ನಗರಕ್ಕೆ ಪ್ರತಿ ದಿನ 16.8 ಎಂ.ಎಲ್‌.ಡಿ ನೀರಿನ ಅಗತ್ಯ: ಜಕ್ಕಲಮೊಡಗು ಜಲಾಶಯದಿಂದ ಪ್ರತಿದಿನ 2 ಎಂ.ಎಲ್‌.ಡಿ ನೀರು ಸರಬರಾಜು

ದೊಡ್ಡಬಳ್ಳಾಪುರ: ಒಂದು ವಾರದಿಂದ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಜಕ್ಕಲಮೊಡಗು ಜಲಾಶಯದಲ್ಲಿನ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು ಕೋಡಿ ಬೀಳಲು ಕೇವಲ 3 ಅಡಿಗಳು ಮಾತ್ರ ಬಾಕಿ ಇದೆ.

ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಎರಡೂ ನಗರಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮುಖ್ಯ ಜಲಾಶಯವಾಗಿರುವ ಜಕ್ಕಲಮೊಡಗುವಿನಲ್ಲಿ ಗರಿಷ್ಠ 58 ಅಡಿಗಳಷ್ಟು ನೀರು ಸಂಗ್ರಹವಾಗುವ ಸಾಮರ್ಥ್ಯ ಹೊಂದಿದೆ. ಈಗ 55 ಅಡಿಗಳಷ್ಟು ನೀರುವ ಸಂಗ್ರಹವಾಗುವ ಮೂಲಕ ಎರಡೂ ನಗರಗಳ ಕುಡಿಯುವ ನೀರಿನ ಕೊರತೆ ನೀಗಿಸಿದೆ. ಸದ್ಯಕ್ಕೆ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರು ಎರಡೂ ನಗರಗಳಿಗೆ ಒಂದುವರೆ ವರ್ಷಗಳ ಕಾಲ ಬರಲಿದೆ ಎನ್ನುತ್ತಾರೆ ನಗರಸಭೆಯ ಅಧಿಕಾರಿಗಳು.

1.25 ಲಕ್ಷ ಜನ ಸಂಖ್ಯೆಯನ್ನು ಹೊಂದಿರುವ ದೊಡ್ಡಬಳ್ಳಾಪುರ ನಗರದಲ್ಲಿ,14,500 ಕೊಳಾಯಿ ಸಂಪರ್ಕಗಳು ಇವೆ. ಪ್ರತಿ ದಿನ ನಗರಕ್ಕೆ 16.8 ಎಂ.ಎಲ್‌.ಡಿ (ದಶಲಕ್ಷ ಲೀಟರ್‌) ನೀರು ಅಗತ್ಯವಿದ್ದು, ಜಕ್ಕಲಮೊಡಗು ಜಲಾಶಯದಿಂದ ಪ್ರತಿದಿನ 2 ಎಂ.ಎಲ್‌.ಡಿ ನೀರು ಸರಬರಾಜಾಗುತ್ತಿದೆ. ಉಳಿದ ನೀರನ್ನು ನಗರಸಭೆ ಅವಲಂಭಿಸಿರುವುದು ಕೊಳವೆ ಬಾವಿಗಳನ್ನು. ನಗರದ ಅಂಚಿನ ಅರಳುಮಲ್ಲಿಗೆ, ಪಾಲನಜೋಗಹಳ್ಳಿ ಕೆರೆ ಅಂಗಳ, ಸೇರಿದಂತೆ ನಗರದ ಅಂಚಿನ ಸರ್ಕಾರಿ ಜಾಗ ಹಾಗೂ ರಸ್ತೆ ಬದಿಗಳಲ್ಲಿ ಕೊರೆಸಲಾಗಿರುವ 95 ಕೊಳವೆ ಬಾವಿಗಳಿಂದ 5 ದಿನಗಳಿಗೆ ಒಮ್ಮೆ ನಗರದ ಕೊಳಾಯಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದು ನಗರಸಭೆ ಕಾರ್ಯನಿರ್ವಾಹಕ ಎಂಜಿನಿಯರ್‌ ಜಿ.ರಾಮೇಗೌಡ ಹೇಳಿದ್ದಾರೆ.

Ramesh Babu

Journalist

Recent Posts

ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ನೀಡದೇ ಅನ್ಯಾಯ ಮಾಡುತ್ತಿದೆ- ಸಿಎಂ ಸಿದ್ದರಾಮಯ್ಯ

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು…

6 hours ago

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅದ್ಧೂರಿಯಾಗಿ ನಡೆದ “ಸೈನ್ಸ್ ಫೆಸ್ಟ್ – ಇನೋವೇಟಿವ್ ಅರೇನ” (ವಿಜ್ಞಾನ ಮೇಳ), ಕಿಡ್ಸ್ ಕಾರ್ನಿವಲ್: ವಿಜ್ಞಾನ ಮೇಳವನ್ನು ಉದ್ಘಾಟಿಸಿದ ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿನ ಕರೆನಹಳ್ಳಿಯಲ್ಲಿರುವ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿಂದು "ಸೈನ್ಸ್ ಫೆಸ್ಟ್ – ಇನೋವೇಟಿವ್ ಅರೇನ" (ವಿಜ್ಞಾನ ಮೇಳ) ವನ್ನು ಆಯೋಜಿಸಲಾಗಿತ್ತು.…

8 hours ago

ಶಿವ ಶಿವ ಶಿವ ಶಿವ……ನೆನಪಾಗುವೆ ನೀನು ಪ್ರತಿಕ್ಷಣವೂ…‌‌‌‌…..

ಶಿವರಾತ್ರಿ....... ಶಿವರಾತ್ರಿಯ ಶಿವ - ರಂಜಾನ್ ಅಲ್ಲಾ - ಕ್ರಿಸ್ಮಸ್ ಯೇಸು ನಾಮ ಸ್ಮರಣೆ..... ಶಿವ ಶಿವ ಶಿವ ಶಿವ......…

15 hours ago

ಬೈರಸಂದ್ರದಲ್ಲಿ ಹಂದಿ ಶೆಡ್‌ ಸ್ಥಳಾಂತರಕ್ಕೆ ಒತ್ತಾಯ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ಗ್ರಾಪಂ ವ್ಯಾಪ್ತಿಯ ಬೈರಸಂದ್ರ ಗ್ರಾಮದಲ್ಲಿ ಅಕ್ರಮವಾಗಿ ನಿರ್ಮಾಣವಾಗಿರುವ ಹಂದಿ ಸಾಕಣೆ ಶೆಡ್ ನಿಂದಾಗಿ ಗ್ರಾಮಸ್ಥರಿಗೆ ತೊಂದರೆಗಳಾಗುತ್ತಿದ್ದು,…

16 hours ago

ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ‌ ಶಾಲೆ ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, (ರಾಜ್ಯ ಪಠ್ಯಕ್ರಮ)…

1 day ago

ರೈತನ ಬಾಳೆ ತೋಟ ಮಾರಣಹೋಮ: ಕಿಡಿಗೇಡಿಗಳ ಕಿಡಿಗೇಡಿತನಕ್ಕೆ ಬೆಳೆದು ನಿಂತಿದ್ದ ಬಾಳೆ ಗಿಡಗಳು ನಾಶ: ಸಂಕಷ್ಟದಲ್ಲಿ ರೈತ

ಹೆಂಡತಿಯ ಒಡವೆಯನ್ನು ಅಡವಿಟ್ಟು, ಹಗಲು ರಾತ್ರಿ ಕಷ್ಟಪಟ್ಟು ಬಾಳೆ ತೋಟ ಬೆಳೆಸಿದ್ದ ರೈತನಿಗೆ ಅದೇ ಜೀವನಕ್ಕೆ ಆಸರೆಯಾಗಿತ್ತು. ಸಾವಿರಕ್ಕೂ ಹೆಚ್ಚು…

1 day ago