ನಗರದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ, ಹೆಚ್.ಇ.ಹೆಚ್.ಎಸ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಕಾಲೇಜು, ಶ್ರೀ ಸೂರ್ಯ ಪದವಿ ಪೂರ್ವ ಕಾಲೇಜು, ಶ್ರೀ ರಾಮ ನರ್ಸಿಂಗ್ ಕಾಲೇಜು, ಅಲ್ಟ್ರಾ ಟೆಕ್ ಸಿಮೆಂಟ್ ಲಿಮಿಟೆಡ್ ಇವರುಗಳ ಸಹಯೋಗದೊಂದಿಗೆ ನಗರದ ಅಸ್ಪತ್ರೆ ಸರ್ಕಲ್ ಬಳಿ “ರಸ್ತೆ ಸುರಕ್ಷತೆಯ ಅರಿವು ಮೂಡಿಸುವ ಸಲುವಾಗಿ” ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಮಾಹಿತಿಯ ಹಸ್ತ ಪ್ರತಿಗಳನ್ನು ಬಿಡುಗಡೆ ಮಾಡಲಾಯಿತು. ನಂತರ ರಸ್ತೆ ಸುರಕ್ಷತಾ ಸಪ್ತಾಹದ ಕಾಲು ನಡಿಗೆ ಜಾಥಾಗೆ ಹಸಿರು ನಿಶಾನೆ ನೀಡಿ ಮಾತನಾಡಿದ ಪೊಲೀಸ್ ಇನ್ಸ್ಪೆಕ್ಟರ್ ಅಮರೇಶ್ ಗೌಡ, ಸಾರ್ವಜನಿಕರು ದ್ವಿಚಕ್ರ ವಾಹನ ಚಾಲನೆ ಮಾಡುವಾಗ ರಸ್ತೆ ನಿಯಮಗಳನ್ನು ಪಾಲಿಸಬೇಕು‌. ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಸಬಾರದು. ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಇದರಿಂದ ಅಪಘಾತವಾಗದಂತೆ ತಡೆಯಬಹುದಾಗಿದೆ ಎಂದು ಹೇಳಿದರು.

ಜಾಥಾದಲ್ಲಿ ಶ್ರೀ ಸೂರ್ಯ ಎಜುಕೇಷನ್ ಟ್ರಸ್ಟ್ ಆಡಳಿತ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾದ ಡಾಮ ಹೆಚ್ ಜಿ ವಿಜಯಕುಮಾರ್, ಅಲ್ಟ್ರಾ ಟೆಕ್ ಸಿಮೆಂಟ್ ಲಿಮಿಟೆಡ್ ಜನರಲ್ ಮ್ಯಾನೇಜರ್ ಪಂಕಜ್ ಶರ್ಮ, ಸಹಾಯಕ ಜನರಲ್ ಮ್ಯಾನೇಜರ್ ಸಂಜೀವ್ ಕೆದಾರಿ, ಸಹಾಯಕ ವ್ಯವಸ್ಥಾಪಕರಾದ ವಿಷ್ಣು ಬಾಲ ಸ್ವಾಮಿ, ಸಂಪನ್ಮೂಲ ವ್ಯಕ್ತಿಗಳಾದ  ಪುಲ್ಲಾರೆಡ್ಡಿ, ಸುಜ್ಞಾನ ದೀಪಿಕಾ, ಸಂಸ್ಥೆಯ ಮುಖ್ಯಸ್ಥರಾದ ಎಂ ಎಸ್ ಮಂಜುನಾಥ್, ಶ್ರೀ ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ ಸಿ ಮಂಜುನಾಥ್, ಹೆಚ್ ಇ ಹೆಚ್ ಎಸ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಗೌ ರಾ ರಾಮಮೂರ್ತಿ, ಆಡಳಿತಾಧಿಕಾರಿ ಶಾಮನಾಸ್, ಉಪನ್ಯಾಸಕರಾದ ಎಂ ಎನ್ ಕಲ್ಪನಾ, ಉಮ್ಮೇಮುಸ್ಕಾನ್, ರೂಪ ಟಿ, ಪುನೀತ್ ಸೇರಿದಂತೆ ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

23 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago