ನಗರದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ, ಹೆಚ್.ಇ.ಹೆಚ್.ಎಸ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಕಾಲೇಜು, ಶ್ರೀ ಸೂರ್ಯ ಪದವಿ ಪೂರ್ವ ಕಾಲೇಜು, ಶ್ರೀ ರಾಮ ನರ್ಸಿಂಗ್ ಕಾಲೇಜು, ಅಲ್ಟ್ರಾ ಟೆಕ್ ಸಿಮೆಂಟ್ ಲಿಮಿಟೆಡ್ ಇವರುಗಳ ಸಹಯೋಗದೊಂದಿಗೆ ನಗರದ ಅಸ್ಪತ್ರೆ ಸರ್ಕಲ್ ಬಳಿ “ರಸ್ತೆ ಸುರಕ್ಷತೆಯ ಅರಿವು ಮೂಡಿಸುವ ಸಲುವಾಗಿ” ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಮಾಹಿತಿಯ ಹಸ್ತ ಪ್ರತಿಗಳನ್ನು ಬಿಡುಗಡೆ ಮಾಡಲಾಯಿತು. ನಂತರ ರಸ್ತೆ ಸುರಕ್ಷತಾ ಸಪ್ತಾಹದ ಕಾಲು ನಡಿಗೆ ಜಾಥಾಗೆ ಹಸಿರು ನಿಶಾನೆ ನೀಡಿ ಮಾತನಾಡಿದ ಪೊಲೀಸ್ ಇನ್ಸ್ಪೆಕ್ಟರ್ ಅಮರೇಶ್ ಗೌಡ, ಸಾರ್ವಜನಿಕರು ದ್ವಿಚಕ್ರ ವಾಹನ ಚಾಲನೆ ಮಾಡುವಾಗ ರಸ್ತೆ ನಿಯಮಗಳನ್ನು ಪಾಲಿಸಬೇಕು‌. ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಸಬಾರದು. ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಇದರಿಂದ ಅಪಘಾತವಾಗದಂತೆ ತಡೆಯಬಹುದಾಗಿದೆ ಎಂದು ಹೇಳಿದರು.

ಜಾಥಾದಲ್ಲಿ ಶ್ರೀ ಸೂರ್ಯ ಎಜುಕೇಷನ್ ಟ್ರಸ್ಟ್ ಆಡಳಿತ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾದ ಡಾಮ ಹೆಚ್ ಜಿ ವಿಜಯಕುಮಾರ್, ಅಲ್ಟ್ರಾ ಟೆಕ್ ಸಿಮೆಂಟ್ ಲಿಮಿಟೆಡ್ ಜನರಲ್ ಮ್ಯಾನೇಜರ್ ಪಂಕಜ್ ಶರ್ಮ, ಸಹಾಯಕ ಜನರಲ್ ಮ್ಯಾನೇಜರ್ ಸಂಜೀವ್ ಕೆದಾರಿ, ಸಹಾಯಕ ವ್ಯವಸ್ಥಾಪಕರಾದ ವಿಷ್ಣು ಬಾಲ ಸ್ವಾಮಿ, ಸಂಪನ್ಮೂಲ ವ್ಯಕ್ತಿಗಳಾದ  ಪುಲ್ಲಾರೆಡ್ಡಿ, ಸುಜ್ಞಾನ ದೀಪಿಕಾ, ಸಂಸ್ಥೆಯ ಮುಖ್ಯಸ್ಥರಾದ ಎಂ ಎಸ್ ಮಂಜುನಾಥ್, ಶ್ರೀ ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ ಸಿ ಮಂಜುನಾಥ್, ಹೆಚ್ ಇ ಹೆಚ್ ಎಸ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಗೌ ರಾ ರಾಮಮೂರ್ತಿ, ಆಡಳಿತಾಧಿಕಾರಿ ಶಾಮನಾಸ್, ಉಪನ್ಯಾಸಕರಾದ ಎಂ ಎನ್ ಕಲ್ಪನಾ, ಉಮ್ಮೇಮುಸ್ಕಾನ್, ರೂಪ ಟಿ, ಪುನೀತ್ ಸೇರಿದಂತೆ ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Ramesh Babu

Journalist

Recent Posts

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

3 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

6 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

22 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

23 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago