ನಗರಕ್ಕೆ ಪ್ರತಿ ದಿನ 16.8 ಎಂ.ಎಲ್‌.ಡಿ ನೀರಿನ ಅಗತ್ಯ: ಜಕ್ಕಲಮೊಡಗು ಜಲಾಶಯದಿಂದ ಪ್ರತಿದಿನ 2 ಎಂ.ಎಲ್‌.ಡಿ ನೀರು ಸರಬರಾಜು

ದೊಡ್ಡಬಳ್ಳಾಪುರ: ಒಂದು ವಾರದಿಂದ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಜಕ್ಕಲಮೊಡಗು ಜಲಾಶಯದಲ್ಲಿನ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು ಕೋಡಿ ಬೀಳಲು ಕೇವಲ 3 ಅಡಿಗಳು ಮಾತ್ರ ಬಾಕಿ ಇದೆ.

ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಎರಡೂ ನಗರಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮುಖ್ಯ ಜಲಾಶಯವಾಗಿರುವ ಜಕ್ಕಲಮೊಡಗುವಿನಲ್ಲಿ ಗರಿಷ್ಠ 58 ಅಡಿಗಳಷ್ಟು ನೀರು ಸಂಗ್ರಹವಾಗುವ ಸಾಮರ್ಥ್ಯ ಹೊಂದಿದೆ. ಈಗ 55 ಅಡಿಗಳಷ್ಟು ನೀರುವ ಸಂಗ್ರಹವಾಗುವ ಮೂಲಕ ಎರಡೂ ನಗರಗಳ ಕುಡಿಯುವ ನೀರಿನ ಕೊರತೆ ನೀಗಿಸಿದೆ. ಸದ್ಯಕ್ಕೆ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರು ಎರಡೂ ನಗರಗಳಿಗೆ ಒಂದುವರೆ ವರ್ಷಗಳ ಕಾಲ ಬರಲಿದೆ ಎನ್ನುತ್ತಾರೆ ನಗರಸಭೆಯ ಅಧಿಕಾರಿಗಳು.

1.25 ಲಕ್ಷ ಜನ ಸಂಖ್ಯೆಯನ್ನು ಹೊಂದಿರುವ ದೊಡ್ಡಬಳ್ಳಾಪುರ ನಗರದಲ್ಲಿ,14,500 ಕೊಳಾಯಿ ಸಂಪರ್ಕಗಳು ಇವೆ. ಪ್ರತಿ ದಿನ ನಗರಕ್ಕೆ 16.8 ಎಂ.ಎಲ್‌.ಡಿ (ದಶಲಕ್ಷ ಲೀಟರ್‌) ನೀರು ಅಗತ್ಯವಿದ್ದು, ಜಕ್ಕಲಮೊಡಗು ಜಲಾಶಯದಿಂದ ಪ್ರತಿದಿನ 2 ಎಂ.ಎಲ್‌.ಡಿ ನೀರು ಸರಬರಾಜಾಗುತ್ತಿದೆ. ಉಳಿದ ನೀರನ್ನು ನಗರಸಭೆ ಅವಲಂಭಿಸಿರುವುದು ಕೊಳವೆ ಬಾವಿಗಳನ್ನು. ನಗರದ ಅಂಚಿನ ಅರಳುಮಲ್ಲಿಗೆ, ಪಾಲನಜೋಗಹಳ್ಳಿ ಕೆರೆ ಅಂಗಳ, ಸೇರಿದಂತೆ ನಗರದ ಅಂಚಿನ ಸರ್ಕಾರಿ ಜಾಗ ಹಾಗೂ ರಸ್ತೆ ಬದಿಗಳಲ್ಲಿ ಕೊರೆಸಲಾಗಿರುವ 95 ಕೊಳವೆ ಬಾವಿಗಳಿಂದ 5 ದಿನಗಳಿಗೆ ಒಮ್ಮೆ ನಗರದ ಕೊಳಾಯಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದು ನಗರಸಭೆ ಕಾರ್ಯನಿರ್ವಾಹಕ ಎಂಜಿನಿಯರ್‌ ಜಿ.ರಾಮೇಗೌಡ ಹೇಳಿದ್ದಾರೆ.

Ramesh Babu

Journalist

Recent Posts

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

8 hours ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

18 hours ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

18 hours ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

1 day ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

1 day ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

1 day ago