ನಗರದಲ್ಲಿ ಅಪಘಾತ, ವಾಹನ ದಟ್ಟಣೆ ನಿಯಂತ್ರಣಕ್ಕೆ ಕಾಂಗ್ರೆಸ್ ಮುಖಂಡರ ಮನವಿ

ನಗರದಲ್ಲಿ ಇತ್ತೀಚೆಗೆ ಪದೇ ಪದೇ ಅಪಘಾತಗಳು ನಡೆಯುತ್ತಿವೆ.‌ ಇದರಿಂದ ಆನೇಕ ಸಾವು ನೋವು ಸಂಭವಿಸಿವೆ. ಇದಕ್ಕೆಲ್ಲಾ ಕಾರಣ ವಾಹನ ಸವಾರರು ಸಂಚಾರಿ ನಿಯಮ ಪಾಲನೆ ಮಾಡದೇ ಇರುವುದು, ವೇಗವಾಗಿ, ಅಡ್ಡಾದಿಡ್ಡಿಯಾಗಿ, ಅಜಾಗರೂಕವಾಗಿ, ಬೈಕ್ ಸವಾರರು ಹೆಲ್ಮೆಟ್ ಹಾಕದೇ, ಕಾರು ಚಾಲಕರು ಸೀಟ್ ಬೆಲ್ಟ್ ಹಾಕದೇ ವಾಹನ ಚಾಲನೆ ಮಾಡುವುದರಿಂದ. ಅದೇರೀತಿ ಸಂಬಂಧಿಸಿದ ಇಲಾಖೆಗಳಿಂದ ನಡೆಸಲಾಗುವ ಅವೈಜ್ಞಾನಿಕ ರಸ್ತೆ ಅಭಿವೃದ್ಧಿ ಕಾಮಗಾರಿ, ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳು, ರಸ್ತೆ ಇಕ್ಕೆಲಗಳಲ್ಲಿ ತಲೆಎತ್ತಿರುವ ಅಂಗಡಿಗಳು ಸೇರಿದಂತೆ ಇರತೆ ಕಾರಣಗಳಿದಿಂದಾಗಿ ಅಪಘಾತಗಳು ಸಂಭವಿಸುತ್ತವೆ.

ಗುರುವಾರ ಬೆಳಗ್ಗೆ ಮಗಳನ್ನು ಶಾಲೆಗೆ ಬಿಡಲು ಬೈಕ್ ನಲ್ಲಿ ಬಂದಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ತಂದೆ ಸಾವನಪ್ಪಿದ್ದು, ಮಗು ಜೀವನ್ಮರಣ ನಡುವೆ ಹೋರಾಟ ನಡೆಸುವ ಶೋಚನೀಯ ಸ್ಥಿತಿ ಎದುರಾಗಿರುವ ಹಿನ್ನೆಲೆ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಸದಸ್ಯರು ನಗರ ಠಾಣೆಗೆ ಭೇಟಿ ನೀಡಿ ಅಪಘಾತಗಳನ್ನು ನಿಯಂತ್ರಣ ಮಾಡುವ ಮುನ್ನೆಚ್ಚರಿಕೆ ಕ್ರಮಗಳನ್ನು ಶೀಘ್ರವಾಗಿ ಕೈಗೊಳ್ಳುವಂತೆ ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಪ್ರೀತಂ ಶ್ರೇಯಕರ ಅವರಿಗೆ ಮನವಿ ಮಾಡಲಾಗಿದೆ.

ನಗರದಲ್ಲಿ ಪ್ರತಿನಿತ್ಯ ಡಿಕ್ರಾಸ್, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ (ಟಿ.ಬಿ.ಸರ್ಕಲ್), ಎಪಿಎಂಸಿ ಮಾರುಕಟ್ಟೆ ಮುಂಭಾಗ, ಖಾಸ್ ಬಾಗ್, ರೈಲ್ವೇ ಸ್ಟೇಷನ್, ಡೈರಿ ಸರ್ಕಲ್, ತಾಲೂಕು ಕಚೇರಿ ವೃತ್ತ, ಕೊಂಗಾಡಿಯಪ್ಪ ರಸ್ತೆ‌ಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ, ಇಂತಹ ಸ್ಥಳಗಳಲ್ಲಿ ಸಂಚಾರಿ ನಿಯಮ ಅಳವಡಿಕೆ, ಸಿಬ್ಬಂದಿ ನಿಯೋಜನೆ‌ ಮಾಡುವಂತೆ ಮನವಿ ಮಾಡಲಾಗಿದೆ. ಅದೇರೀತಿ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು ಅವರನ್ನು ಹತೋಟಿಗೆ ತರುವಂತೆ ಪೊಲೀಸ್ ಇಲಾಖೆಗೆ‌ ಸೂಚಿಸಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಪಿ.ಜಗನಾಥ್, ಅಪ್ಪಿ ವೆಂಕಟೇಶ್, ಬೈರೇಗೌಡ, ನಗರಸಭೆ ಸದಸ್ಯರಾದ ಆನಂದ್, ನಾಗರಾಜ್, ಶಿವು, ನಗರಸಭೆ ಸದಸ್ಯ ಶಿವಶಂಕರ್, ಮುಖಂಡರಾದ ಆದಿತ್ಯ ನಾಗೇಶ್, ಶ್ರೀನಗರ ಬಶೀರ್, ಮುನಿರಾಜು, ಆಂಜನಮೂರ್ತಿ, ಜಗದೀಶ್ ರೆಡ್ಡಿ, ಮುಖಂಡರಾದ ಮುತ್ತಣ್ಣ, ಜವಾಜಿ ರಾಜೇಶ್, ಮಾರಪ್ಪ, ಅಶೋಕ್, ಅಂಬರೀಶ್, ರಾಮಚಂದ್ರ ರೆಡ್ಡಿ ಸೇರಿದಂತೆ ಮತ್ತಿತರರಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

9 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

20 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

21 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

21 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

23 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago