ನಗರಕ್ಕೆ ಕುಡಿಯುವ ನೀರನ್ನ ಸರಬರಾಜು ಮಾಡುವ ಜಕ್ಕಲ ಮಡಗು ಜಲಾಶಯದಲ್ಲಿ ನೀರಿನ ಸಂಗ್ರಹ ಕುಸಿತ: ನೀರನ್ನು ನಿಯಮಿತವಾಗಿ ಬಳಸುವಂತೆ ನಗರಸಭೆ ಮನವಿ

ರಾಜ್ಯದಲ್ಲಿ ಮುಂಗಾರು ವಿಳಂಬ ಮತ್ತು ಪೂರ್ವ ಮಾನ್ಸೂನ್ ಮಳೆಯ ಕೊರತೆಯಿಂದಾಗಿ, ಹೆಚ್ಚಿನ ಅಣೆಕಟ್ಟುಗಳು ಮತ್ತು ಜಲಾಶಯಗಳಲ್ಲಿ ನೀರಿನ ಮಟ್ಟವು ತೀವ್ರವಾಗಿ ಕುಸಿದಿದೆ. ಅದರಂತೆ ನಗರಕ್ಕೆ ಕುಡಿಯುವ ನೀರನ್ನ ಸರಬರಾಜು ಮಾಡುವ ಜಕ್ಕಲ ಮಡಗು ಜಲಾಶಯದಲ್ಲಿ ಸಹ ನೀರಿನ ಸಂಗ್ರಹ ಕುಸಿತಗೊಂಡಿದೆ.

ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಎರಡು ನಗರಗಳಿಗೂ ಕುಡಿಯುವ ನೀರು ಸರಬರಾಜು ಮಾಡುವ ಜಕ್ಕಲಮಡಗು ಜಲಾಶಯ ಇರುವುದು ಚಿಕ್ಕಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ. ಆದರೆ ಅದರ ಸಂಪೂರ್ಣ ಜಲಾನಯನ ಪ್ರದೇಶ ಬರುವುದು ದೊಡ್ಡಬಳ್ಳಾಪುರ ತಾಲೂಕಿನಲ್ಲಿ. ಸುಮಾರು 64 ಅಡಿಯಷ್ಟು ಆಳ ನೀರು ನಿಲ್ಲುವ ಸಮರ್ಥ್ಯ ಹೊಂದಿರುವ ಜಕ್ಕಲ ಮಡಗು ಜಲಾಶಯ.

ಜಕ್ಕಲಮಡುಗು ಜಲಾಶಯದಲ್ಲಿ ಪ್ರಸ್ತುತ ನೀರಿನ ಸಂಗ್ರಹ ಕುಸಿತಗೊಂಡಿದೆ‌. ಗರಿಷ್ಠ 64 ಅಡಿಗಳ ಜಲಾಶಯದಲ್ಲಿ ಸದ್ಯದ ನೀರಿನ ಮಟ್ಟ 59 ಅಡಿಯಷ್ಟಿದೆ. ಪ್ರತಿದಿನ ದೊಡ್ಡಬಳ್ಳಾಪುರ ನಗರಕ್ಕೆ ಬೇಕಾಗಿರುವ ನೀರಿನ ಪ್ರಮಾಣ 14.17 MLD. ಆದರೆ ಪ್ರತಿದಿನ ದೊಡ್ಡಬಳ್ಳಾಪುರ ನಗರಕ್ಕೆ ಜಲಾಶಯದಿಂದ 2 MLD(ಕನಿಷ್ಠ ದ್ರವ್ಯ ವಿಸರ್ಜನೆ) ನೀರು ಸರಬರಾಜು ಆಗುತ್ತಿದೆ. 104 ಕೊಳವೆಬಾವಿಗಳಿಂದ 4 MLD ನೀರು ಮಾತ್ರ ಸರಬರಾಜು ಆಗುತ್ತದೆ.

ಸದ್ಯ ಜಕ್ಕಲ ಮಡಗು ಜಲಾಶಯ ಹಾಗೂ ಕೊಳವೆಬಾವಿಗಳಿಂದ ಸರಬರಾಜು ಆಗುತ್ತಿರುವ ಒಟ್ಟು ನೀರಿನ ಪ್ರಮಾಣ 6 MLD ಮಾತ್ರ. ಇನ್ನೂ 7.17 MLD ಕುಡಿಯುವ ನೀರನ ಅಗತ್ಯ ದೊಡ್ಡಬಳ್ಳಾಪುರ ನಗರಕ್ಕೆ ಇದೆ. ನಗರದ ಮನೆಗಳಿಗೆ 6 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಅದರಲ್ಲಿ ಪ್ರತಿ ಪ್ರಜೆಗೆ ಒಂದು ದಿನಕ್ಕೆ 75 ಲೀಟರ್ ನೀರು ಲಭ್ಯತೆ ಆಗುತ್ತಿದೆ.

ಸದ್ಯ ನಗರದ ಜನಕ್ಕೆ ಕುಡಿಯುವ ನೀರಿಗೆ ಯಾವ ಸಮಸ್ಯೆ ಆಗೋದಿಲ್ಲ, ಪ್ರತಿ ಕುಟುಬಂಕ್ಕೆ ಬೇಕಾಗುವ ನೀರು ಪ್ರಸ್ತುತ ಲಭ್ಯವಿದೆ. ಆದರೆ ಹಿತಮಿತವಾಗಿ ನೀರನ್ನು ಬಳಸಬೇಕು ಎಂದು ನಾಗರಿಕರಲ್ಲಿ ಮನವಿ ಮಾಡಿರುವ ನಗರಸಭೆ ಕಮಿಷನರ್ ಕೆ.ಜಿ.ಶಿವಶಂಕರ್.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

15 minutes ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

4 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

5 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

12 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

23 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago