ನಗರಕ್ಕೆ ಕುಡಿಯುವ ನೀರನ್ನ ಸರಬರಾಜು ಮಾಡುವ ಜಕ್ಕಲ ಮಡಗು ಜಲಾಶಯದಲ್ಲಿ ನೀರಿನ ಸಂಗ್ರಹ ಕುಸಿತ: ನೀರನ್ನು ನಿಯಮಿತವಾಗಿ ಬಳಸುವಂತೆ ನಗರಸಭೆ ಮನವಿ

ರಾಜ್ಯದಲ್ಲಿ ಮುಂಗಾರು ವಿಳಂಬ ಮತ್ತು ಪೂರ್ವ ಮಾನ್ಸೂನ್ ಮಳೆಯ ಕೊರತೆಯಿಂದಾಗಿ, ಹೆಚ್ಚಿನ ಅಣೆಕಟ್ಟುಗಳು ಮತ್ತು ಜಲಾಶಯಗಳಲ್ಲಿ ನೀರಿನ ಮಟ್ಟವು ತೀವ್ರವಾಗಿ ಕುಸಿದಿದೆ. ಅದರಂತೆ ನಗರಕ್ಕೆ ಕುಡಿಯುವ ನೀರನ್ನ ಸರಬರಾಜು ಮಾಡುವ ಜಕ್ಕಲ ಮಡಗು ಜಲಾಶಯದಲ್ಲಿ ಸಹ ನೀರಿನ ಸಂಗ್ರಹ ಕುಸಿತಗೊಂಡಿದೆ.

ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಎರಡು ನಗರಗಳಿಗೂ ಕುಡಿಯುವ ನೀರು ಸರಬರಾಜು ಮಾಡುವ ಜಕ್ಕಲಮಡಗು ಜಲಾಶಯ ಇರುವುದು ಚಿಕ್ಕಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ. ಆದರೆ ಅದರ ಸಂಪೂರ್ಣ ಜಲಾನಯನ ಪ್ರದೇಶ ಬರುವುದು ದೊಡ್ಡಬಳ್ಳಾಪುರ ತಾಲೂಕಿನಲ್ಲಿ. ಸುಮಾರು 64 ಅಡಿಯಷ್ಟು ಆಳ ನೀರು ನಿಲ್ಲುವ ಸಮರ್ಥ್ಯ ಹೊಂದಿರುವ ಜಕ್ಕಲ ಮಡಗು ಜಲಾಶಯ.

ಜಕ್ಕಲಮಡುಗು ಜಲಾಶಯದಲ್ಲಿ ಪ್ರಸ್ತುತ ನೀರಿನ ಸಂಗ್ರಹ ಕುಸಿತಗೊಂಡಿದೆ‌. ಗರಿಷ್ಠ 64 ಅಡಿಗಳ ಜಲಾಶಯದಲ್ಲಿ ಸದ್ಯದ ನೀರಿನ ಮಟ್ಟ 59 ಅಡಿಯಷ್ಟಿದೆ. ಪ್ರತಿದಿನ ದೊಡ್ಡಬಳ್ಳಾಪುರ ನಗರಕ್ಕೆ ಬೇಕಾಗಿರುವ ನೀರಿನ ಪ್ರಮಾಣ 14.17 MLD. ಆದರೆ ಪ್ರತಿದಿನ ದೊಡ್ಡಬಳ್ಳಾಪುರ ನಗರಕ್ಕೆ ಜಲಾಶಯದಿಂದ 2 MLD(ಕನಿಷ್ಠ ದ್ರವ್ಯ ವಿಸರ್ಜನೆ) ನೀರು ಸರಬರಾಜು ಆಗುತ್ತಿದೆ. 104 ಕೊಳವೆಬಾವಿಗಳಿಂದ 4 MLD ನೀರು ಮಾತ್ರ ಸರಬರಾಜು ಆಗುತ್ತದೆ.

ಸದ್ಯ ಜಕ್ಕಲ ಮಡಗು ಜಲಾಶಯ ಹಾಗೂ ಕೊಳವೆಬಾವಿಗಳಿಂದ ಸರಬರಾಜು ಆಗುತ್ತಿರುವ ಒಟ್ಟು ನೀರಿನ ಪ್ರಮಾಣ 6 MLD ಮಾತ್ರ. ಇನ್ನೂ 7.17 MLD ಕುಡಿಯುವ ನೀರನ ಅಗತ್ಯ ದೊಡ್ಡಬಳ್ಳಾಪುರ ನಗರಕ್ಕೆ ಇದೆ. ನಗರದ ಮನೆಗಳಿಗೆ 6 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಅದರಲ್ಲಿ ಪ್ರತಿ ಪ್ರಜೆಗೆ ಒಂದು ದಿನಕ್ಕೆ 75 ಲೀಟರ್ ನೀರು ಲಭ್ಯತೆ ಆಗುತ್ತಿದೆ.

ಸದ್ಯ ನಗರದ ಜನಕ್ಕೆ ಕುಡಿಯುವ ನೀರಿಗೆ ಯಾವ ಸಮಸ್ಯೆ ಆಗೋದಿಲ್ಲ, ಪ್ರತಿ ಕುಟುಬಂಕ್ಕೆ ಬೇಕಾಗುವ ನೀರು ಪ್ರಸ್ತುತ ಲಭ್ಯವಿದೆ. ಆದರೆ ಹಿತಮಿತವಾಗಿ ನೀರನ್ನು ಬಳಸಬೇಕು ಎಂದು ನಾಗರಿಕರಲ್ಲಿ ಮನವಿ ಮಾಡಿರುವ ನಗರಸಭೆ ಕಮಿಷನರ್ ಕೆ.ಜಿ.ಶಿವಶಂಕರ್.

Ramesh Babu

Journalist

Recent Posts

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

7 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

7 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

19 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

22 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 days ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago