ನಗರದಲ್ಲಿ ಅಪಘಾತ, ವಾಹನ ದಟ್ಟಣೆ ನಿಯಂತ್ರಣಕ್ಕೆ ಕಾಂಗ್ರೆಸ್ ಮುಖಂಡರ ಮನವಿ

ನಗರದಲ್ಲಿ ಇತ್ತೀಚೆಗೆ ಪದೇ ಪದೇ ಅಪಘಾತಗಳು ನಡೆಯುತ್ತಿವೆ.‌ ಇದರಿಂದ ಆನೇಕ ಸಾವು ನೋವು ಸಂಭವಿಸಿವೆ. ಇದಕ್ಕೆಲ್ಲಾ ಕಾರಣ ವಾಹನ ಸವಾರರು ಸಂಚಾರಿ ನಿಯಮ ಪಾಲನೆ ಮಾಡದೇ ಇರುವುದು, ವೇಗವಾಗಿ, ಅಡ್ಡಾದಿಡ್ಡಿಯಾಗಿ, ಅಜಾಗರೂಕವಾಗಿ, ಬೈಕ್ ಸವಾರರು ಹೆಲ್ಮೆಟ್ ಹಾಕದೇ, ಕಾರು ಚಾಲಕರು ಸೀಟ್ ಬೆಲ್ಟ್ ಹಾಕದೇ ವಾಹನ ಚಾಲನೆ ಮಾಡುವುದರಿಂದ. ಅದೇರೀತಿ ಸಂಬಂಧಿಸಿದ ಇಲಾಖೆಗಳಿಂದ ನಡೆಸಲಾಗುವ ಅವೈಜ್ಞಾನಿಕ ರಸ್ತೆ ಅಭಿವೃದ್ಧಿ ಕಾಮಗಾರಿ, ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳು, ರಸ್ತೆ ಇಕ್ಕೆಲಗಳಲ್ಲಿ ತಲೆಎತ್ತಿರುವ ಅಂಗಡಿಗಳು ಸೇರಿದಂತೆ ಇರತೆ ಕಾರಣಗಳಿದಿಂದಾಗಿ ಅಪಘಾತಗಳು ಸಂಭವಿಸುತ್ತವೆ.

ಗುರುವಾರ ಬೆಳಗ್ಗೆ ಮಗಳನ್ನು ಶಾಲೆಗೆ ಬಿಡಲು ಬೈಕ್ ನಲ್ಲಿ ಬಂದಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ತಂದೆ ಸಾವನಪ್ಪಿದ್ದು, ಮಗು ಜೀವನ್ಮರಣ ನಡುವೆ ಹೋರಾಟ ನಡೆಸುವ ಶೋಚನೀಯ ಸ್ಥಿತಿ ಎದುರಾಗಿರುವ ಹಿನ್ನೆಲೆ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಸದಸ್ಯರು ನಗರ ಠಾಣೆಗೆ ಭೇಟಿ ನೀಡಿ ಅಪಘಾತಗಳನ್ನು ನಿಯಂತ್ರಣ ಮಾಡುವ ಮುನ್ನೆಚ್ಚರಿಕೆ ಕ್ರಮಗಳನ್ನು ಶೀಘ್ರವಾಗಿ ಕೈಗೊಳ್ಳುವಂತೆ ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಪ್ರೀತಂ ಶ್ರೇಯಕರ ಅವರಿಗೆ ಮನವಿ ಮಾಡಲಾಗಿದೆ.

ನಗರದಲ್ಲಿ ಪ್ರತಿನಿತ್ಯ ಡಿಕ್ರಾಸ್, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ (ಟಿ.ಬಿ.ಸರ್ಕಲ್), ಎಪಿಎಂಸಿ ಮಾರುಕಟ್ಟೆ ಮುಂಭಾಗ, ಖಾಸ್ ಬಾಗ್, ರೈಲ್ವೇ ಸ್ಟೇಷನ್, ಡೈರಿ ಸರ್ಕಲ್, ತಾಲೂಕು ಕಚೇರಿ ವೃತ್ತ, ಕೊಂಗಾಡಿಯಪ್ಪ ರಸ್ತೆ‌ಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ, ಇಂತಹ ಸ್ಥಳಗಳಲ್ಲಿ ಸಂಚಾರಿ ನಿಯಮ ಅಳವಡಿಕೆ, ಸಿಬ್ಬಂದಿ ನಿಯೋಜನೆ‌ ಮಾಡುವಂತೆ ಮನವಿ ಮಾಡಲಾಗಿದೆ. ಅದೇರೀತಿ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು ಅವರನ್ನು ಹತೋಟಿಗೆ ತರುವಂತೆ ಪೊಲೀಸ್ ಇಲಾಖೆಗೆ‌ ಸೂಚಿಸಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಪಿ.ಜಗನಾಥ್, ಅಪ್ಪಿ ವೆಂಕಟೇಶ್, ಬೈರೇಗೌಡ, ನಗರಸಭೆ ಸದಸ್ಯರಾದ ಆನಂದ್, ನಾಗರಾಜ್, ಶಿವು, ನಗರಸಭೆ ಸದಸ್ಯ ಶಿವಶಂಕರ್, ಮುಖಂಡರಾದ ಆದಿತ್ಯ ನಾಗೇಶ್, ಶ್ರೀನಗರ ಬಶೀರ್, ಮುನಿರಾಜು, ಆಂಜನಮೂರ್ತಿ, ಜಗದೀಶ್ ರೆಡ್ಡಿ, ಮುಖಂಡರಾದ ಮುತ್ತಣ್ಣ, ಜವಾಜಿ ರಾಜೇಶ್, ಮಾರಪ್ಪ, ಅಶೋಕ್, ಅಂಬರೀಶ್, ರಾಮಚಂದ್ರ ರೆಡ್ಡಿ ಸೇರಿದಂತೆ ಮತ್ತಿತರರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 hour ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

14 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

18 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

18 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

22 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago