ಧಾರ್ಮಿಕ ಹಾಗೂ ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಹಿಂದು ಬಾಂಧವರ ಸಂಘಟನೆ, ಹಿಂದೂಗಳ ಒಗ್ಗೂಡುವಿಕೆಗಾಗಿ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ವತಿಯಿಂದ ನಗರದಲ್ಲಿ ಅದ್ಧೂರಿಯಾಗಿ ಶ್ರೀರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಯಾತ್ರೆ ನಡೆಯಿತು.
ಕೊನೆಯ ದಿನವಾದ ಭಾನುವಾರದಂದು ಶ್ರೀರಾಮ ಶೋಭಯಾತ್ರೆಯು ಸಾವಿರಾರು ಹಿಂದೂ ಕಾರ್ಯಕರ್ತರೊಂದಿಗೆ ನಗರದ ಭಗತ್ ಸಿಂಗ್ ಕ್ರೀಡಾಂಗಣದಿಂದ ಹೊರಟು, ತಾಲೂಕು ಕಚೇರಿ, ಸೌಂದರ್ಯ ಮಹಲ್ ಸರ್ಕಲ್ ಸೇರಿ ಒಟ್ಟು 10 ಕಿ.ಮೀ ಗೂ ಹೆಚ್ಚು ವ್ಯಾಪ್ತಿಯಲ್ಲಿ ಯಾತ್ರೆ ಸಾಗಿತು. ಈ ವೇಳೆ ಡಿಜೆ ಸೌಂಡ್ ಗೆ ಯುವಕ ಯುವತಿಯರು ಹುಚ್ಚೆದ್ದು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ಮೆರವಣಿಗೆಯಲ್ಲಿ ಭಾರತ ಮಾತೆ, ಕನ್ನಡಾಂಭೆ ಭುವನೇಶ್ವರಿ ದೇವಿ, ಶ್ರೀರಾಮ, ಹನುಮ, ಶಿವ ಪ್ರತಿಮೆಗಳೊಂದಿಗೆ ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಭುವನೇಶ್ವರಿದೇವಿಯ ಮೆರವಣಿಗೆ ವಿವಿಧ ಕಲಾತಂಡಗಳೊಡನೆ ನಡೆಯಿತು.
ನಂತರ ಕಾರ್ಕಳದ ಶೀಕಾಂತ್ ಶೆಟ್ಟಿ ಅವರಿಂದ ದಿಕ್ಸೂಚಿ ಭಾಷಣ ನಡೆಯಿತು. ಸಂಜೆ ರಾಮಾಯಣ ಕಥೆಯ ಲೇಸರ್ ಶೋ, ಬೃಹತ್ ರಾವಣ ದಹನ ಮತ್ತು ಆಕರ್ಷಕ ಸಿಡಿಮದ್ದುಗಳ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದವು.
ಕಳೆದ ಒಂಬತ್ತು ವರ್ಷಗಳಿಂದ ಶ್ರೀರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆಯನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಈ ಬಾರಿ ಚುನಾವಣೆಗಳ ಹಿನ್ನೆಲೆಯಲ್ಲಿ ತಡವಾಗಿದೆ. ಈ ಕಾರ್ಯಕ್ರಮವನ್ನು ಪಕ್ಷಾತೀತವಾಗಿ ಯಾವುದೇ ವ್ಯಕ್ತಿಯನ್ನು ವೈಭವೀಕರಿಸದೇ ವಿಜೃಂಭಣೆಯಿಂದ ಹಾಗೂ ಹೆಚ್ಚು ಸಂಭ್ರಮದಿಂದ ಆಯೋಜಿಸಲಾಗಿದೆ ಎಂದು ಬಜರಂಗದಳ ಕೋಲಾರ ವಿಭಾಗಿಯ ಸಂಯೋಜಕ ನರೇಶ್ ರೆಡ್ಡಿ ತಿಳಿಸಿದರು.
ಒಟ್ಟಾರೆ ಭಜರಂಗದಳ ಕಾರ್ಯಕರ್ತರು ಹೆಚ್ಚಿರುವ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭರ್ಜರಿ ಶೋಭಯಾತ್ರೆ ನಡೆಯಿತು. ಹಿಂದೂ ಸಮಾಜ ಒಗ್ಗೂಡಲು ಈ ಕಾರ್ಯಕ್ರಮ ಅನುಕೂಲ ಆಗುತ್ತದೆ ಎಂಬುದು ಕಾರ್ಯಕ್ರಮ ಆಯೋಜಕರ ಅಭಿಪ್ರಯಾವಾಗಿತ್ತು.
ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…