ನಗರದ ಹೊರವಲಯದಲ್ಲಿರುವ ಅಗ್ನಿ ಶಾಮಕ ಠಾಣೆ ಬಳಿ ದಿಢೀರನೆ ಅಪರೂಪದ ಚಿಪ್ಪು ಹಂದಿ ಪ್ರತ್ಯಕ್ಷವಾಗಿದೆ. ಇದನ್ನು ಗಮನಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ನಡೆದಿದೆ.
ಸುಮಾರು 10 ರಿಂದ 12 ವರ್ಷದ ವಯಸ್ಸಿನ ಚಿಪ್ಪು ಹಂದಿ ಇದಾಗಿದ್ದು, ಇಂತಹ ಪ್ರಾಣಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಅಪರೂಪವಾಗಿದೆ.
ಇದು ಸಾಮಾನ್ಯವಾಗಿ ಉಷ್ಣ ವಲಯದ ದೇಶಗಳಾದ ಆಫ್ರಿಕಾದಲ್ಲಿ ಕಾಣಿಸುತ್ತದೆ. ಇವುಗಳಿಗೆ ತಮ್ಮ ಚರ್ಮದ ಮೇಲೆ ಅಗಲವಾದ ಚಿಪ್ಪುಗಳಿವೆ. ಮರದ ಪೊಟರೆಗಳಲ್ಲಿ ಮತ್ತು ಮಣ್ಣಿನಲ್ಲಿ ಜೀವಿಸುತ್ತವೆ.
ಇವುಗಳು ಇರುವೆ ಮತ್ತು ಗೆದ್ದಲುಗಳನ್ನು ತಿಂದು ಬದುಕುತ್ತವೆ. ಉದ್ದವಾದ ನಾಲಗೆ ಹೊಂದಿದ್ದು, ಒಂದು ಬಾರಿಗೆ 1 ರಿಂದ 3 ಮರಿಗಳಿಗೆ ಜನ್ಮ ನೀಡುತ್ತದೆ.
ದೇಹವು ಪ್ರಬಲ, ಮೊನಚಾದ ಹಾಗೂ ಅತಿಕ್ರಮಿಸುವ ಮಾಪಕಗಳಿಂದ ಒಳಗೊಂಡಿದೆ. ಈ ಅತಿಕ್ರಮಿಸುವ ಮಾಪಕಗಳು ಉದ್ದುದ್ದವಾದ ಸಾಲುಗಳಲ್ಲಿ ವ್ಯವಸ್ಥಿತಗೊಂಡಿದೆ. ತಲೆಯು ಸಣ್ಣದಾಗಿದ್ದು, ಚೂಪಾದ ಮುಖ ಇದೆ. ಈ ಪ್ರಾಣಿಗಳಿಗೆ ಹಲ್ಲು ಇರುವುದಿಲ್ಲ. ಕಣ್ಣು ಹಾಗೂ ಮೂಗು ಸಣ್ಣದಾಗಿದೆ. ನಾಲಗೆಯು ಗಮನಾರ್ಹವಾಗಿ ಉದ್ದ, ಜಿಗುಟಾಗಿದೆ. ಕೈ, ಕಾಲುಗಳಲ್ಲಿ ಬಲವಾದ ಬಾಗಿದ ಉಗುರುಗಳಿವೆ. ಮುಂದಿನ ಉಗುರುಗಳು ಬಿಲವನ್ನು ತೋಡಲು ಹಾಗೂ ಗೆದ್ದಲು ಗೂಡುಗಳನ್ನು ಹರಿದು ಹಾಕಲು ಉಪಯೊಗಿಸುತ್ತವೆ. ಈ ಪ್ರಾಣಿಗಳ ಮೇಲೆ ದಾಳಿ ನಡೆಸಿದಾಗ ಅವುಗಳು ಚೆಂಡುವಿನ ಆಕಾರ ತಾಳಿ ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತವೆ.
ಅರಣ್ಯನಾಶದಿಂದಾಗಿ ಇವು ಈಗ ವಿನಾಶದ ಅಂಚಿನಲ್ಲಿವೆ.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…