ನಗರಕ್ಕೆ ಪ್ರತಿ ದಿನ 16.8 ಎಂ.ಎಲ್‌.ಡಿ ನೀರಿನ ಅಗತ್ಯ: ಜಕ್ಕಲಮೊಡಗು ಜಲಾಶಯದಿಂದ ಪ್ರತಿದಿನ 2 ಎಂ.ಎಲ್‌.ಡಿ ನೀರು ಸರಬರಾಜು

ದೊಡ್ಡಬಳ್ಳಾಪುರ: ಒಂದು ವಾರದಿಂದ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಜಕ್ಕಲಮೊಡಗು ಜಲಾಶಯದಲ್ಲಿನ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು ಕೋಡಿ ಬೀಳಲು ಕೇವಲ 3 ಅಡಿಗಳು ಮಾತ್ರ ಬಾಕಿ ಇದೆ.

ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಎರಡೂ ನಗರಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮುಖ್ಯ ಜಲಾಶಯವಾಗಿರುವ ಜಕ್ಕಲಮೊಡಗುವಿನಲ್ಲಿ ಗರಿಷ್ಠ 58 ಅಡಿಗಳಷ್ಟು ನೀರು ಸಂಗ್ರಹವಾಗುವ ಸಾಮರ್ಥ್ಯ ಹೊಂದಿದೆ. ಈಗ 55 ಅಡಿಗಳಷ್ಟು ನೀರುವ ಸಂಗ್ರಹವಾಗುವ ಮೂಲಕ ಎರಡೂ ನಗರಗಳ ಕುಡಿಯುವ ನೀರಿನ ಕೊರತೆ ನೀಗಿಸಿದೆ. ಸದ್ಯಕ್ಕೆ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರು ಎರಡೂ ನಗರಗಳಿಗೆ ಒಂದುವರೆ ವರ್ಷಗಳ ಕಾಲ ಬರಲಿದೆ ಎನ್ನುತ್ತಾರೆ ನಗರಸಭೆಯ ಅಧಿಕಾರಿಗಳು.

1.25 ಲಕ್ಷ ಜನ ಸಂಖ್ಯೆಯನ್ನು ಹೊಂದಿರುವ ದೊಡ್ಡಬಳ್ಳಾಪುರ ನಗರದಲ್ಲಿ,14,500 ಕೊಳಾಯಿ ಸಂಪರ್ಕಗಳು ಇವೆ. ಪ್ರತಿ ದಿನ ನಗರಕ್ಕೆ 16.8 ಎಂ.ಎಲ್‌.ಡಿ (ದಶಲಕ್ಷ ಲೀಟರ್‌) ನೀರು ಅಗತ್ಯವಿದ್ದು, ಜಕ್ಕಲಮೊಡಗು ಜಲಾಶಯದಿಂದ ಪ್ರತಿದಿನ 2 ಎಂ.ಎಲ್‌.ಡಿ ನೀರು ಸರಬರಾಜಾಗುತ್ತಿದೆ. ಉಳಿದ ನೀರನ್ನು ನಗರಸಭೆ ಅವಲಂಭಿಸಿರುವುದು ಕೊಳವೆ ಬಾವಿಗಳನ್ನು. ನಗರದ ಅಂಚಿನ ಅರಳುಮಲ್ಲಿಗೆ, ಪಾಲನಜೋಗಹಳ್ಳಿ ಕೆರೆ ಅಂಗಳ, ಸೇರಿದಂತೆ ನಗರದ ಅಂಚಿನ ಸರ್ಕಾರಿ ಜಾಗ ಹಾಗೂ ರಸ್ತೆ ಬದಿಗಳಲ್ಲಿ ಕೊರೆಸಲಾಗಿರುವ 95 ಕೊಳವೆ ಬಾವಿಗಳಿಂದ 5 ದಿನಗಳಿಗೆ ಒಮ್ಮೆ ನಗರದ ಕೊಳಾಯಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದು ನಗರಸಭೆ ಕಾರ್ಯನಿರ್ವಾಹಕ ಎಂಜಿನಿಯರ್‌ ಜಿ.ರಾಮೇಗೌಡ ಹೇಳಿದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

4 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

4 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

7 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

8 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

12 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

16 hours ago