ನಗರದಲ್ಲಿ ಚಿಪ್ಪು ಹಂದಿ ಪ್ರತ್ಯಕ್ಷ: ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಿದ ಅಗ್ನಿ‌ಶಾಮಕ ದಳದ ಸಿಬ್ಬಂದಿ

ನಗರದ ಹೊರವಲಯದಲ್ಲಿರುವ ಅಗ್ನಿ ಶಾಮಕ ಠಾಣೆ ಬಳಿ ದಿಢೀರನೆ ಅಪರೂಪದ ಚಿಪ್ಪು ಹಂದಿ ಪ್ರತ್ಯಕ್ಷವಾಗಿದೆ. ಇದನ್ನು ಗಮನಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ನಡೆದಿದೆ.

ಸುಮಾರು 10 ರಿಂದ 12 ವರ್ಷದ ವಯಸ್ಸಿನ ಚಿಪ್ಪು ಹಂದಿ ಇದಾಗಿದ್ದು, ಇಂತಹ ಪ್ರಾಣಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಅಪರೂಪವಾಗಿದೆ.

ಇದು ಸಾಮಾನ್ಯವಾಗಿ ಉಷ್ಣ ವಲಯದ ದೇಶಗಳಾದ ಆಫ್ರಿಕಾದಲ್ಲಿ ಕಾಣಿಸುತ್ತದೆ. ಇವುಗಳಿಗೆ ತಮ್ಮ ಚರ್ಮದ ಮೇಲೆ ಅಗಲವಾದ ಚಿಪ್ಪುಗಳಿವೆ. ಮರದ ಪೊಟರೆಗಳಲ್ಲಿ ಮತ್ತು ಮಣ್ಣಿನಲ್ಲಿ ಜೀವಿಸುತ್ತವೆ.

ಇವುಗಳು ಇರುವೆ ಮತ್ತು ಗೆದ್ದಲುಗಳನ್ನು ತಿಂದು ಬದುಕುತ್ತವೆ. ಉದ್ದವಾದ ನಾಲಗೆ ಹೊಂದಿದ್ದು, ಒಂದು ಬಾರಿಗೆ 1 ರಿಂದ 3 ಮರಿಗಳಿಗೆ ಜನ್ಮ ನೀಡುತ್ತದೆ.

ದೇಹವು ಪ್ರಬಲ, ಮೊನಚಾದ ಹಾಗೂ ಅತಿಕ್ರಮಿಸುವ ಮಾಪಕಗಳಿಂದ ಒಳಗೊಂಡಿದೆ. ಈ ಅತಿಕ್ರಮಿಸುವ ಮಾಪಕಗಳು ಉದ್ದುದ್ದವಾದ ಸಾಲುಗಳಲ್ಲಿ ವ್ಯವಸ್ಥಿತಗೊಂಡಿದೆ. ತಲೆಯು ಸಣ್ಣದಾಗಿದ್ದು, ಚೂಪಾದ ಮುಖ ಇದೆ. ಈ ಪ್ರಾಣಿಗಳಿಗೆ ಹಲ್ಲು ಇರುವುದಿಲ್ಲ. ಕಣ್ಣು ಹಾಗೂ ಮೂಗು ಸಣ್ಣದಾಗಿದೆ. ನಾಲಗೆಯು ಗಮನಾರ್ಹವಾಗಿ ಉದ್ದ, ಜಿಗುಟಾಗಿದೆ. ಕೈ, ಕಾಲುಗಳಲ್ಲಿ ಬಲವಾದ ಬಾಗಿದ ಉಗುರುಗಳಿವೆ. ಮುಂದಿನ ಉಗುರುಗಳು ಬಿಲವನ್ನು ತೋಡಲು ಹಾಗೂ ಗೆದ್ದಲು ಗೂಡುಗಳನ್ನು ಹರಿದು ಹಾಕಲು ಉಪಯೊಗಿಸುತ್ತವೆ. ಈ ಪ್ರಾಣಿಗಳ ಮೇಲೆ ದಾಳಿ ನಡೆಸಿದಾಗ ಅವುಗಳು ಚೆಂಡುವಿನ ಆಕಾರ ತಾಳಿ ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತವೆ.

ಅರಣ್ಯನಾಶದಿಂದಾಗಿ ಇವು ಈಗ ವಿನಾಶದ ಅಂಚಿನಲ್ಲಿವೆ.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

39 minutes ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

1 hour ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

2 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

2 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

4 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

6 hours ago