ನಗರದಲ್ಲಿ ಚಿಪ್ಪು ಹಂದಿ ಪ್ರತ್ಯಕ್ಷ: ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಿದ ಅಗ್ನಿ‌ಶಾಮಕ ದಳದ ಸಿಬ್ಬಂದಿ

ನಗರದ ಹೊರವಲಯದಲ್ಲಿರುವ ಅಗ್ನಿ ಶಾಮಕ ಠಾಣೆ ಬಳಿ ದಿಢೀರನೆ ಅಪರೂಪದ ಚಿಪ್ಪು ಹಂದಿ ಪ್ರತ್ಯಕ್ಷವಾಗಿದೆ. ಇದನ್ನು ಗಮನಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ನಡೆದಿದೆ.

ಸುಮಾರು 10 ರಿಂದ 12 ವರ್ಷದ ವಯಸ್ಸಿನ ಚಿಪ್ಪು ಹಂದಿ ಇದಾಗಿದ್ದು, ಇಂತಹ ಪ್ರಾಣಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಅಪರೂಪವಾಗಿದೆ.

ಇದು ಸಾಮಾನ್ಯವಾಗಿ ಉಷ್ಣ ವಲಯದ ದೇಶಗಳಾದ ಆಫ್ರಿಕಾದಲ್ಲಿ ಕಾಣಿಸುತ್ತದೆ. ಇವುಗಳಿಗೆ ತಮ್ಮ ಚರ್ಮದ ಮೇಲೆ ಅಗಲವಾದ ಚಿಪ್ಪುಗಳಿವೆ. ಮರದ ಪೊಟರೆಗಳಲ್ಲಿ ಮತ್ತು ಮಣ್ಣಿನಲ್ಲಿ ಜೀವಿಸುತ್ತವೆ.

ಇವುಗಳು ಇರುವೆ ಮತ್ತು ಗೆದ್ದಲುಗಳನ್ನು ತಿಂದು ಬದುಕುತ್ತವೆ. ಉದ್ದವಾದ ನಾಲಗೆ ಹೊಂದಿದ್ದು, ಒಂದು ಬಾರಿಗೆ 1 ರಿಂದ 3 ಮರಿಗಳಿಗೆ ಜನ್ಮ ನೀಡುತ್ತದೆ.

ದೇಹವು ಪ್ರಬಲ, ಮೊನಚಾದ ಹಾಗೂ ಅತಿಕ್ರಮಿಸುವ ಮಾಪಕಗಳಿಂದ ಒಳಗೊಂಡಿದೆ. ಈ ಅತಿಕ್ರಮಿಸುವ ಮಾಪಕಗಳು ಉದ್ದುದ್ದವಾದ ಸಾಲುಗಳಲ್ಲಿ ವ್ಯವಸ್ಥಿತಗೊಂಡಿದೆ. ತಲೆಯು ಸಣ್ಣದಾಗಿದ್ದು, ಚೂಪಾದ ಮುಖ ಇದೆ. ಈ ಪ್ರಾಣಿಗಳಿಗೆ ಹಲ್ಲು ಇರುವುದಿಲ್ಲ. ಕಣ್ಣು ಹಾಗೂ ಮೂಗು ಸಣ್ಣದಾಗಿದೆ. ನಾಲಗೆಯು ಗಮನಾರ್ಹವಾಗಿ ಉದ್ದ, ಜಿಗುಟಾಗಿದೆ. ಕೈ, ಕಾಲುಗಳಲ್ಲಿ ಬಲವಾದ ಬಾಗಿದ ಉಗುರುಗಳಿವೆ. ಮುಂದಿನ ಉಗುರುಗಳು ಬಿಲವನ್ನು ತೋಡಲು ಹಾಗೂ ಗೆದ್ದಲು ಗೂಡುಗಳನ್ನು ಹರಿದು ಹಾಕಲು ಉಪಯೊಗಿಸುತ್ತವೆ. ಈ ಪ್ರಾಣಿಗಳ ಮೇಲೆ ದಾಳಿ ನಡೆಸಿದಾಗ ಅವುಗಳು ಚೆಂಡುವಿನ ಆಕಾರ ತಾಳಿ ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತವೆ.

ಅರಣ್ಯನಾಶದಿಂದಾಗಿ ಇವು ಈಗ ವಿನಾಶದ ಅಂಚಿನಲ್ಲಿವೆ.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

8 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

8 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

11 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

19 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

21 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago