ಧಾರ್ಮಿಕ ಹಾಗೂ ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಹಿಂದು ಬಾಂಧವರ ಸಂಘಟನೆ, ಹಿಂದೂಗಳ ಒಗ್ಗೂಡುವಿಕೆಗಾಗಿ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ವತಿಯಿಂದ ನಗರದಲ್ಲಿ ಅದ್ಧೂರಿಯಾಗಿ ಶ್ರೀರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಯಾತ್ರೆ ನಡೆಯಿತು.
ಕೊನೆಯ ದಿನವಾದ ಭಾನುವಾರದಂದು ಶ್ರೀರಾಮ ಶೋಭಯಾತ್ರೆಯು ಸಾವಿರಾರು ಹಿಂದೂ ಕಾರ್ಯಕರ್ತರೊಂದಿಗೆ ನಗರದ ಭಗತ್ ಸಿಂಗ್ ಕ್ರೀಡಾಂಗಣದಿಂದ ಹೊರಟು, ತಾಲೂಕು ಕಚೇರಿ, ಸೌಂದರ್ಯ ಮಹಲ್ ಸರ್ಕಲ್ ಸೇರಿ ಒಟ್ಟು 10 ಕಿ.ಮೀ ಗೂ ಹೆಚ್ಚು ವ್ಯಾಪ್ತಿಯಲ್ಲಿ ಯಾತ್ರೆ ಸಾಗಿತು. ಈ ವೇಳೆ ಡಿಜೆ ಸೌಂಡ್ ಗೆ ಯುವಕ ಯುವತಿಯರು ಹುಚ್ಚೆದ್ದು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ಮೆರವಣಿಗೆಯಲ್ಲಿ ಭಾರತ ಮಾತೆ, ಕನ್ನಡಾಂಭೆ ಭುವನೇಶ್ವರಿ ದೇವಿ, ಶ್ರೀರಾಮ, ಹನುಮ, ಶಿವ ಪ್ರತಿಮೆಗಳೊಂದಿಗೆ ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಭುವನೇಶ್ವರಿದೇವಿಯ ಮೆರವಣಿಗೆ ವಿವಿಧ ಕಲಾತಂಡಗಳೊಡನೆ ನಡೆಯಿತು.
ನಂತರ ಕಾರ್ಕಳದ ಶೀಕಾಂತ್ ಶೆಟ್ಟಿ ಅವರಿಂದ ದಿಕ್ಸೂಚಿ ಭಾಷಣ ನಡೆಯಿತು. ಸಂಜೆ ರಾಮಾಯಣ ಕಥೆಯ ಲೇಸರ್ ಶೋ, ಬೃಹತ್ ರಾವಣ ದಹನ ಮತ್ತು ಆಕರ್ಷಕ ಸಿಡಿಮದ್ದುಗಳ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದವು.
ಕಳೆದ ಒಂಬತ್ತು ವರ್ಷಗಳಿಂದ ಶ್ರೀರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆಯನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಈ ಬಾರಿ ಚುನಾವಣೆಗಳ ಹಿನ್ನೆಲೆಯಲ್ಲಿ ತಡವಾಗಿದೆ. ಈ ಕಾರ್ಯಕ್ರಮವನ್ನು ಪಕ್ಷಾತೀತವಾಗಿ ಯಾವುದೇ ವ್ಯಕ್ತಿಯನ್ನು ವೈಭವೀಕರಿಸದೇ ವಿಜೃಂಭಣೆಯಿಂದ ಹಾಗೂ ಹೆಚ್ಚು ಸಂಭ್ರಮದಿಂದ ಆಯೋಜಿಸಲಾಗಿದೆ ಎಂದು ಬಜರಂಗದಳ ಕೋಲಾರ ವಿಭಾಗಿಯ ಸಂಯೋಜಕ ನರೇಶ್ ರೆಡ್ಡಿ ತಿಳಿಸಿದರು.
ಒಟ್ಟಾರೆ ಭಜರಂಗದಳ ಕಾರ್ಯಕರ್ತರು ಹೆಚ್ಚಿರುವ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭರ್ಜರಿ ಶೋಭಯಾತ್ರೆ ನಡೆಯಿತು. ಹಿಂದೂ ಸಮಾಜ ಒಗ್ಗೂಡಲು ಈ ಕಾರ್ಯಕ್ರಮ ಅನುಕೂಲ ಆಗುತ್ತದೆ ಎಂಬುದು ಕಾರ್ಯಕ್ರಮ ಆಯೋಜಕರ ಅಭಿಪ್ರಯಾವಾಗಿತ್ತು.
ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…