ನಗರಕ್ಕೆ ಪ್ರತಿ ದಿನ 16.8 ಎಂ.ಎಲ್‌.ಡಿ ನೀರಿನ ಅಗತ್ಯ: ಜಕ್ಕಲಮೊಡಗು ಜಲಾಶಯದಿಂದ ಪ್ರತಿದಿನ 2 ಎಂ.ಎಲ್‌.ಡಿ ನೀರು ಸರಬರಾಜು

ದೊಡ್ಡಬಳ್ಳಾಪುರ: ಒಂದು ವಾರದಿಂದ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಜಕ್ಕಲಮೊಡಗು ಜಲಾಶಯದಲ್ಲಿನ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು ಕೋಡಿ ಬೀಳಲು ಕೇವಲ 3 ಅಡಿಗಳು ಮಾತ್ರ ಬಾಕಿ ಇದೆ.

ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಎರಡೂ ನಗರಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮುಖ್ಯ ಜಲಾಶಯವಾಗಿರುವ ಜಕ್ಕಲಮೊಡಗುವಿನಲ್ಲಿ ಗರಿಷ್ಠ 58 ಅಡಿಗಳಷ್ಟು ನೀರು ಸಂಗ್ರಹವಾಗುವ ಸಾಮರ್ಥ್ಯ ಹೊಂದಿದೆ. ಈಗ 55 ಅಡಿಗಳಷ್ಟು ನೀರುವ ಸಂಗ್ರಹವಾಗುವ ಮೂಲಕ ಎರಡೂ ನಗರಗಳ ಕುಡಿಯುವ ನೀರಿನ ಕೊರತೆ ನೀಗಿಸಿದೆ. ಸದ್ಯಕ್ಕೆ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರು ಎರಡೂ ನಗರಗಳಿಗೆ ಒಂದುವರೆ ವರ್ಷಗಳ ಕಾಲ ಬರಲಿದೆ ಎನ್ನುತ್ತಾರೆ ನಗರಸಭೆಯ ಅಧಿಕಾರಿಗಳು.

1.25 ಲಕ್ಷ ಜನ ಸಂಖ್ಯೆಯನ್ನು ಹೊಂದಿರುವ ದೊಡ್ಡಬಳ್ಳಾಪುರ ನಗರದಲ್ಲಿ,14,500 ಕೊಳಾಯಿ ಸಂಪರ್ಕಗಳು ಇವೆ. ಪ್ರತಿ ದಿನ ನಗರಕ್ಕೆ 16.8 ಎಂ.ಎಲ್‌.ಡಿ (ದಶಲಕ್ಷ ಲೀಟರ್‌) ನೀರು ಅಗತ್ಯವಿದ್ದು, ಜಕ್ಕಲಮೊಡಗು ಜಲಾಶಯದಿಂದ ಪ್ರತಿದಿನ 2 ಎಂ.ಎಲ್‌.ಡಿ ನೀರು ಸರಬರಾಜಾಗುತ್ತಿದೆ. ಉಳಿದ ನೀರನ್ನು ನಗರಸಭೆ ಅವಲಂಭಿಸಿರುವುದು ಕೊಳವೆ ಬಾವಿಗಳನ್ನು. ನಗರದ ಅಂಚಿನ ಅರಳುಮಲ್ಲಿಗೆ, ಪಾಲನಜೋಗಹಳ್ಳಿ ಕೆರೆ ಅಂಗಳ, ಸೇರಿದಂತೆ ನಗರದ ಅಂಚಿನ ಸರ್ಕಾರಿ ಜಾಗ ಹಾಗೂ ರಸ್ತೆ ಬದಿಗಳಲ್ಲಿ ಕೊರೆಸಲಾಗಿರುವ 95 ಕೊಳವೆ ಬಾವಿಗಳಿಂದ 5 ದಿನಗಳಿಗೆ ಒಮ್ಮೆ ನಗರದ ಕೊಳಾಯಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದು ನಗರಸಭೆ ಕಾರ್ಯನಿರ್ವಾಹಕ ಎಂಜಿನಿಯರ್‌ ಜಿ.ರಾಮೇಗೌಡ ಹೇಳಿದ್ದಾರೆ.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

5 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

20 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago