ಧಾರ್ಮಿಕ ಹಾಗೂ ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಹಿಂದು ಬಾಂಧವರ ಸಂಘಟನೆ, ಹಿಂದೂಗಳ ಒಗ್ಗೂಡುವಿಕೆಗಾಗಿ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ವತಿಯಿಂದ ನಗರದಲ್ಲಿ ಅದ್ಧೂರಿಯಾಗಿ ಶ್ರೀರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಯಾತ್ರೆ ನಡೆಯಿತು.
ಕೊನೆಯ ದಿನವಾದ ಭಾನುವಾರದಂದು ಶ್ರೀರಾಮ ಶೋಭಯಾತ್ರೆಯು ಸಾವಿರಾರು ಹಿಂದೂ ಕಾರ್ಯಕರ್ತರೊಂದಿಗೆ ನಗರದ ಭಗತ್ ಸಿಂಗ್ ಕ್ರೀಡಾಂಗಣದಿಂದ ಹೊರಟು, ತಾಲೂಕು ಕಚೇರಿ, ಸೌಂದರ್ಯ ಮಹಲ್ ಸರ್ಕಲ್ ಸೇರಿ ಒಟ್ಟು 10 ಕಿ.ಮೀ ಗೂ ಹೆಚ್ಚು ವ್ಯಾಪ್ತಿಯಲ್ಲಿ ಯಾತ್ರೆ ಸಾಗಿತು. ಈ ವೇಳೆ ಡಿಜೆ ಸೌಂಡ್ ಗೆ ಯುವಕ ಯುವತಿಯರು ಹುಚ್ಚೆದ್ದು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ಮೆರವಣಿಗೆಯಲ್ಲಿ ಭಾರತ ಮಾತೆ, ಕನ್ನಡಾಂಭೆ ಭುವನೇಶ್ವರಿ ದೇವಿ, ಶ್ರೀರಾಮ, ಹನುಮ, ಶಿವ ಪ್ರತಿಮೆಗಳೊಂದಿಗೆ ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಭುವನೇಶ್ವರಿದೇವಿಯ ಮೆರವಣಿಗೆ ವಿವಿಧ ಕಲಾತಂಡಗಳೊಡನೆ ನಡೆಯಿತು.
ನಂತರ ಕಾರ್ಕಳದ ಶೀಕಾಂತ್ ಶೆಟ್ಟಿ ಅವರಿಂದ ದಿಕ್ಸೂಚಿ ಭಾಷಣ ನಡೆಯಿತು. ಸಂಜೆ ರಾಮಾಯಣ ಕಥೆಯ ಲೇಸರ್ ಶೋ, ಬೃಹತ್ ರಾವಣ ದಹನ ಮತ್ತು ಆಕರ್ಷಕ ಸಿಡಿಮದ್ದುಗಳ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದವು.
ಕಳೆದ ಒಂಬತ್ತು ವರ್ಷಗಳಿಂದ ಶ್ರೀರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆಯನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಈ ಬಾರಿ ಚುನಾವಣೆಗಳ ಹಿನ್ನೆಲೆಯಲ್ಲಿ ತಡವಾಗಿದೆ. ಈ ಕಾರ್ಯಕ್ರಮವನ್ನು ಪಕ್ಷಾತೀತವಾಗಿ ಯಾವುದೇ ವ್ಯಕ್ತಿಯನ್ನು ವೈಭವೀಕರಿಸದೇ ವಿಜೃಂಭಣೆಯಿಂದ ಹಾಗೂ ಹೆಚ್ಚು ಸಂಭ್ರಮದಿಂದ ಆಯೋಜಿಸಲಾಗಿದೆ ಎಂದು ಬಜರಂಗದಳ ಕೋಲಾರ ವಿಭಾಗಿಯ ಸಂಯೋಜಕ ನರೇಶ್ ರೆಡ್ಡಿ ತಿಳಿಸಿದರು.
ಒಟ್ಟಾರೆ ಭಜರಂಗದಳ ಕಾರ್ಯಕರ್ತರು ಹೆಚ್ಚಿರುವ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭರ್ಜರಿ ಶೋಭಯಾತ್ರೆ ನಡೆಯಿತು. ಹಿಂದೂ ಸಮಾಜ ಒಗ್ಗೂಡಲು ಈ ಕಾರ್ಯಕ್ರಮ ಅನುಕೂಲ ಆಗುತ್ತದೆ ಎಂಬುದು ಕಾರ್ಯಕ್ರಮ ಆಯೋಜಕರ ಅಭಿಪ್ರಯಾವಾಗಿತ್ತು.
ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…