ನಗರದಲ್ಲಿ ಅದ್ಧೂರಿಯಾಗಿ ನಡೆದ ಶ್ರೀರಾಮೋತ್ಸವ‌ ಹಾಗೂ ಶ್ರೀರಾಮ ಶೋಭಯಾತ್ರೆ

ಧಾರ್ಮಿಕ ಹಾಗೂ ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಹಿಂದು ಬಾಂಧವರ ಸಂಘಟನೆ, ಹಿಂದೂಗಳ ಒಗ್ಗೂಡುವಿಕೆಗಾಗಿ  ವಿಶ್ವ ಹಿಂದೂ ಪರಿಷತ್, ಬಜರಂಗ ದಳ ವತಿಯಿಂದ ನಗರದಲ್ಲಿ ಅದ್ಧೂರಿಯಾಗಿ ಶ್ರೀರಾಮೋತ್ಸವ‌ ಹಾಗೂ  ಬೃಹತ್ ಶ್ರೀರಾಮ ಶೋಭಯಾತ್ರೆ ನಡೆಯಿತು.ಜೂನ್ 28ರಂದು ಸಂಜೆ 4 ಗಂಟೆಗೆ ನಗರದ ಮುತ್ಯಾಲಮ್ಮ ದೇವಾಲಯದ ಬಳಿಯಿಂದ ಬೈಕ್, ಕಾರು ಸೇರಿದಂತೆ ವಿವಿಧ ವಾಹನಗಳ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು. ಸಂಜೆ 7 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಜೂನ್ 29ರಂದು ಬೆಳಿಗ್ಗೆ 7 ಗಂಟೆಯಿಂದ ಗೋ ಪೂಜೆ, ಮಹಾ ಸುದರ್ಶನ ಹೋಮ, ಶ್ರೀ ರಾಮ ತಾರಕ ಹೋಮ, ಗ್ರಾಮ ದೇವತೆ ಹೋಮ, ಮಧ್ಯಾಹ್ನ ಸಾವಿರಾರು ಮಹಿಳೆಯರಿಂದ ಲಲಿತ ಸಹಸ್ರನಾಮ ಮತ್ತು ಹನುಮಾನ್ ಚಾಲಿಸ್ ಸಾಮೂಹಿಕ ಪಠಣ ನಡೆಯಿತು. ಸಂಜೆ 4 ಗಂಟೆಗೆ ಶ್ರೀರಾಮ ಕಲ್ಯಾಣೋತ್ಸವ ನಡೆಯಿತು, ಕಲ್ಯಾಣೋತ್ಸದಲ್ಲಿ ಭಾರೀ ಸಂಖ್ಯೆಯಲ್ಲಿ ದಂಪತಿಗಳು ಭಾಗವಹಿಸಿದ್ದರು. ನಂತರ ಗೋ ಆರತಿ ನಡೆಯಿತು.

ಕೊನೆಯ‌ ದಿನವಾದ ಭಾನುವಾರದಂದು ಶ್ರೀರಾಮ ಶೋಭಯಾತ್ರೆಯು ಸಾವಿರಾರು ಹಿಂದೂ ಕಾರ್ಯಕರ್ತರೊಂದಿಗೆ ನಗರದ ಭಗತ್ ಸಿಂಗ್ ಕ್ರೀಡಾಂಗಣದಿಂದ ಹೊರಟು, ತಾಲೂಕು ಕಚೇರಿ, ಸೌಂದರ್ಯ ಮಹಲ್ ಸರ್ಕಲ್ ಸೇರಿ ಒಟ್ಟು 10 ಕಿ.ಮೀ ಗೂ ಹೆಚ್ಚು ವ್ಯಾಪ್ತಿಯಲ್ಲಿ ಯಾತ್ರೆ ಸಾಗಿತು. ಈ ವೇಳೆ ಡಿಜೆ ಸೌಂಡ್ ಗೆ ಯುವಕ ಯುವತಿಯರು ಹುಚ್ಚೆದ್ದು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.

ಮೆರವಣಿಗೆಯಲ್ಲಿ ಭಾರತ ಮಾತೆ, ಕನ್ನಡಾಂಭೆ ಭುವನೇಶ್ವರಿ ದೇವಿ, ಶ್ರೀರಾಮ, ಹನುಮ, ಶಿವ ಪ್ರತಿಮೆಗಳೊಂದಿಗೆ ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಭುವನೇಶ್ವರಿದೇವಿಯ ಮೆರವಣಿಗೆ ವಿವಿಧ ಕಲಾತಂಡಗಳೊಡನೆ ನಡೆಯಿತು.

ನಂತರ ಕಾರ್ಕಳದ ಶೀಕಾಂತ್ ಶೆಟ್ಟಿ ಅವರಿಂದ ದಿಕ್ಸೂಚಿ ಭಾಷಣ ನಡೆಯಿತು. ಸಂಜೆ ರಾಮಾಯಣ ಕಥೆಯ ಲೇಸರ್ ಶೋ, ಬೃಹತ್ ರಾವಣ ದಹನ ಮತ್ತು ಆಕರ್ಷಕ ಸಿಡಿಮದ್ದುಗಳ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದವು.

ಕಳೆದ ಒಂಬತ್ತು ವರ್ಷಗಳಿಂದ ಶ್ರೀರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆಯನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಈ ಬಾರಿ ಚುನಾವಣೆಗಳ ಹಿನ್ನೆಲೆಯಲ್ಲಿ ತಡವಾಗಿದೆ. ಈ ಕಾರ್ಯಕ್ರಮವನ್ನು ಪಕ್ಷಾತೀತವಾಗಿ ಯಾವುದೇ ವ್ಯಕ್ತಿಯನ್ನು ವೈಭವೀಕರಿಸದೇ ವಿಜೃಂಭಣೆಯಿಂದ ಹಾಗೂ ಹೆಚ್ಚು ಸಂಭ್ರಮದಿಂದ ಆಯೋಜಿಸಲಾಗಿದೆ ಎಂದು ಬಜರಂಗದಳ ಕೋಲಾರ ವಿಭಾಗಿಯ ಸಂಯೋಜಕ ನರೇಶ್ ರೆಡ್ಡಿ ತಿಳಿಸಿದರು.

ಒಟ್ಟಾರೆ ಭಜರಂಗದಳ ಕಾರ್ಯಕರ್ತರು ಹೆಚ್ಚಿರುವ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭರ್ಜರಿ ಶೋಭಯಾತ್ರೆ ನಡೆಯಿತು. ಹಿಂದೂ ಸಮಾಜ‌ ಒಗ್ಗೂಡಲು ಈ ಕಾರ್ಯಕ್ರಮ ಅನುಕೂಲ ಆಗುತ್ತದೆ ಎಂಬುದು ಕಾರ್ಯಕ್ರಮ ಆಯೋಜಕರ ಅಭಿಪ್ರಯಾವಾಗಿತ್ತು.

ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

4 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

12 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

12 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago