ನಗರದ ಹೊರವಲಯದಲ್ಲಿರುವ ಅಗ್ನಿ ಶಾಮಕ ಠಾಣೆ ಬಳಿ ದಿಢೀರನೆ ಅಪರೂಪದ ಚಿಪ್ಪು ಹಂದಿ ಪ್ರತ್ಯಕ್ಷವಾಗಿದೆ. ಇದನ್ನು ಗಮನಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ನಡೆದಿದೆ.
ಸುಮಾರು 10 ರಿಂದ 12 ವರ್ಷದ ವಯಸ್ಸಿನ ಚಿಪ್ಪು ಹಂದಿ ಇದಾಗಿದ್ದು, ಇಂತಹ ಪ್ರಾಣಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಅಪರೂಪವಾಗಿದೆ.
ಇದು ಸಾಮಾನ್ಯವಾಗಿ ಉಷ್ಣ ವಲಯದ ದೇಶಗಳಾದ ಆಫ್ರಿಕಾದಲ್ಲಿ ಕಾಣಿಸುತ್ತದೆ. ಇವುಗಳಿಗೆ ತಮ್ಮ ಚರ್ಮದ ಮೇಲೆ ಅಗಲವಾದ ಚಿಪ್ಪುಗಳಿವೆ. ಮರದ ಪೊಟರೆಗಳಲ್ಲಿ ಮತ್ತು ಮಣ್ಣಿನಲ್ಲಿ ಜೀವಿಸುತ್ತವೆ.
ಇವುಗಳು ಇರುವೆ ಮತ್ತು ಗೆದ್ದಲುಗಳನ್ನು ತಿಂದು ಬದುಕುತ್ತವೆ. ಉದ್ದವಾದ ನಾಲಗೆ ಹೊಂದಿದ್ದು, ಒಂದು ಬಾರಿಗೆ 1 ರಿಂದ 3 ಮರಿಗಳಿಗೆ ಜನ್ಮ ನೀಡುತ್ತದೆ.
ದೇಹವು ಪ್ರಬಲ, ಮೊನಚಾದ ಹಾಗೂ ಅತಿಕ್ರಮಿಸುವ ಮಾಪಕಗಳಿಂದ ಒಳಗೊಂಡಿದೆ. ಈ ಅತಿಕ್ರಮಿಸುವ ಮಾಪಕಗಳು ಉದ್ದುದ್ದವಾದ ಸಾಲುಗಳಲ್ಲಿ ವ್ಯವಸ್ಥಿತಗೊಂಡಿದೆ. ತಲೆಯು ಸಣ್ಣದಾಗಿದ್ದು, ಚೂಪಾದ ಮುಖ ಇದೆ. ಈ ಪ್ರಾಣಿಗಳಿಗೆ ಹಲ್ಲು ಇರುವುದಿಲ್ಲ. ಕಣ್ಣು ಹಾಗೂ ಮೂಗು ಸಣ್ಣದಾಗಿದೆ. ನಾಲಗೆಯು ಗಮನಾರ್ಹವಾಗಿ ಉದ್ದ, ಜಿಗುಟಾಗಿದೆ. ಕೈ, ಕಾಲುಗಳಲ್ಲಿ ಬಲವಾದ ಬಾಗಿದ ಉಗುರುಗಳಿವೆ. ಮುಂದಿನ ಉಗುರುಗಳು ಬಿಲವನ್ನು ತೋಡಲು ಹಾಗೂ ಗೆದ್ದಲು ಗೂಡುಗಳನ್ನು ಹರಿದು ಹಾಕಲು ಉಪಯೊಗಿಸುತ್ತವೆ. ಈ ಪ್ರಾಣಿಗಳ ಮೇಲೆ ದಾಳಿ ನಡೆಸಿದಾಗ ಅವುಗಳು ಚೆಂಡುವಿನ ಆಕಾರ ತಾಳಿ ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತವೆ.
ಅರಣ್ಯನಾಶದಿಂದಾಗಿ ಇವು ಈಗ ವಿನಾಶದ ಅಂಚಿನಲ್ಲಿವೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…