ನಗರದಲ್ಲಿ ಅಪಘಾತ, ವಾಹನ ದಟ್ಟಣೆ ನಿಯಂತ್ರಣಕ್ಕೆ ಕಾಂಗ್ರೆಸ್ ಮುಖಂಡರ ಮನವಿ

ನಗರದಲ್ಲಿ ಇತ್ತೀಚೆಗೆ ಪದೇ ಪದೇ ಅಪಘಾತಗಳು ನಡೆಯುತ್ತಿವೆ.‌ ಇದರಿಂದ ಆನೇಕ ಸಾವು ನೋವು ಸಂಭವಿಸಿವೆ. ಇದಕ್ಕೆಲ್ಲಾ ಕಾರಣ ವಾಹನ ಸವಾರರು ಸಂಚಾರಿ ನಿಯಮ ಪಾಲನೆ ಮಾಡದೇ ಇರುವುದು, ವೇಗವಾಗಿ, ಅಡ್ಡಾದಿಡ್ಡಿಯಾಗಿ, ಅಜಾಗರೂಕವಾಗಿ, ಬೈಕ್ ಸವಾರರು ಹೆಲ್ಮೆಟ್ ಹಾಕದೇ, ಕಾರು ಚಾಲಕರು ಸೀಟ್ ಬೆಲ್ಟ್ ಹಾಕದೇ ವಾಹನ ಚಾಲನೆ ಮಾಡುವುದರಿಂದ. ಅದೇರೀತಿ ಸಂಬಂಧಿಸಿದ ಇಲಾಖೆಗಳಿಂದ ನಡೆಸಲಾಗುವ ಅವೈಜ್ಞಾನಿಕ ರಸ್ತೆ ಅಭಿವೃದ್ಧಿ ಕಾಮಗಾರಿ, ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳು, ರಸ್ತೆ ಇಕ್ಕೆಲಗಳಲ್ಲಿ ತಲೆಎತ್ತಿರುವ ಅಂಗಡಿಗಳು ಸೇರಿದಂತೆ ಇರತೆ ಕಾರಣಗಳಿದಿಂದಾಗಿ ಅಪಘಾತಗಳು ಸಂಭವಿಸುತ್ತವೆ.

ಗುರುವಾರ ಬೆಳಗ್ಗೆ ಮಗಳನ್ನು ಶಾಲೆಗೆ ಬಿಡಲು ಬೈಕ್ ನಲ್ಲಿ ಬಂದಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ತಂದೆ ಸಾವನಪ್ಪಿದ್ದು, ಮಗು ಜೀವನ್ಮರಣ ನಡುವೆ ಹೋರಾಟ ನಡೆಸುವ ಶೋಚನೀಯ ಸ್ಥಿತಿ ಎದುರಾಗಿರುವ ಹಿನ್ನೆಲೆ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಸದಸ್ಯರು ನಗರ ಠಾಣೆಗೆ ಭೇಟಿ ನೀಡಿ ಅಪಘಾತಗಳನ್ನು ನಿಯಂತ್ರಣ ಮಾಡುವ ಮುನ್ನೆಚ್ಚರಿಕೆ ಕ್ರಮಗಳನ್ನು ಶೀಘ್ರವಾಗಿ ಕೈಗೊಳ್ಳುವಂತೆ ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಪ್ರೀತಂ ಶ್ರೇಯಕರ ಅವರಿಗೆ ಮನವಿ ಮಾಡಲಾಗಿದೆ.

ನಗರದಲ್ಲಿ ಪ್ರತಿನಿತ್ಯ ಡಿಕ್ರಾಸ್, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ (ಟಿ.ಬಿ.ಸರ್ಕಲ್), ಎಪಿಎಂಸಿ ಮಾರುಕಟ್ಟೆ ಮುಂಭಾಗ, ಖಾಸ್ ಬಾಗ್, ರೈಲ್ವೇ ಸ್ಟೇಷನ್, ಡೈರಿ ಸರ್ಕಲ್, ತಾಲೂಕು ಕಚೇರಿ ವೃತ್ತ, ಕೊಂಗಾಡಿಯಪ್ಪ ರಸ್ತೆ‌ಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ, ಇಂತಹ ಸ್ಥಳಗಳಲ್ಲಿ ಸಂಚಾರಿ ನಿಯಮ ಅಳವಡಿಕೆ, ಸಿಬ್ಬಂದಿ ನಿಯೋಜನೆ‌ ಮಾಡುವಂತೆ ಮನವಿ ಮಾಡಲಾಗಿದೆ. ಅದೇರೀತಿ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು ಅವರನ್ನು ಹತೋಟಿಗೆ ತರುವಂತೆ ಪೊಲೀಸ್ ಇಲಾಖೆಗೆ‌ ಸೂಚಿಸಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಪಿ.ಜಗನಾಥ್, ಅಪ್ಪಿ ವೆಂಕಟೇಶ್, ಬೈರೇಗೌಡ, ನಗರಸಭೆ ಸದಸ್ಯರಾದ ಆನಂದ್, ನಾಗರಾಜ್, ಶಿವು, ನಗರಸಭೆ ಸದಸ್ಯ ಶಿವಶಂಕರ್, ಮುಖಂಡರಾದ ಆದಿತ್ಯ ನಾಗೇಶ್, ಶ್ರೀನಗರ ಬಶೀರ್, ಮುನಿರಾಜು, ಆಂಜನಮೂರ್ತಿ, ಜಗದೀಶ್ ರೆಡ್ಡಿ, ಮುಖಂಡರಾದ ಮುತ್ತಣ್ಣ, ಜವಾಜಿ ರಾಜೇಶ್, ಮಾರಪ್ಪ, ಅಶೋಕ್, ಅಂಬರೀಶ್, ರಾಮಚಂದ್ರ ರೆಡ್ಡಿ ಸೇರಿದಂತೆ ಮತ್ತಿತರರಿದ್ದರು.

Ramesh Babu

Journalist

Recent Posts

ನೇಪಾಳದ ದಂಗೆ……

ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…

4 hours ago

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

7 hours ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

17 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

18 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

21 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

23 hours ago