ನಗರದಲ್ಲಿ ಚಿಪ್ಪು ಹಂದಿ ಪ್ರತ್ಯಕ್ಷ: ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಿದ ಅಗ್ನಿ‌ಶಾಮಕ ದಳದ ಸಿಬ್ಬಂದಿ

ನಗರದ ಹೊರವಲಯದಲ್ಲಿರುವ ಅಗ್ನಿ ಶಾಮಕ ಠಾಣೆ ಬಳಿ ದಿಢೀರನೆ ಅಪರೂಪದ ಚಿಪ್ಪು ಹಂದಿ ಪ್ರತ್ಯಕ್ಷವಾಗಿದೆ. ಇದನ್ನು ಗಮನಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ನಡೆದಿದೆ.

ಸುಮಾರು 10 ರಿಂದ 12 ವರ್ಷದ ವಯಸ್ಸಿನ ಚಿಪ್ಪು ಹಂದಿ ಇದಾಗಿದ್ದು, ಇಂತಹ ಪ್ರಾಣಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಅಪರೂಪವಾಗಿದೆ.

ಇದು ಸಾಮಾನ್ಯವಾಗಿ ಉಷ್ಣ ವಲಯದ ದೇಶಗಳಾದ ಆಫ್ರಿಕಾದಲ್ಲಿ ಕಾಣಿಸುತ್ತದೆ. ಇವುಗಳಿಗೆ ತಮ್ಮ ಚರ್ಮದ ಮೇಲೆ ಅಗಲವಾದ ಚಿಪ್ಪುಗಳಿವೆ. ಮರದ ಪೊಟರೆಗಳಲ್ಲಿ ಮತ್ತು ಮಣ್ಣಿನಲ್ಲಿ ಜೀವಿಸುತ್ತವೆ.

ಇವುಗಳು ಇರುವೆ ಮತ್ತು ಗೆದ್ದಲುಗಳನ್ನು ತಿಂದು ಬದುಕುತ್ತವೆ. ಉದ್ದವಾದ ನಾಲಗೆ ಹೊಂದಿದ್ದು, ಒಂದು ಬಾರಿಗೆ 1 ರಿಂದ 3 ಮರಿಗಳಿಗೆ ಜನ್ಮ ನೀಡುತ್ತದೆ.

ದೇಹವು ಪ್ರಬಲ, ಮೊನಚಾದ ಹಾಗೂ ಅತಿಕ್ರಮಿಸುವ ಮಾಪಕಗಳಿಂದ ಒಳಗೊಂಡಿದೆ. ಈ ಅತಿಕ್ರಮಿಸುವ ಮಾಪಕಗಳು ಉದ್ದುದ್ದವಾದ ಸಾಲುಗಳಲ್ಲಿ ವ್ಯವಸ್ಥಿತಗೊಂಡಿದೆ. ತಲೆಯು ಸಣ್ಣದಾಗಿದ್ದು, ಚೂಪಾದ ಮುಖ ಇದೆ. ಈ ಪ್ರಾಣಿಗಳಿಗೆ ಹಲ್ಲು ಇರುವುದಿಲ್ಲ. ಕಣ್ಣು ಹಾಗೂ ಮೂಗು ಸಣ್ಣದಾಗಿದೆ. ನಾಲಗೆಯು ಗಮನಾರ್ಹವಾಗಿ ಉದ್ದ, ಜಿಗುಟಾಗಿದೆ. ಕೈ, ಕಾಲುಗಳಲ್ಲಿ ಬಲವಾದ ಬಾಗಿದ ಉಗುರುಗಳಿವೆ. ಮುಂದಿನ ಉಗುರುಗಳು ಬಿಲವನ್ನು ತೋಡಲು ಹಾಗೂ ಗೆದ್ದಲು ಗೂಡುಗಳನ್ನು ಹರಿದು ಹಾಕಲು ಉಪಯೊಗಿಸುತ್ತವೆ. ಈ ಪ್ರಾಣಿಗಳ ಮೇಲೆ ದಾಳಿ ನಡೆಸಿದಾಗ ಅವುಗಳು ಚೆಂಡುವಿನ ಆಕಾರ ತಾಳಿ ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತವೆ.

ಅರಣ್ಯನಾಶದಿಂದಾಗಿ ಇವು ಈಗ ವಿನಾಶದ ಅಂಚಿನಲ್ಲಿವೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

6 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

7 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

8 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

8 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

12 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

14 hours ago