ನಗರಕ್ಕೆ ಕುಡಿಯುವ ನೀರನ್ನ ಸರಬರಾಜು ಮಾಡುವ ಜಕ್ಕಲ ಮಡಗು ಜಲಾಶಯದಲ್ಲಿ ನೀರಿನ ಸಂಗ್ರಹ ಕುಸಿತ: ನೀರನ್ನು ನಿಯಮಿತವಾಗಿ ಬಳಸುವಂತೆ ನಗರಸಭೆ ಮನವಿ

ರಾಜ್ಯದಲ್ಲಿ ಮುಂಗಾರು ವಿಳಂಬ ಮತ್ತು ಪೂರ್ವ ಮಾನ್ಸೂನ್ ಮಳೆಯ ಕೊರತೆಯಿಂದಾಗಿ, ಹೆಚ್ಚಿನ ಅಣೆಕಟ್ಟುಗಳು ಮತ್ತು ಜಲಾಶಯಗಳಲ್ಲಿ ನೀರಿನ ಮಟ್ಟವು ತೀವ್ರವಾಗಿ ಕುಸಿದಿದೆ. ಅದರಂತೆ ನಗರಕ್ಕೆ ಕುಡಿಯುವ ನೀರನ್ನ ಸರಬರಾಜು ಮಾಡುವ ಜಕ್ಕಲ ಮಡಗು ಜಲಾಶಯದಲ್ಲಿ ಸಹ ನೀರಿನ ಸಂಗ್ರಹ ಕುಸಿತಗೊಂಡಿದೆ.

ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಎರಡು ನಗರಗಳಿಗೂ ಕುಡಿಯುವ ನೀರು ಸರಬರಾಜು ಮಾಡುವ ಜಕ್ಕಲಮಡಗು ಜಲಾಶಯ ಇರುವುದು ಚಿಕ್ಕಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ. ಆದರೆ ಅದರ ಸಂಪೂರ್ಣ ಜಲಾನಯನ ಪ್ರದೇಶ ಬರುವುದು ದೊಡ್ಡಬಳ್ಳಾಪುರ ತಾಲೂಕಿನಲ್ಲಿ. ಸುಮಾರು 64 ಅಡಿಯಷ್ಟು ಆಳ ನೀರು ನಿಲ್ಲುವ ಸಮರ್ಥ್ಯ ಹೊಂದಿರುವ ಜಕ್ಕಲ ಮಡಗು ಜಲಾಶಯ.

ಜಕ್ಕಲಮಡುಗು ಜಲಾಶಯದಲ್ಲಿ ಪ್ರಸ್ತುತ ನೀರಿನ ಸಂಗ್ರಹ ಕುಸಿತಗೊಂಡಿದೆ‌. ಗರಿಷ್ಠ 64 ಅಡಿಗಳ ಜಲಾಶಯದಲ್ಲಿ ಸದ್ಯದ ನೀರಿನ ಮಟ್ಟ 59 ಅಡಿಯಷ್ಟಿದೆ. ಪ್ರತಿದಿನ ದೊಡ್ಡಬಳ್ಳಾಪುರ ನಗರಕ್ಕೆ ಬೇಕಾಗಿರುವ ನೀರಿನ ಪ್ರಮಾಣ 14.17 MLD. ಆದರೆ ಪ್ರತಿದಿನ ದೊಡ್ಡಬಳ್ಳಾಪುರ ನಗರಕ್ಕೆ ಜಲಾಶಯದಿಂದ 2 MLD(ಕನಿಷ್ಠ ದ್ರವ್ಯ ವಿಸರ್ಜನೆ) ನೀರು ಸರಬರಾಜು ಆಗುತ್ತಿದೆ. 104 ಕೊಳವೆಬಾವಿಗಳಿಂದ 4 MLD ನೀರು ಮಾತ್ರ ಸರಬರಾಜು ಆಗುತ್ತದೆ.

ಸದ್ಯ ಜಕ್ಕಲ ಮಡಗು ಜಲಾಶಯ ಹಾಗೂ ಕೊಳವೆಬಾವಿಗಳಿಂದ ಸರಬರಾಜು ಆಗುತ್ತಿರುವ ಒಟ್ಟು ನೀರಿನ ಪ್ರಮಾಣ 6 MLD ಮಾತ್ರ. ಇನ್ನೂ 7.17 MLD ಕುಡಿಯುವ ನೀರನ ಅಗತ್ಯ ದೊಡ್ಡಬಳ್ಳಾಪುರ ನಗರಕ್ಕೆ ಇದೆ. ನಗರದ ಮನೆಗಳಿಗೆ 6 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಅದರಲ್ಲಿ ಪ್ರತಿ ಪ್ರಜೆಗೆ ಒಂದು ದಿನಕ್ಕೆ 75 ಲೀಟರ್ ನೀರು ಲಭ್ಯತೆ ಆಗುತ್ತಿದೆ.

ಸದ್ಯ ನಗರದ ಜನಕ್ಕೆ ಕುಡಿಯುವ ನೀರಿಗೆ ಯಾವ ಸಮಸ್ಯೆ ಆಗೋದಿಲ್ಲ, ಪ್ರತಿ ಕುಟುಬಂಕ್ಕೆ ಬೇಕಾಗುವ ನೀರು ಪ್ರಸ್ತುತ ಲಭ್ಯವಿದೆ. ಆದರೆ ಹಿತಮಿತವಾಗಿ ನೀರನ್ನು ಬಳಸಬೇಕು ಎಂದು ನಾಗರಿಕರಲ್ಲಿ ಮನವಿ ಮಾಡಿರುವ ನಗರಸಭೆ ಕಮಿಷನರ್ ಕೆ.ಜಿ.ಶಿವಶಂಕರ್.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

8 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago