ಸರ್ವಧರ್ಮ ಸಮನ್ವಯ ಸಾರುವ ನಿಟ್ಟಿನಲ್ಲಿ ಗೌರಿ ಗಣೇಶ ಹಬ್ಬವನ್ನು ಆಚರಿಸಬೇಕು, ಖಾಸಗಿ, ಸರ್ಕಾರಿ ಜಾಗದಲ್ಲಿ ಪ್ರತಿಷ್ಠಾಪನೆ ಮಾಡಲು ಸಂಬಂಧಿಸಿದ ಗ್ರಾಮ ಪಂಚಾಯಿತಿ ವತಿಯಿಂದ ಹಾಗೂ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯಬೇಕು ಎಂದು ಡಿವೈಎಸ್ಪಿ ರವಿ ಪಿ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಉಪವಿಭಾಗದ ವತಿಯಿಂದ ಗೌರಿ ಗಣೇಶ ಹಬ್ಬದ ಪ್ರಯುಕ್ತ ಡಿವೈಎಸ್ ಪಿ ರವಿ.ಪಿ ಅವರ ನೇತೃತ್ವದಲ್ಲಿ ಶಾಂತಿ ಸಭೆಯನ್ನು ನಗರದ ಬಸವ ಭವನದಲ್ಲಿ ಆಯೋಜನೆ ಮಾಡಲಾಗಿತ್ತು. ಈ ಸಭೆಯಲ್ಲಿ ಮಾತನಾಡಿದರು.
ಗಣೇಶ ಮೂರ್ತಿಯನ್ನು ಸಾರ್ವಜನಿಕ ಸ್ಥಳಗಳಲ್ಲಿ 4ಅಡಿ ಎತ್ತರ ಮೀರದಂತೆ ಹಾಗೂ ಮನೆಗಳಲ್ಲಿ 2ಅಡಿ ಎತ್ತರ ಮೀರದಂತೆ ಪ್ರತಿಷ್ಠಾಪಿಸಬೇಕು, ಮೆರವಣಿಗೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಕಾನೂನು ಸುವ್ಯವಸ್ಥೆಗೆ ಯಾವುದೇ ರೀತಿಯಲ್ಲಿ ಭಂಗವನ್ನುಂಟು ಮಾಡದಂತೆ ಹಬ್ಬವನ್ನು ಶಾಂತ ರೀತಿಯಲ್ಲಿ ಆಚರಿಸಬೇಕು ಎಂದು ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್ ತಿಳಿಸಿದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…