ನಗರಕ್ಕೆ ಪ್ರತಿ ದಿನ 16.8 ಎಂ.ಎಲ್‌.ಡಿ ನೀರಿನ ಅಗತ್ಯ: ಜಕ್ಕಲಮೊಡಗು ಜಲಾಶಯದಿಂದ ಪ್ರತಿದಿನ 2 ಎಂ.ಎಲ್‌.ಡಿ ನೀರು ಸರಬರಾಜು

ದೊಡ್ಡಬಳ್ಳಾಪುರ: ಒಂದು ವಾರದಿಂದ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಜಕ್ಕಲಮೊಡಗು ಜಲಾಶಯದಲ್ಲಿನ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು ಕೋಡಿ ಬೀಳಲು ಕೇವಲ 3 ಅಡಿಗಳು ಮಾತ್ರ ಬಾಕಿ ಇದೆ.

ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಎರಡೂ ನಗರಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮುಖ್ಯ ಜಲಾಶಯವಾಗಿರುವ ಜಕ್ಕಲಮೊಡಗುವಿನಲ್ಲಿ ಗರಿಷ್ಠ 58 ಅಡಿಗಳಷ್ಟು ನೀರು ಸಂಗ್ರಹವಾಗುವ ಸಾಮರ್ಥ್ಯ ಹೊಂದಿದೆ. ಈಗ 55 ಅಡಿಗಳಷ್ಟು ನೀರುವ ಸಂಗ್ರಹವಾಗುವ ಮೂಲಕ ಎರಡೂ ನಗರಗಳ ಕುಡಿಯುವ ನೀರಿನ ಕೊರತೆ ನೀಗಿಸಿದೆ. ಸದ್ಯಕ್ಕೆ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರು ಎರಡೂ ನಗರಗಳಿಗೆ ಒಂದುವರೆ ವರ್ಷಗಳ ಕಾಲ ಬರಲಿದೆ ಎನ್ನುತ್ತಾರೆ ನಗರಸಭೆಯ ಅಧಿಕಾರಿಗಳು.

1.25 ಲಕ್ಷ ಜನ ಸಂಖ್ಯೆಯನ್ನು ಹೊಂದಿರುವ ದೊಡ್ಡಬಳ್ಳಾಪುರ ನಗರದಲ್ಲಿ,14,500 ಕೊಳಾಯಿ ಸಂಪರ್ಕಗಳು ಇವೆ. ಪ್ರತಿ ದಿನ ನಗರಕ್ಕೆ 16.8 ಎಂ.ಎಲ್‌.ಡಿ (ದಶಲಕ್ಷ ಲೀಟರ್‌) ನೀರು ಅಗತ್ಯವಿದ್ದು, ಜಕ್ಕಲಮೊಡಗು ಜಲಾಶಯದಿಂದ ಪ್ರತಿದಿನ 2 ಎಂ.ಎಲ್‌.ಡಿ ನೀರು ಸರಬರಾಜಾಗುತ್ತಿದೆ. ಉಳಿದ ನೀರನ್ನು ನಗರಸಭೆ ಅವಲಂಭಿಸಿರುವುದು ಕೊಳವೆ ಬಾವಿಗಳನ್ನು. ನಗರದ ಅಂಚಿನ ಅರಳುಮಲ್ಲಿಗೆ, ಪಾಲನಜೋಗಹಳ್ಳಿ ಕೆರೆ ಅಂಗಳ, ಸೇರಿದಂತೆ ನಗರದ ಅಂಚಿನ ಸರ್ಕಾರಿ ಜಾಗ ಹಾಗೂ ರಸ್ತೆ ಬದಿಗಳಲ್ಲಿ ಕೊರೆಸಲಾಗಿರುವ 95 ಕೊಳವೆ ಬಾವಿಗಳಿಂದ 5 ದಿನಗಳಿಗೆ ಒಮ್ಮೆ ನಗರದ ಕೊಳಾಯಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದು ನಗರಸಭೆ ಕಾರ್ಯನಿರ್ವಾಹಕ ಎಂಜಿನಿಯರ್‌ ಜಿ.ರಾಮೇಗೌಡ ಹೇಳಿದ್ದಾರೆ.

Ramesh Babu

Journalist

Recent Posts

ಮುಗಿಯದ ಕೆ.ಎಚ್. ಮುನಿಯಪ್ಪ ಖಾತೆ ‘ಮುನಿಸು’: ಪ.ಜಾ ಎಡಗೈ ಸಮುದಾಯಕ್ಕೆ ಸಿಗುವುದೇ ಉನ್ನತ ಸ್ಥಾನ?: ಪ್ರಬಲ ಖಾತೆಗೆ ಹಿರಿಯ ನಾಯಕನ ಪಟ್ಟು

ಬೆಂಗಳೂರು ಗ್ರಾಮಾಂತರ: ರಾಜ್ಯ ಕಾಂಗ್ರೆಸ್ ನಲ್ಲಿ ಟ್ರಬಲ್ ಶೂಟರ್ ಎಂದೇ ಖ್ಯಾತಿ ಪಡೆದಿರುವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾದ…

6 hours ago

ಪ್ರೊ. ಬಿ ಕೃಷ್ಣಪ್ಪ ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕ- ದಸಂಸ ಜಿಲ್ಲಾ ಸಂಚಾಲಕ ರಾಮಮೂರ್ತಿ(ರಾಮು)

ಸಮಾಜದಲ್ಲಿ ದಲಿತ ಸಮುದಾಯಗಳು ಎದುರಿಸುತ್ತಿದ್ದ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿದ ಪ್ರೊ. ಬಿ ಕೃಷ್ಣಪ್ಪ ಅವರು ಎಲ್ಲರಿಗೂ ಮಾದರಿ. ಅವರ…

19 hours ago

ಜೆಡಿಎಸ್ ಬಣ ಗುದ್ದಾಟದಲ್ಲಿ ಕಾರ್ಯಕರ್ತರಿಗೆ ಸಿಕ್ಕ ‘ಸ್ಮೈಲ್ ಕ್ಯಾಪ್ಟನ್ ಆನಂದ್’

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 40 ವರ್ಷಗಳಿಂದ ರಾಜಕಾರಣ ಮಾಡುತ್ತಾ, ಮನೆ ಮಾತಾಗಿರುವ ಹುಸ್ಕೂರು ಟಿ. ಆನಂದ್ ಜೆಡಿಎಸ್ ಪಕ್ಷದಲ್ಲಿ ರಾಜ್ಯ ಪ್ರಧಾನ…

1 day ago

ವೇಶ್ಯಾವಾಟಿಕೆ ಜಗತ್ತಿನ ಹಳೆಯದಾದ ಒಂದು ಕ್ರಿಯೆ…?

ವೇಶ್ಯಾವಾಟಿಕೆ...... ಒಂದು ವೃತ್ತಿಯೇ, ಜೀವನ ನಿರ್ವಹಣೆಯ ಒಂದು ಮಾರ್ಗವೇ, ಒಂದು ಉದ್ಯೋಗವೇ, ಸಹಜ ಪ್ರಾಕೃತಿಕ ವಿಧಾನವೇ, ಹೆಣ್ಣಿನ ಶೋಷಣೆಯೇ, ಗಂಡಿನ…

1 day ago

ಮಳೆಗಾಲ ಆರಂಭ: ರಸ್ತೆಗುಂಡಿಗಳ ದರ್ಬಾರ್: ಟೋಲ್ ತಪ್ಪಿಸಲು ಹಳ್ಳಿ ರಸ್ತೆಗಳ ಬಳಕೆ: ಜನರ ಜೀವದ ಜೊತೆ ಚೆಲ್ಲಾಟ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ದೊಡ್ಡಬಳ್ಳಾಪುರ: ಮಳೆಗಾಲ ಆರಂಭವಾಗುತ್ತಿದ್ದಂತೆ ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಭಾಗಗಳ ರಸ್ತೆಗುಂಡಿಗಳ ಸಮಸ್ಯೆ ಮತ್ತೆ ತಲೆದೋರಿದ್ದು, ವಾಹನ ಸವಾರರು ಜೀವ…

1 day ago

ಬೈಕ್ – ಕಾರಿನ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ರಾತ್ರಿ ದೊಡ್ಡಬಳ್ಳಾಪುರ…

2 days ago