ನಗರದಲ್ಲಿ ಇತ್ತೀಚೆಗೆ ಪದೇ ಪದೇ ಅಪಘಾತಗಳು ನಡೆಯುತ್ತಿವೆ. ಇದರಿಂದ ಆನೇಕ ಸಾವು ನೋವು ಸಂಭವಿಸಿವೆ. ಇದಕ್ಕೆಲ್ಲಾ ಕಾರಣ ವಾಹನ ಸವಾರರು ಸಂಚಾರಿ ನಿಯಮ ಪಾಲನೆ ಮಾಡದೇ ಇರುವುದು, ವೇಗವಾಗಿ, ಅಡ್ಡಾದಿಡ್ಡಿಯಾಗಿ, ಅಜಾಗರೂಕವಾಗಿ, ಬೈಕ್ ಸವಾರರು ಹೆಲ್ಮೆಟ್ ಹಾಕದೇ, ಕಾರು ಚಾಲಕರು ಸೀಟ್ ಬೆಲ್ಟ್ ಹಾಕದೇ ವಾಹನ ಚಾಲನೆ ಮಾಡುವುದರಿಂದ. ಅದೇರೀತಿ ಸಂಬಂಧಿಸಿದ ಇಲಾಖೆಗಳಿಂದ ನಡೆಸಲಾಗುವ ಅವೈಜ್ಞಾನಿಕ ರಸ್ತೆ ಅಭಿವೃದ್ಧಿ ಕಾಮಗಾರಿ, ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳು, ರಸ್ತೆ ಇಕ್ಕೆಲಗಳಲ್ಲಿ ತಲೆಎತ್ತಿರುವ ಅಂಗಡಿಗಳು ಸೇರಿದಂತೆ ಇರತೆ ಕಾರಣಗಳಿದಿಂದಾಗಿ ಅಪಘಾತಗಳು ಸಂಭವಿಸುತ್ತವೆ.
ಗುರುವಾರ ಬೆಳಗ್ಗೆ ಮಗಳನ್ನು ಶಾಲೆಗೆ ಬಿಡಲು ಬೈಕ್ ನಲ್ಲಿ ಬಂದಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ತಂದೆ ಸಾವನಪ್ಪಿದ್ದು, ಮಗು ಜೀವನ್ಮರಣ ನಡುವೆ ಹೋರಾಟ ನಡೆಸುವ ಶೋಚನೀಯ ಸ್ಥಿತಿ ಎದುರಾಗಿರುವ ಹಿನ್ನೆಲೆ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಸದಸ್ಯರು ನಗರ ಠಾಣೆಗೆ ಭೇಟಿ ನೀಡಿ ಅಪಘಾತಗಳನ್ನು ನಿಯಂತ್ರಣ ಮಾಡುವ ಮುನ್ನೆಚ್ಚರಿಕೆ ಕ್ರಮಗಳನ್ನು ಶೀಘ್ರವಾಗಿ ಕೈಗೊಳ್ಳುವಂತೆ ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಪ್ರೀತಂ ಶ್ರೇಯಕರ ಅವರಿಗೆ ಮನವಿ ಮಾಡಲಾಗಿದೆ.
ನಗರದಲ್ಲಿ ಪ್ರತಿನಿತ್ಯ ಡಿಕ್ರಾಸ್, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ (ಟಿ.ಬಿ.ಸರ್ಕಲ್), ಎಪಿಎಂಸಿ ಮಾರುಕಟ್ಟೆ ಮುಂಭಾಗ, ಖಾಸ್ ಬಾಗ್, ರೈಲ್ವೇ ಸ್ಟೇಷನ್, ಡೈರಿ ಸರ್ಕಲ್, ತಾಲೂಕು ಕಚೇರಿ ವೃತ್ತ, ಕೊಂಗಾಡಿಯಪ್ಪ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ, ಇಂತಹ ಸ್ಥಳಗಳಲ್ಲಿ ಸಂಚಾರಿ ನಿಯಮ ಅಳವಡಿಕೆ, ಸಿಬ್ಬಂದಿ ನಿಯೋಜನೆ ಮಾಡುವಂತೆ ಮನವಿ ಮಾಡಲಾಗಿದೆ. ಅದೇರೀತಿ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು ಅವರನ್ನು ಹತೋಟಿಗೆ ತರುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಪಿ.ಜಗನಾಥ್, ಅಪ್ಪಿ ವೆಂಕಟೇಶ್, ಬೈರೇಗೌಡ, ನಗರಸಭೆ ಸದಸ್ಯರಾದ ಆನಂದ್, ನಾಗರಾಜ್, ಶಿವು, ನಗರಸಭೆ ಸದಸ್ಯ ಶಿವಶಂಕರ್, ಮುಖಂಡರಾದ ಆದಿತ್ಯ ನಾಗೇಶ್, ಶ್ರೀನಗರ ಬಶೀರ್, ಮುನಿರಾಜು, ಆಂಜನಮೂರ್ತಿ, ಜಗದೀಶ್ ರೆಡ್ಡಿ, ಮುಖಂಡರಾದ ಮುತ್ತಣ್ಣ, ಜವಾಜಿ ರಾಜೇಶ್, ಮಾರಪ್ಪ, ಅಶೋಕ್, ಅಂಬರೀಶ್, ರಾಮಚಂದ್ರ ರೆಡ್ಡಿ ಸೇರಿದಂತೆ ಮತ್ತಿತರರಿದ್ದರು.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…
ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…
Blackjack is one of the most prominent gambling enterprise video games on the planet. It's…