ನಗರದಲ್ಲಿ ಅಪಘಾತ, ವಾಹನ ದಟ್ಟಣೆ ನಿಯಂತ್ರಣಕ್ಕೆ ಕಾಂಗ್ರೆಸ್ ಮುಖಂಡರ ಮನವಿ

ನಗರದಲ್ಲಿ ಇತ್ತೀಚೆಗೆ ಪದೇ ಪದೇ ಅಪಘಾತಗಳು ನಡೆಯುತ್ತಿವೆ.‌ ಇದರಿಂದ ಆನೇಕ ಸಾವು ನೋವು ಸಂಭವಿಸಿವೆ. ಇದಕ್ಕೆಲ್ಲಾ ಕಾರಣ ವಾಹನ ಸವಾರರು ಸಂಚಾರಿ ನಿಯಮ ಪಾಲನೆ ಮಾಡದೇ ಇರುವುದು, ವೇಗವಾಗಿ, ಅಡ್ಡಾದಿಡ್ಡಿಯಾಗಿ, ಅಜಾಗರೂಕವಾಗಿ, ಬೈಕ್ ಸವಾರರು ಹೆಲ್ಮೆಟ್ ಹಾಕದೇ, ಕಾರು ಚಾಲಕರು ಸೀಟ್ ಬೆಲ್ಟ್ ಹಾಕದೇ ವಾಹನ ಚಾಲನೆ ಮಾಡುವುದರಿಂದ. ಅದೇರೀತಿ ಸಂಬಂಧಿಸಿದ ಇಲಾಖೆಗಳಿಂದ ನಡೆಸಲಾಗುವ ಅವೈಜ್ಞಾನಿಕ ರಸ್ತೆ ಅಭಿವೃದ್ಧಿ ಕಾಮಗಾರಿ, ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳು, ರಸ್ತೆ ಇಕ್ಕೆಲಗಳಲ್ಲಿ ತಲೆಎತ್ತಿರುವ ಅಂಗಡಿಗಳು ಸೇರಿದಂತೆ ಇರತೆ ಕಾರಣಗಳಿದಿಂದಾಗಿ ಅಪಘಾತಗಳು ಸಂಭವಿಸುತ್ತವೆ.

ಗುರುವಾರ ಬೆಳಗ್ಗೆ ಮಗಳನ್ನು ಶಾಲೆಗೆ ಬಿಡಲು ಬೈಕ್ ನಲ್ಲಿ ಬಂದಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ತಂದೆ ಸಾವನಪ್ಪಿದ್ದು, ಮಗು ಜೀವನ್ಮರಣ ನಡುವೆ ಹೋರಾಟ ನಡೆಸುವ ಶೋಚನೀಯ ಸ್ಥಿತಿ ಎದುರಾಗಿರುವ ಹಿನ್ನೆಲೆ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಸದಸ್ಯರು ನಗರ ಠಾಣೆಗೆ ಭೇಟಿ ನೀಡಿ ಅಪಘಾತಗಳನ್ನು ನಿಯಂತ್ರಣ ಮಾಡುವ ಮುನ್ನೆಚ್ಚರಿಕೆ ಕ್ರಮಗಳನ್ನು ಶೀಘ್ರವಾಗಿ ಕೈಗೊಳ್ಳುವಂತೆ ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಪ್ರೀತಂ ಶ್ರೇಯಕರ ಅವರಿಗೆ ಮನವಿ ಮಾಡಲಾಗಿದೆ.

ನಗರದಲ್ಲಿ ಪ್ರತಿನಿತ್ಯ ಡಿಕ್ರಾಸ್, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ (ಟಿ.ಬಿ.ಸರ್ಕಲ್), ಎಪಿಎಂಸಿ ಮಾರುಕಟ್ಟೆ ಮುಂಭಾಗ, ಖಾಸ್ ಬಾಗ್, ರೈಲ್ವೇ ಸ್ಟೇಷನ್, ಡೈರಿ ಸರ್ಕಲ್, ತಾಲೂಕು ಕಚೇರಿ ವೃತ್ತ, ಕೊಂಗಾಡಿಯಪ್ಪ ರಸ್ತೆ‌ಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ, ಇಂತಹ ಸ್ಥಳಗಳಲ್ಲಿ ಸಂಚಾರಿ ನಿಯಮ ಅಳವಡಿಕೆ, ಸಿಬ್ಬಂದಿ ನಿಯೋಜನೆ‌ ಮಾಡುವಂತೆ ಮನವಿ ಮಾಡಲಾಗಿದೆ. ಅದೇರೀತಿ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು ಅವರನ್ನು ಹತೋಟಿಗೆ ತರುವಂತೆ ಪೊಲೀಸ್ ಇಲಾಖೆಗೆ‌ ಸೂಚಿಸಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಪಿ.ಜಗನಾಥ್, ಅಪ್ಪಿ ವೆಂಕಟೇಶ್, ಬೈರೇಗೌಡ, ನಗರಸಭೆ ಸದಸ್ಯರಾದ ಆನಂದ್, ನಾಗರಾಜ್, ಶಿವು, ನಗರಸಭೆ ಸದಸ್ಯ ಶಿವಶಂಕರ್, ಮುಖಂಡರಾದ ಆದಿತ್ಯ ನಾಗೇಶ್, ಶ್ರೀನಗರ ಬಶೀರ್, ಮುನಿರಾಜು, ಆಂಜನಮೂರ್ತಿ, ಜಗದೀಶ್ ರೆಡ್ಡಿ, ಮುಖಂಡರಾದ ಮುತ್ತಣ್ಣ, ಜವಾಜಿ ರಾಜೇಶ್, ಮಾರಪ್ಪ, ಅಶೋಕ್, ಅಂಬರೀಶ್, ರಾಮಚಂದ್ರ ರೆಡ್ಡಿ ಸೇರಿದಂತೆ ಮತ್ತಿತರರಿದ್ದರು.

Ramesh Babu

Journalist

Recent Posts

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

11 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

11 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

17 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

18 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

1 day ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

1 day ago