ಧಾರ್ಮಿಕ ಹಾಗೂ ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಹಿಂದು ಬಾಂಧವರ ಸಂಘಟನೆ, ಹಿಂದೂಗಳ ಒಗ್ಗೂಡುವಿಕೆಗಾಗಿ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ವತಿಯಿಂದ ನಗರದಲ್ಲಿ ಅದ್ಧೂರಿಯಾಗಿ ಶ್ರೀರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಯಾತ್ರೆ ನಡೆಯಿತು.
ಕೊನೆಯ ದಿನವಾದ ಭಾನುವಾರದಂದು ಶ್ರೀರಾಮ ಶೋಭಯಾತ್ರೆಯು ಸಾವಿರಾರು ಹಿಂದೂ ಕಾರ್ಯಕರ್ತರೊಂದಿಗೆ ನಗರದ ಭಗತ್ ಸಿಂಗ್ ಕ್ರೀಡಾಂಗಣದಿಂದ ಹೊರಟು, ತಾಲೂಕು ಕಚೇರಿ, ಸೌಂದರ್ಯ ಮಹಲ್ ಸರ್ಕಲ್ ಸೇರಿ ಒಟ್ಟು 10 ಕಿ.ಮೀ ಗೂ ಹೆಚ್ಚು ವ್ಯಾಪ್ತಿಯಲ್ಲಿ ಯಾತ್ರೆ ಸಾಗಿತು. ಈ ವೇಳೆ ಡಿಜೆ ಸೌಂಡ್ ಗೆ ಯುವಕ ಯುವತಿಯರು ಹುಚ್ಚೆದ್ದು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ಮೆರವಣಿಗೆಯಲ್ಲಿ ಭಾರತ ಮಾತೆ, ಕನ್ನಡಾಂಭೆ ಭುವನೇಶ್ವರಿ ದೇವಿ, ಶ್ರೀರಾಮ, ಹನುಮ, ಶಿವ ಪ್ರತಿಮೆಗಳೊಂದಿಗೆ ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಭುವನೇಶ್ವರಿದೇವಿಯ ಮೆರವಣಿಗೆ ವಿವಿಧ ಕಲಾತಂಡಗಳೊಡನೆ ನಡೆಯಿತು.
ನಂತರ ಕಾರ್ಕಳದ ಶೀಕಾಂತ್ ಶೆಟ್ಟಿ ಅವರಿಂದ ದಿಕ್ಸೂಚಿ ಭಾಷಣ ನಡೆಯಿತು. ಸಂಜೆ ರಾಮಾಯಣ ಕಥೆಯ ಲೇಸರ್ ಶೋ, ಬೃಹತ್ ರಾವಣ ದಹನ ಮತ್ತು ಆಕರ್ಷಕ ಸಿಡಿಮದ್ದುಗಳ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದವು.
ಕಳೆದ ಒಂಬತ್ತು ವರ್ಷಗಳಿಂದ ಶ್ರೀರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆಯನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಈ ಬಾರಿ ಚುನಾವಣೆಗಳ ಹಿನ್ನೆಲೆಯಲ್ಲಿ ತಡವಾಗಿದೆ. ಈ ಕಾರ್ಯಕ್ರಮವನ್ನು ಪಕ್ಷಾತೀತವಾಗಿ ಯಾವುದೇ ವ್ಯಕ್ತಿಯನ್ನು ವೈಭವೀಕರಿಸದೇ ವಿಜೃಂಭಣೆಯಿಂದ ಹಾಗೂ ಹೆಚ್ಚು ಸಂಭ್ರಮದಿಂದ ಆಯೋಜಿಸಲಾಗಿದೆ ಎಂದು ಬಜರಂಗದಳ ಕೋಲಾರ ವಿಭಾಗಿಯ ಸಂಯೋಜಕ ನರೇಶ್ ರೆಡ್ಡಿ ತಿಳಿಸಿದರು.
ಒಟ್ಟಾರೆ ಭಜರಂಗದಳ ಕಾರ್ಯಕರ್ತರು ಹೆಚ್ಚಿರುವ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭರ್ಜರಿ ಶೋಭಯಾತ್ರೆ ನಡೆಯಿತು. ಹಿಂದೂ ಸಮಾಜ ಒಗ್ಗೂಡಲು ಈ ಕಾರ್ಯಕ್ರಮ ಅನುಕೂಲ ಆಗುತ್ತದೆ ಎಂಬುದು ಕಾರ್ಯಕ್ರಮ ಆಯೋಜಕರ ಅಭಿಪ್ರಯಾವಾಗಿತ್ತು.
ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…