ನಗರದಲ್ಲಿ ಅದ್ಧೂರಿಯಾಗಿ ನಡೆದ ಶ್ರೀರಾಮೋತ್ಸವ‌ ಹಾಗೂ ಶ್ರೀರಾಮ ಶೋಭಯಾತ್ರೆ

ಧಾರ್ಮಿಕ ಹಾಗೂ ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಹಿಂದು ಬಾಂಧವರ ಸಂಘಟನೆ, ಹಿಂದೂಗಳ ಒಗ್ಗೂಡುವಿಕೆಗಾಗಿ  ವಿಶ್ವ ಹಿಂದೂ ಪರಿಷತ್, ಬಜರಂಗ ದಳ ವತಿಯಿಂದ ನಗರದಲ್ಲಿ ಅದ್ಧೂರಿಯಾಗಿ ಶ್ರೀರಾಮೋತ್ಸವ‌ ಹಾಗೂ  ಬೃಹತ್ ಶ್ರೀರಾಮ ಶೋಭಯಾತ್ರೆ ನಡೆಯಿತು.ಜೂನ್ 28ರಂದು ಸಂಜೆ 4 ಗಂಟೆಗೆ ನಗರದ ಮುತ್ಯಾಲಮ್ಮ ದೇವಾಲಯದ ಬಳಿಯಿಂದ ಬೈಕ್, ಕಾರು ಸೇರಿದಂತೆ ವಿವಿಧ ವಾಹನಗಳ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು. ಸಂಜೆ 7 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಜೂನ್ 29ರಂದು ಬೆಳಿಗ್ಗೆ 7 ಗಂಟೆಯಿಂದ ಗೋ ಪೂಜೆ, ಮಹಾ ಸುದರ್ಶನ ಹೋಮ, ಶ್ರೀ ರಾಮ ತಾರಕ ಹೋಮ, ಗ್ರಾಮ ದೇವತೆ ಹೋಮ, ಮಧ್ಯಾಹ್ನ ಸಾವಿರಾರು ಮಹಿಳೆಯರಿಂದ ಲಲಿತ ಸಹಸ್ರನಾಮ ಮತ್ತು ಹನುಮಾನ್ ಚಾಲಿಸ್ ಸಾಮೂಹಿಕ ಪಠಣ ನಡೆಯಿತು. ಸಂಜೆ 4 ಗಂಟೆಗೆ ಶ್ರೀರಾಮ ಕಲ್ಯಾಣೋತ್ಸವ ನಡೆಯಿತು, ಕಲ್ಯಾಣೋತ್ಸದಲ್ಲಿ ಭಾರೀ ಸಂಖ್ಯೆಯಲ್ಲಿ ದಂಪತಿಗಳು ಭಾಗವಹಿಸಿದ್ದರು. ನಂತರ ಗೋ ಆರತಿ ನಡೆಯಿತು.

ಕೊನೆಯ‌ ದಿನವಾದ ಭಾನುವಾರದಂದು ಶ್ರೀರಾಮ ಶೋಭಯಾತ್ರೆಯು ಸಾವಿರಾರು ಹಿಂದೂ ಕಾರ್ಯಕರ್ತರೊಂದಿಗೆ ನಗರದ ಭಗತ್ ಸಿಂಗ್ ಕ್ರೀಡಾಂಗಣದಿಂದ ಹೊರಟು, ತಾಲೂಕು ಕಚೇರಿ, ಸೌಂದರ್ಯ ಮಹಲ್ ಸರ್ಕಲ್ ಸೇರಿ ಒಟ್ಟು 10 ಕಿ.ಮೀ ಗೂ ಹೆಚ್ಚು ವ್ಯಾಪ್ತಿಯಲ್ಲಿ ಯಾತ್ರೆ ಸಾಗಿತು. ಈ ವೇಳೆ ಡಿಜೆ ಸೌಂಡ್ ಗೆ ಯುವಕ ಯುವತಿಯರು ಹುಚ್ಚೆದ್ದು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.

ಮೆರವಣಿಗೆಯಲ್ಲಿ ಭಾರತ ಮಾತೆ, ಕನ್ನಡಾಂಭೆ ಭುವನೇಶ್ವರಿ ದೇವಿ, ಶ್ರೀರಾಮ, ಹನುಮ, ಶಿವ ಪ್ರತಿಮೆಗಳೊಂದಿಗೆ ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಭುವನೇಶ್ವರಿದೇವಿಯ ಮೆರವಣಿಗೆ ವಿವಿಧ ಕಲಾತಂಡಗಳೊಡನೆ ನಡೆಯಿತು.

ನಂತರ ಕಾರ್ಕಳದ ಶೀಕಾಂತ್ ಶೆಟ್ಟಿ ಅವರಿಂದ ದಿಕ್ಸೂಚಿ ಭಾಷಣ ನಡೆಯಿತು. ಸಂಜೆ ರಾಮಾಯಣ ಕಥೆಯ ಲೇಸರ್ ಶೋ, ಬೃಹತ್ ರಾವಣ ದಹನ ಮತ್ತು ಆಕರ್ಷಕ ಸಿಡಿಮದ್ದುಗಳ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದವು.

ಕಳೆದ ಒಂಬತ್ತು ವರ್ಷಗಳಿಂದ ಶ್ರೀರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆಯನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಈ ಬಾರಿ ಚುನಾವಣೆಗಳ ಹಿನ್ನೆಲೆಯಲ್ಲಿ ತಡವಾಗಿದೆ. ಈ ಕಾರ್ಯಕ್ರಮವನ್ನು ಪಕ್ಷಾತೀತವಾಗಿ ಯಾವುದೇ ವ್ಯಕ್ತಿಯನ್ನು ವೈಭವೀಕರಿಸದೇ ವಿಜೃಂಭಣೆಯಿಂದ ಹಾಗೂ ಹೆಚ್ಚು ಸಂಭ್ರಮದಿಂದ ಆಯೋಜಿಸಲಾಗಿದೆ ಎಂದು ಬಜರಂಗದಳ ಕೋಲಾರ ವಿಭಾಗಿಯ ಸಂಯೋಜಕ ನರೇಶ್ ರೆಡ್ಡಿ ತಿಳಿಸಿದರು.

ಒಟ್ಟಾರೆ ಭಜರಂಗದಳ ಕಾರ್ಯಕರ್ತರು ಹೆಚ್ಚಿರುವ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭರ್ಜರಿ ಶೋಭಯಾತ್ರೆ ನಡೆಯಿತು. ಹಿಂದೂ ಸಮಾಜ‌ ಒಗ್ಗೂಡಲು ಈ ಕಾರ್ಯಕ್ರಮ ಅನುಕೂಲ ಆಗುತ್ತದೆ ಎಂಬುದು ಕಾರ್ಯಕ್ರಮ ಆಯೋಜಕರ ಅಭಿಪ್ರಯಾವಾಗಿತ್ತು.

ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

15 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago