ಧಾರ್ಮಿಕ ಹಾಗೂ ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಹಿಂದು ಬಾಂಧವರ ಸಂಘಟನೆ, ಹಿಂದೂಗಳ ಒಗ್ಗೂಡುವಿಕೆಗಾಗಿ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ವತಿಯಿಂದ ನಗರದಲ್ಲಿ ಅದ್ಧೂರಿಯಾಗಿ ಶ್ರೀರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಯಾತ್ರೆ ನಡೆಯಿತು.
ಕೊನೆಯ ದಿನವಾದ ಭಾನುವಾರದಂದು ಶ್ರೀರಾಮ ಶೋಭಯಾತ್ರೆಯು ಸಾವಿರಾರು ಹಿಂದೂ ಕಾರ್ಯಕರ್ತರೊಂದಿಗೆ ನಗರದ ಭಗತ್ ಸಿಂಗ್ ಕ್ರೀಡಾಂಗಣದಿಂದ ಹೊರಟು, ತಾಲೂಕು ಕಚೇರಿ, ಸೌಂದರ್ಯ ಮಹಲ್ ಸರ್ಕಲ್ ಸೇರಿ ಒಟ್ಟು 10 ಕಿ.ಮೀ ಗೂ ಹೆಚ್ಚು ವ್ಯಾಪ್ತಿಯಲ್ಲಿ ಯಾತ್ರೆ ಸಾಗಿತು. ಈ ವೇಳೆ ಡಿಜೆ ಸೌಂಡ್ ಗೆ ಯುವಕ ಯುವತಿಯರು ಹುಚ್ಚೆದ್ದು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ಮೆರವಣಿಗೆಯಲ್ಲಿ ಭಾರತ ಮಾತೆ, ಕನ್ನಡಾಂಭೆ ಭುವನೇಶ್ವರಿ ದೇವಿ, ಶ್ರೀರಾಮ, ಹನುಮ, ಶಿವ ಪ್ರತಿಮೆಗಳೊಂದಿಗೆ ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಭುವನೇಶ್ವರಿದೇವಿಯ ಮೆರವಣಿಗೆ ವಿವಿಧ ಕಲಾತಂಡಗಳೊಡನೆ ನಡೆಯಿತು.
ನಂತರ ಕಾರ್ಕಳದ ಶೀಕಾಂತ್ ಶೆಟ್ಟಿ ಅವರಿಂದ ದಿಕ್ಸೂಚಿ ಭಾಷಣ ನಡೆಯಿತು. ಸಂಜೆ ರಾಮಾಯಣ ಕಥೆಯ ಲೇಸರ್ ಶೋ, ಬೃಹತ್ ರಾವಣ ದಹನ ಮತ್ತು ಆಕರ್ಷಕ ಸಿಡಿಮದ್ದುಗಳ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದವು.
ಕಳೆದ ಒಂಬತ್ತು ವರ್ಷಗಳಿಂದ ಶ್ರೀರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆಯನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಈ ಬಾರಿ ಚುನಾವಣೆಗಳ ಹಿನ್ನೆಲೆಯಲ್ಲಿ ತಡವಾಗಿದೆ. ಈ ಕಾರ್ಯಕ್ರಮವನ್ನು ಪಕ್ಷಾತೀತವಾಗಿ ಯಾವುದೇ ವ್ಯಕ್ತಿಯನ್ನು ವೈಭವೀಕರಿಸದೇ ವಿಜೃಂಭಣೆಯಿಂದ ಹಾಗೂ ಹೆಚ್ಚು ಸಂಭ್ರಮದಿಂದ ಆಯೋಜಿಸಲಾಗಿದೆ ಎಂದು ಬಜರಂಗದಳ ಕೋಲಾರ ವಿಭಾಗಿಯ ಸಂಯೋಜಕ ನರೇಶ್ ರೆಡ್ಡಿ ತಿಳಿಸಿದರು.
ಒಟ್ಟಾರೆ ಭಜರಂಗದಳ ಕಾರ್ಯಕರ್ತರು ಹೆಚ್ಚಿರುವ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭರ್ಜರಿ ಶೋಭಯಾತ್ರೆ ನಡೆಯಿತು. ಹಿಂದೂ ಸಮಾಜ ಒಗ್ಗೂಡಲು ಈ ಕಾರ್ಯಕ್ರಮ ಅನುಕೂಲ ಆಗುತ್ತದೆ ಎಂಬುದು ಕಾರ್ಯಕ್ರಮ ಆಯೋಜಕರ ಅಭಿಪ್ರಯಾವಾಗಿತ್ತು.
ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…