಮುಂಗಾರು ವಿಳಂಬ ಮತ್ತು ಪೂರ್ವ ಮಾನ್ಸೂನ್ ಮಳೆಯ ಕೊರತೆಯಿಂದಾಗಿ, ಹೆಚ್ಚಿನ ಅಣೆಕಟ್ಟುಗಳು ಮತ್ತು ಜಲಾಶಯಗಳಲ್ಲಿ ನೀರಿನ ಮಟ್ಟವು ತೀವ್ರವಾಗಿ ಕುಸಿದಿದೆ. ಅದರಂತೆ ನಗರಕ್ಕೆ ಕುಡಿಯುವ ನೀರನ್ನ ಸರಬರಾಜು ಮಾಡುವ ಜಕ್ಕಲ ಮಡಗು ಜಲಾಶಯದಲ್ಲಿ ಸಹ ನೀರಿನ ಸಂಗ್ರಹ ಕುಸಿತಗೊಂಡಿದೆ.

ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಎರಡು ನಗರಗಳಿಗೂ ಕುಡಿಯುವ ನೀರು ಸರಬರಾಜು ಮಾಡುವ ಜಕ್ಕಲಮಡಗು ಜಲಾಶಯ ಇರುವುದು ಚಿಕ್ಕಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ. ಆದರೆ ಅದರ ಸಂಪೂರ್ಣ ಜಲಾನಯನ ಪ್ರದೇಶ ಬರುವುದು ದೊಡ್ಡಬಳ್ಳಾಪುರ ತಾಲೂಕಿನಲ್ಲಿ. ಸುಮಾರು 64 ಅಡಿಯಷ್ಟು ಆಳ ನೀರು ನಿಲ್ಲುವ ಸಮರ್ಥ್ಯ ಹೊಂದಿರುವ ಜಕ್ಕಲ ಮಡಗು ಜಲಾಶಯ.

ಜಕ್ಕಲಮಡುಗು ಜಲಾಶಯದಲ್ಲಿ ಪ್ರಸ್ತುತ ನೀರಿನ ಸಂಗ್ರಹ ಕುಸಿತಗೊಂಡಿದೆ‌. ಗರಿಷ್ಠ 64 ಅಡಿಗಳ ಜಲಾಶಯದಲ್ಲಿ ಸದ್ಯದ ನೀರಿನ ಮಟ್ಟ 59 ಅಡಿಯಷ್ಟಿದೆ. ಪ್ರತಿದಿನ ದೊಡ್ಡಬಳ್ಳಾಪುರ ನಗರಕ್ಕೆ ಬೇಕಾಗಿರುವ ನೀರಿನ ಪ್ರಮಾಣ 14.17 MLD. ಆದರೆ ಪ್ರತಿದಿನ ದೊಡ್ಡಬಳ್ಳಾಪುರ ನಗರಕ್ಕೆ ಜಲಾಶಯದಿಂದ 2 MLD(ಕನಿಷ್ಠ ದ್ರವ್ಯ ವಿಸರ್ಜನೆ) ನೀರು ಸರಬರಾಜು ಆಗುತ್ತಿದೆ. 104 ಕೊಳವೆಬಾವಿಗಳಿಂದ 4 MLD ನೀರು ಮಾತ್ರ ಸರಬರಾಜು ಆಗುತ್ತದೆ.

ಸದ್ಯ ಜಕ್ಕಲ ಮಡಗು ಜಲಾಶಯ ಹಾಗೂ ಕೊಳವೆಬಾವಿಗಳಿಂದ ಸರಬರಾಜು ಆಗುತ್ತಿರುವ ಒಟ್ಟು ನೀರಿನ ಪ್ರಮಾಣ 6 MLD ಮಾತ್ರ. ಇನ್ನೂ 7.17 MLD ಕುಡಿಯುವ ನೀರನ ಅಗತ್ಯ ದೊಡ್ಡಬಳ್ಳಾಪುರ ನಗರಕ್ಕೆ ಇದೆ. ನಗರದ ಮನೆಗಳಿಗೆ 6 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಅದರಲ್ಲಿ ಪ್ರತಿ ಪ್ರಜೆಗೆ ಒಂದು ದಿನಕ್ಕೆ 75 ಲೀಟರ್ ನೀರು ಲಭ್ಯತೆ ಆಗುತ್ತಿದೆ.

ಸದ್ಯ ನಗರದ ಜನಕ್ಕೆ ಕುಡಿಯುವ ನೀರಿಗೆ ಯಾವ ಸಮಸ್ಯೆ ಆಗೋದಿಲ್ಲ, ಪ್ರತಿ ಕುಟುಬಂಕ್ಕೆ ಬೇಕಾಗುವ ನೀರು ಪ್ರಸ್ತುತ ಲಭ್ಯವಿದೆ. ಆದರೆ ಹಿತಮಿತವಾಗಿ ನೀರನ್ನು ಬಳಸಬೇಕು ಎಂದು ನಾಗರಿಕರಲ್ಲಿ ಮನವಿ ಮಾಡಿರುವ ನಗರಸಭೆ ಕಮಿಷನರ್ ಕೆ.ಜಿ.ಶಿವಶಂಕರ್.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

9 minutes ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

14 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

16 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

16 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago